Andolana originals

ಇಂಡಿಗನತ್ತ ಪ್ರಕರಣ: ಆಂದೋಲನ ವರದಿ ಉಲ್ಲೇಖಿಸಿ ಮಾನವ ಹಕ್ಕು, ಮಕ್ಕಳ ಹಕ್ಕು, ಮಹಿಳಾ ಆಯೋಗಕ್ಕೆ ಮೈಸೂರಿನ ವಕೀಲ ದೂರು

ಮೈಸೂರು: ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟದ ಬಳಿಯ ಇಂಡಿಗನತ್ತ ಗ್ರಾಮದಲ್ಲಿನ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ವಿಚಾರಣೆಯ ನೆಪದಲ್ಲಿ ಪೊಲೀಸರು ಅಲ್ಲಿನ ಮಹಿಳೆಯರು, ವೃದ್ಧರು, ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಕೀಲ ಎನ್.ಪುನೀತ್ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ‘ಪುಟ್ಟಮ್ಮನಿಗೆ ಬೇಕಿದೆ ಚಿಕಿತ್ಸೆ, ಆಸ್ಪತ್ರೆಗೆ ಸೇರಿಸುವವರಿಲ್ಲ’, ‘ಮಿತಿ ಮೀರಿ ನಡೆದುಕೊಂಡರೇ ಪೊಲೀಸರು?’ ಸೇರಿದಂತೆ ವಿವಿಧ ಶೀರ್ಷಿಕೆಗಳಡಿ ‘ಆಂದೋಲನ’ ದಿನ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯನ್ನು ಉಲ್ಲೇಖಿಸಿರುವ ಅವರು ಚಾಮರಾಜನಗರ ಜಿಲ್ಲಾ ಪೊಲೀಸರು ಕಾನೂನಾತ್ಮಕವಾಗಿ ಹಾಗೂ ಪೊಲೀಸ್ ಕಾಯ್ದೆ ಅನ್ವಯ ಕರ್ತವ್ಯ ನಿರ್ವಹಿಸದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಅಜ್ಜ, ಅಜ್ಜಿಯೊಂದಿಗೆ ಅವರ ಜತೆಗಿದ್ದ ಮೂರೂವರೆ ವರ್ಷದ ಮಗುವನ್ನು ಕರೆದೊಯ್ದು 3 ದಿನಗಳ ಕಾಲ ಜೈಲಿನಲ್ಲಿರಿಸಿಕೊಂಡ ದೂರು ಕೇಳಿ ಬಂದಿದೆ. ಎಸ್ ಎಸ್‌ ಎಲ್‌ ಸಿ ಪರೀಕ್ಷಾ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕಿಯ ಮೇಲೆ ಕೈ ಮಾಡಿರುವ ಆರೋಪವೂ ಕೇಳಿ ಬಂದಿದೆ. ಇವು ಸಂವಿಧಾನದ ಕಲಂ 20 (ಅಪರಾಧಗಳ ಬಗ್ಗೆ ಅಪರಾಧಿಯೆಂದು ನಿರ್ಣಯಿಸುವ ಸಂಬಂಧದಲ್ಲಿ ಸಂರಕ್ಷಣೆ) ಮತ್ತು ಕಲಂ 21 (ಜೀವನ
ಮತ್ತು ವ್ಯಕ್ತಿ ಸ್ವಾತಂತ್ರ್ಯದ ಸಂರಕ್ಷಣೆ)ರ ತತ್ವಗಳಿಗೆ ವಿರುದ್ಧ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಆಯೋಗವು ಖುದ್ದು ಭೇಟಿ ನೀಡಿ ದೌರ್ಜನ್ಯಕ್ಕೊಳಗಾದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.

andolana

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

57 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago