Andolana originals

ನಾಗಮಂಗಲ ಪ್ರಕರಣ: ಪೂರ್ಣ ನಿಯೋಜಿತ ಕೃತ್ಯ; ವಿಜಯೇಂದ್ರ ಆರೋಪ

ಮಂಡ್ಯ: ಯುವಕರು ಶಾಂತಿಯುತವಾಗಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಅನ್ಯಕೋಮಿನವರು ಪೂರ್ವನಿಯೋಜಿತವಾಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದರು. ನಾಗಮಂಗಲದಲ್ಲಿ ಕೋಮುಗಲಭೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗಡಿಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ. ಎಲ್ಲೆಡೆಯು ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದರು. ಮಂಡ್ಯ ಜಿಲ್ಲೆಯು ಒಂದು ಕಾಲದಲ್ಲಿ ರೈತರ ಹೋರಾಟಕ್ಕೆ ಹೆಸರಾಗಿತ್ತು. ಆದರೆ, ಈಗ ಕೋಮುಗಲಭೆಗೆ ಹೆಸರಾಗುತ್ತಿರುವುದು

ಬೇಸರದ ಸಂಗತಿಯಾಗಿದೆ. ಇಷ್ಟೆಲ್ಲಾ ಘಟನೆ ಆಗುತ್ತಿದ್ದರೂ ಪೊಲೀಸರು ಮೂಖ ಪ್ರೇಕ್ಷಕರಾಗಿದ್ದಾರೆ. ಕಾಂಗ್ರೆಸ್ ಶಾಸಕರೇ ಮುಂದಿನ ದಿನಗಳಲ್ಲಿ ನಿಮ್ಮ ಮನೆಗಳಿಗೂ ಈ ದೇಶದ್ರೋಹಿಗಳು ನುಗ್ಗುತ್ತಾರೆ ಎಂದು ಎಚ್ಚರಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಮಾಜಿ ಸಚಿವ ಕೆ. ಸಿ. ನಾರಾಯಣಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಸುರೇಶ್‌ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಎನ್. ಎಸ್. ಇಂದ್ರೇಶ್, ಮುಖಂಡರಾದ ಡಾ. ಸಿದ್ದರಾಮಯ್ಯ, ಸಿ. ಟಿ. ಮಂಜುನಾಥ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು

ಕಿಡಿಗೇಡಿಗಳ ಕೃತ್ಯ: ಆರ್‌ ಅಶೋಕ್

ಮಂಡ್ಯ: ನಾಗಮಂಗಲದ ಘಟನೆಯು ಕಾನೂನನ್ನು ಕೈಗೆತ್ತಿಕೊಂಡ ಕೆಲ ಕಿಡಿಗೇಡಿಗಳ ಕೃತ್ಯ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ನಾಗಮಂಗಲದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯೂ ಗಣಪತಿ ವಿಚಾರಕ್ಕೆ ಇದೇ ಜಾಗದಲ್ಲಿ ಗಲಾಟೆಯಾಗಿರುವ ಕುರಿತು ಅಽಕಾರಿಗಳಿಗೆ, ಪೊಲೀಸರಿಗೆ ಮಾಹಿತಿ ಇರಲಿಲ್ಲವೆ? ಅಧಿಕಾರಿಗಳು ಮತ್ತು ಪೊಲೀಸರು ಕತ್ತೆ ಕಾಯುತ್ತಿದ್ದರೆ ಎಂದು ಪ್ರಶ್ನಿಸಿದರು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಇವೆಲ್ಲಾ ಕಾಂಗ್ರೆಸ್ಸಿನ ಪ್ರಚೋದನೆ ಇಲ್ಲದೇ ನಡೆಯಲು ಸಾಧ್ಯವಿಲ್ಲ ಎಂದರು. ಮಾಜಿ ಡಿಸಿಎಂ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಮಾತನಾಡಿ, ಮತಕ್ಕಾಗಿ ಕಾಂಗ್ರೆಸ್ಸಿಗರು ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಗಣೇಶನ ಉತ್ಸವ ನಮ್ಮ ಸಂಸ್ಕೃತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

5 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

8 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

8 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

8 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

11 hours ago