Andolana originals

ಮೈವಿವಿ: ಖಾಯಂ ಹುದ್ದೆಗಿಲ್ಲ ಗ್ಯಾರಂಟಿ

ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಅತಿಥಿ ಉಪನ್ಯಾಸಕರು 

ಕೆ. ಬಿ. ರಮೇಶನಾಯಕ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಶಕಗಳಿಂದ ಬೋಧಕರ ನೇಮಕಾತಿ ಪ್ರಕ್ರಿಯೆ ನಡೆಯದೆ ಖಾಯಂ ಬೋಧಕರ ಹುದ್ದೆಗಳಿಗಿಂತ ಖಾಲಿ ಹುದ್ದೆಗಳ ಸಂಖ್ಯೆಯೇ ಜಾಸ್ತಿಯಾಗಿದೆ.

ಏಪ್ರಿಲ್-ಮೇನಲ್ಲಿ ಮತ್ತಷ್ಟು ಅಧ್ಯಾಪಕರು ನಿವೃತ್ತಿ ಆಗುತ್ತಾರೆ. ಇದರಿಂದ ಖಾಯಂ ಅಧ್ಯಾಪಕರ ಸಂಖ್ಯೆ ೨೦೦ಕ್ಕಿಂತ ಕಡಿಮೆಯಾಗಲಿದೆ. ಇದು ವಿವಿ ಆಡಳಿತ ವಲಯದಲ್ಲಿ ಚಿಂತೆಗೀಡು ಮಾಡಿಸಿದೆ. ಒಂದು ದಶಕದಿಂದ ಬೋಧಕ -ಬೋಧಕೇತರ ಸಿಬ್ಬಂದಿ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡದ ಕಾರಣ ಅತಿಥಿ ಉಪನ್ಯಾಸಕರನ್ನೇ ನೇಮಿಸಿಕೊಂಡು ಬರುತ್ತಿರುವ ಪರಿಣಾಮ ಮುಂದೆ ವಿವಿಯ ಎಲ್ಲ ವಿಭಾಗಗಳಲ್ಲೂ ಖಾಯಂ ಬೋಧಕರಿಗಿಂತ ಅತಿಥಿ ಉಪನ್ಯಾಸಕರೇ ಹೆಚ್ಚಾಗುವ ವಾತಾವರಣ ನಿರ್ಮಾಣವಾಗಿದೆ.

ಇದರಿಂದಾಗಿ ತೀವ್ರ ಒತ್ತಡಕ್ಕೆ ಸಿಲುಕಿರುವ ಮೈಸೂರು ವಿವಿಯು ರಾಜ್ಯ ಸರ್ಕಾರಕ್ಕೆ ಪತ್ರದ ಮೇಲೆ ಪತ್ರ ಬರೆಯುತ್ತಿದ್ದರೂ ಸಕಾರಾತ್ಮಕವಾದ ಸ್ಪಂದನೆ ದೊರೆಯದೆ ಇರುವುದು ಕುಲಪತಿಗಳ ನಿದ್ದೆಗೆಡಿಸಿದೆ. ಮೈಸೂರು ವಿವಿಗೆ ದಶಕಗಳ ಹಿಂದೆ ಕೇಂದ್ರ ಸರ್ಕಾರ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಅನುದಾನ ದೊರೆಯುತ್ತಿತ್ತು. ಜತೆಗೆ ರಾಜ್ಯ ಸರ್ಕಾರ ಕೂಡ ವಿಶೇಷ ಒತ್ತು ನೀಡುತ್ತಲೇ ಬಂದಿತ್ತು. ಅದರಲ್ಲೂ ಖಾಯಂ ಬೋಧಕರಿಗೆ ಯುಜಿಸಿ ವೇತನ ದೊರೆಯುತ್ತಿತ್ತು. ಇದಲ್ಲದೆ ನುರಿತ ಅಧ್ಯಾಪಕರನ್ನು ಹೊಂದಿದ್ದರಿಂದ ಸಂಶೋಧನೆಗೆ ಕೋಟ್ಯಂತರ ರೂಪಾಯಿ ಬಿಡುಗಡೆಯಾಗುತ್ತಿತ್ತು.

