Andolana originals

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ

ಎಚ್. ಎಸ್. ದಿನೇಶ್‌ಕುಮಾರ್

ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ ಕಸದ ರಾಶಿ.., ಮುರಿದು ಬಿದ್ದಿರುವ ಆಸನಗಳು… ಇದು ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಮಂಚೇಗೌಡನಕೊಪ್ಪಲು ಸ್ಮಶಾನದ ದುಸ್ಥಿತಿ. ಇಲ್ಲಿನ ಎಲ್ಲ ವ್ಯವಸ್ಥೆಗಳೂ ಅಧ್ವಾನಗೊಂಡಿವೆ. ಜನರು ಸ್ಮಶಾನವನ್ನು ಕಸವನ್ನು ಸುರಿಯುವ ತಾಣವಾಗಿಸಿಕೊಂಡಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಇರುವ ಸ್ಮಶಾನಗಳು ಉತ್ತಮ ಸ್ಥಿತಿಯಲ್ಲಿ ಇರಬೇಕು. ತಮ್ಮ ಬಂಧು, ಬಳಗದಲ್ಲಿ ಯಾರಾದರೂ ಮೃತಪಟ್ಟಲ್ಲಿ ಅಂತ್ಯಸಂಸ್ಕಾರಕ್ಕೆ ಬರುವವರಿಗೆ ಸ್ಮಶಾನದ ಆವರಣದಲ್ಲಿ ಉತ್ತಮ ವಾತಾವರಣವಿರಬೇಕು ಎಂದು ಎಲ್ಲರೂ ಬಯಸುತ್ತಾರೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ಕೂಡ ಕೆಲಸ ನಿರ್ವಹಿಸಬೇಕು. ಸ್ಮಶಾನಗಳ ನಿರ್ವಹಣೆಗೆಂದು ಜನರು ಕಟ್ಟುವ ತೆರಿಗೆಯಲ್ಲಿ ಪ್ರತ್ಯೇಕ ಹಣವನ್ನು ಪಡೆಯಲಾಗುತ್ತದೆ. ಈ ಹಣ ಯಾವುದಕ್ಕೆ ಬಳಕೆಯಾಗುತ್ತದೆ ಎಂಬುದು ಗೊತ್ತಾಗುತ್ತಿಲ್ಲ.

ಮೃತರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವವರು ಇಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯಕ್ಕೆ ತೆರಳಿದರಂತೂ ಜನರು ವಾಂತಿ ಮಾಡುವುದು ಗ್ಯಾರಂಟಿ ಎಂಬ ಸ್ಥಿತಿ ಇದೆ. ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿರುವ ಈ ಸ್ಮಶಾನ ಬಡಾವಣೆಯ ಮಧ್ಯಭಾಗದಲ್ಲಿದೆ. ಇದನ್ನು ಜನಸ್ನೇಹಿಯಾಗಿ ಹಾಗೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬುದು ಸ್ಥಳೀಯರ ಆಶಯ. ಆದರೆ, ಅಧಿಕಾರಿ ಗಳದ್ದು ಮಾತ್ರ ಜಾಣ ಕುರುಡುತನವಾಗಿದೆ.

ಸ್ಮಶಾನ ತ್ಯಾಜ್ಯ ಸುರಿಯುವ ತಾಣ
ರಾತ್ರಿಯಾದರೆ ಸಾಕು ಇಲ್ಲಿ ಕಸ ಸುರಿಯುವವರ ಕಾಟ ಹೆಚ್ಚುತ್ತದೆ. ಆಟೋ, ಮಿನಿ ಗೂಡ್ಸ್ ವಾಹನಗಳಲ್ಲಿ ತ್ಯಾಜ್ಯವನ್ನು ತಂದು ಇಲ್ಲಿ ಸುರಿಯಲಾಗುತ್ತದೆ. ಕಾವಲುಗಾರರು ಇಲ್ಲದ ಕಾರಣ ಇಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದ್ದಾರೆ ಎಂದು ನಿವಾಸಿಗಳು ಆರೋಪಿಸುತ್ತಾರೆ.

ಶುಚಿತ್ವವಿಲ್ಲದ ಶೌಚಾಲಯ
ಇನ್ನು ಇಲ್ಲಿ ನೀರಿನ ಟ್ಯಾಂಕ್ ಸಮೇತ ಉತ್ತಮ ಶೌಚಾಲಯವಿದೆ. ಆದರೆ, ಸೂಕ್ತ ನಿರ್ವಹಣೆ ಇಲ್ಲದ ಕಾರಣ ಜನರು ಅಲ್ಲಿಗೆ ಹೋಗದ ಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯಗಳನ್ನು ಸ್ವಚ್ಛಗೊಳಿಸಿ ವರ್ಷಗಳೇ ಕಳೆದಿವೆ.

 

ಮುರಿದು ಬಿದ್ದಿರುವ ಆಸನಗಳು

ಅಂತ್ಯಸಂಸ್ಕಾರಕ್ಕೆಂದು ಬಂದವರು ಕುಳಿತುಕೊಳ್ಳಲು ಆಸನಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಅವುಗಳಲ್ಲಿ ಬಹುತೇಕ ಮುರಿದು ಬಿದ್ದಿವೆ. ಇನ್ನು ಶವ ಸಾಗಿಸಲು ಬಳಸಿದ ಹಾಸಿಗೆ, ತಂದು ಹಾಕಿರುವ ಕುಷನ್ ಕುರ್ಚಿಗಳು ಎಲ್ಲೆಂದರಲ್ಲಿ ಬಿದ್ದಿವೆ. ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಅಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಬೇಕಿದೆ ಎಂಬುದು ಪ್ರಜ್ಞಾವಂತ ಜನರ ಆಗ್ರಹವಾಗಿದೆ.

ಸ್ಮಶಾನ ದುಸ್ಥಿತಿಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿ ಅಧಿಕಾರಿಗಳನ್ನು ನಿಯಂತ್ರಿಸಲು ಯಾರಿಂದಲೂ ಆಗುವುದಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಬಡಾವಣೆಗಳಲ್ಲಿ ಸಂಗ್ರಹ ವಾಗುವ ಕಸದ ಮೂಲಕ ಅನಿಲ ಉತ್ಪಾದನೆ ಮಾಡುವ ಜೈವಿಕ ಅನಿಲ ಸ್ಥಾವರ ಯೋಜನೆ ನನೆಗುದಿಗೆ ಬಿದ್ದಿದೆ. ಆರಂಭವಾದಲ್ಲಿ ಇಲ್ಲಿಯೇ ಅನಿಲ ಹಾಗೂ ವಿದ್ಯುತ್‌ ಉತ್ಪಾದನೆ ಮಾಡಿದರೆ ಮೃತದೇಹಗಳ ಅಂತ್ಯಕ್ರಿಯೆಗೆ ಬಳಕೆ ಮಾಡಬಹುದು. ಇಂತಹ ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಜನಸ್ನೇಹಿಯಾಗಲಿದೆ. ಅಧಿಕಾರಿಗಳು ಇತ್ತ ಗಮನಹರಿಸಬೇಕು.

– ಪ್ರೇಮಾ ಶಂಕರೇಗೌಡ, ನಗರಪಾಲಿಕೆ ಮಾಜಿ ಸದಸ್ಯರು

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

5 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago