Andolana originals

ಇಂಡಿಗನತ್ತ ಪ್ರಕರಣ: ಆಂದೋಲನ ವರದಿ ಉಲ್ಲೇಖಿಸಿ ಮಾನವ ಹಕ್ಕು, ಮಕ್ಕಳ ಹಕ್ಕು, ಮಹಿಳಾ ಆಯೋಗಕ್ಕೆ ಮೈಸೂರಿನ ವಕೀಲ ದೂರು

ಮೈಸೂರು: ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟದ ಬಳಿಯ ಇಂಡಿಗನತ್ತ ಗ್ರಾಮದಲ್ಲಿನ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ವಿಚಾರಣೆಯ ನೆಪದಲ್ಲಿ ಪೊಲೀಸರು ಅಲ್ಲಿನ ಮಹಿಳೆಯರು, ವೃದ್ಧರು, ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಕೀಲ ಎನ್.ಪುನೀತ್ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ‘ಪುಟ್ಟಮ್ಮನಿಗೆ ಬೇಕಿದೆ ಚಿಕಿತ್ಸೆ, ಆಸ್ಪತ್ರೆಗೆ ಸೇರಿಸುವವರಿಲ್ಲ’, ‘ಮಿತಿ ಮೀರಿ ನಡೆದುಕೊಂಡರೇ ಪೊಲೀಸರು?’ ಸೇರಿದಂತೆ ವಿವಿಧ ಶೀರ್ಷಿಕೆಗಳಡಿ ‘ಆಂದೋಲನ’ ದಿನ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯನ್ನು ಉಲ್ಲೇಖಿಸಿರುವ ಅವರು ಚಾಮರಾಜನಗರ ಜಿಲ್ಲಾ ಪೊಲೀಸರು ಕಾನೂನಾತ್ಮಕವಾಗಿ ಹಾಗೂ ಪೊಲೀಸ್ ಕಾಯ್ದೆ ಅನ್ವಯ ಕರ್ತವ್ಯ ನಿರ್ವಹಿಸದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಅಜ್ಜ, ಅಜ್ಜಿಯೊಂದಿಗೆ ಅವರ ಜತೆಗಿದ್ದ ಮೂರೂವರೆ ವರ್ಷದ ಮಗುವನ್ನು ಕರೆದೊಯ್ದು 3 ದಿನಗಳ ಕಾಲ ಜೈಲಿನಲ್ಲಿರಿಸಿಕೊಂಡ ದೂರು ಕೇಳಿ ಬಂದಿದೆ. ಎಸ್ ಎಸ್‌ ಎಲ್‌ ಸಿ ಪರೀಕ್ಷಾ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕಿಯ ಮೇಲೆ ಕೈ ಮಾಡಿರುವ ಆರೋಪವೂ ಕೇಳಿ ಬಂದಿದೆ. ಇವು ಸಂವಿಧಾನದ ಕಲಂ 20 (ಅಪರಾಧಗಳ ಬಗ್ಗೆ ಅಪರಾಧಿಯೆಂದು ನಿರ್ಣಯಿಸುವ ಸಂಬಂಧದಲ್ಲಿ ಸಂರಕ್ಷಣೆ) ಮತ್ತು ಕಲಂ 21 (ಜೀವನ
ಮತ್ತು ವ್ಯಕ್ತಿ ಸ್ವಾತಂತ್ರ್ಯದ ಸಂರಕ್ಷಣೆ)ರ ತತ್ವಗಳಿಗೆ ವಿರುದ್ಧ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಆಯೋಗವು ಖುದ್ದು ಭೇಟಿ ನೀಡಿ ದೌರ್ಜನ್ಯಕ್ಕೊಳಗಾದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.

andolana

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

3 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

3 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

4 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

4 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

4 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

4 hours ago