ವಿವಿಗೆ ೬೬೪ ಹುದ್ದೆಗಳನ್ನು ಸೃಜಿಸಲಾಗಿದ್ದು, ಹಾಲಿ ೨೩೮ ಹುದ್ದೆಗಳು ಮಾತ್ರ ಭರ್ತಿಯಾಗಿವೆ; ೪೨೬ ಹುದ್ದೆಗಳು ಖಾಲಿ ಇವೆ. ಹೀಗಾಗಿ, ಪಿಜಿಯಲ್ಲಿ ೩೭೫, ಯುಜಿಯಲ್ಲಿ ೪೨೫ ಮಂದಿ ಸೇರಿದಂತೆ ೮೦೦ ಮಂದಿ ಯನ್ನು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸುವಂತಾಗಿದೆ. ಮತ್ತೊಂದು ಆತಂಕದ ಸಂಗತಿ ಎಂದರೆ ೮೧ ಅಧ್ಯಾಪಕ ಹುದ್ದೆಗಳಲ್ಲಿ ಕೇವಲ ಐದು ಸ್ಥಾನಗಳು ಮಾತ್ರ ಉಳಿದುಕೊಂಡಿದ್ದು, ಇದರಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಪಿಎಚ್. ಡಿ. ಪದವಿ ಬಯಸುವ ವಿದ್ಯಾರ್ಥಿಗಳಿಗೆ ಗೈಡ್‌ಗಳ ಕೊರತೆ ದೊಡ್ಡ ಮಟ್ಟದಲ್ಲಿ ಕಾಡಲು ಶುರುವಾಗಿದೆ.

ಜಿಲ್ಲೆಗೊಂದು ವಿವಿ ಪರಿಣಾಮ: ಮೈಸೂರು ವಿವಿಯನ್ನು ವಿಭಜಿಸಿ ಅಕ್ಕಪಕ್ಕದ ಜಿಲ್ಲೆಗಳಾದ ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ವಿವಿ ಸ್ಥಾಪನೆ ಮಾಡಲಾಗಿದೆ. ಇದರಿಂದ ಮೈಸೂರು ವಿವಿ ಕಿರಿದಾಯಿತು. ಪರಿಣಾಮ ೨೦೨೩-೨೪ರ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪ್ರವೇಶದಲ್ಲಿ ಕುಸಿತ ಕಂಡು ಬಂತು. ಪದವಿ ಹಾಗೂ ಪಿಜಿ ಎರಡೂ ಸೇರಿ ಸುಮಾರು ೧೦ ಸಾವಿರ ವಿದ್ಯಾರ್ಥಿಗಳ ಪ್ರವೇಶ ಕಡಿಮೆಯಾಯಿತು.

ಈ ವರ್ಷ ಕೇವಲ ಸ್ನಾತಕೋತ್ತರ ಪದವಿಯಲ್ಲೇ ೮ ಸಾವಿರ ವಿದ್ಯಾರ್ಥಿಗಳ ಕುಸಿತ ಕಂಡು ಬಂದಿದೆ. ಕಲಾ ವಿಭಾಗದ ಹಲವು ಕೋರ್ಸ್‌ಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಹಿಂದೇಟು ಹಾಕಿದ್ದಾರೆ. ಕೆಲವೊಂದು ಕೋರ್ಸ್‌ಗಳಿಗೆ ಇಬ್ಬರು, ಮೂವರು ಮಾತ್ರ ಪ್ರವೇಶ ಪಡೆದಿದ್ದಾರೆ. ಪ್ರವೇಶ ಕುಸಿತ ವಿವಿಯ ಆಂತರಿಕ ಸಂಪನ್ಮೂಲಕ್ಕೆ ಕೊಡಲಿ ಪೆಟ್ಟು ನೀಡಿದೆ. ಮೈಸೂರು ವಿವಿ ವ್ಯಾಪ್ತಿಯಲ್ಲಿ ಈ ಮೊದಲು ೨೩೨ ಕಾಲೇಜುಗಳಿದ್ದವು. ಆದರೀಗ ಜಿಲ್ಲೆಗೊಂದು ವಿವಿಯಿಂದ ಪರಿಣಾಮ ಮೈಸೂರು ವಿವಿ ವ್ಯಾಪ್ತಿ ಯಲ್ಲಿ ೧೧೧ ಕಾಲೇಜುಗಳು ಮಾತ್ರ ಇವೆ.

ಮೈಸೂರು ವಿವಿಯಲ್ಲಿ ೪೦೦(ಶೇ. ೭೬)ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಬ್ಯಾಕ್‌ಲಾಗ್ ಹುದ್ದೆ ಗಳನ್ನಾದರೂ ಭರ್ತಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದೆ. ಆದರೆ, ಅನುಮತಿ ಸಿಕ್ಕಿಲ್ಲ. ಸದ್ಯಕ್ಕೆ ವಿವಿ ತಾತ್ಕಾಲಿಕ ಬೋಧಕರಿಂದ ಉತ್ತಮವಾಗಿ ನಡೆ ಯುತ್ತಿದೆ. ಸಂಶೋಧನೆ ಹೆಚ್ಚಾಗಬೇಕಾದರೆ ಖಾಯಂ ಬೋಧಕರ ಅಗತ್ಯವಿದೆ. –ಪ್ರೊ. ಎನ್. ಕೆ. ಲೋಕನಾಥ್, ವಿವಿ ಕುಲಪತಿ

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

9 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

13 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago