Andolana originals

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ

• ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಕರ್ನಾಟಕ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಕೆ.ಎಸ್. ನಾಗರತ್ನಮ್ಮ ಅವರು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಏಳು ಬಾರಿ ಶಾಸಕಿಯಾಗಿ, ಎರಡು ಬಾರಿ ಸಚಿವೆಯಾಗಿ, ವಿರೋಧಪಕ್ಷ ನಾಯಕಿಯಾಗಿ ಗುಂಡ್ಲು ಪೇಟೆ ಕ್ಷೇತ್ರದ ಕೆರೆಗಳ ನಿರ್ಮಾತೃವಾಗಿ ಮಾಡಿದ ಅಪಾರ ಅಭಿವೃದ್ಧಿ ಕೆಲಸಗಳಿಂದಾಗಿ ಇಂದಿಗೂ ಅವರನ್ನು ಜನರು ಪ್ರೀತಿಯಿಂದ ಅಮ್ಮ’ ಎಂದು ಕರೆಯುತ್ತಾರೆ.

ಅವರು ನಿಧನರಾಗಿ 32 ವರ್ಷ ಕಳೆದರೂ ಕಬ್ಬಹಳ್ಳಿಯಲ್ಲಿ ಅವರ ಸಮಾಧಿ ಇಂದಿಗೂ ಪೊದೆ, ಗಿಡಗಂಟಿಗಳ ನಡುವೆ ದುಸ್ಥಿತಿಯಲ್ಲಿ ರುವುದನ್ನು ನೋಡಿ ಜನರು ಮರುಗುತ್ತಿದ್ದರು.

ಕೆ. ಎಸ್. ನಾಗರತ್ಮರವರ ಸ್ಮಾರಕವು ಶಿಥಿಲವಾಗಿರುವುದರಿಂದ ಸದರಿ ಸ್ಮಾರಕವನ್ನು ಅಭಿವೃದ್ಧಿಪಡಿಸಲು 1 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಶಾಸಕ ಎಚ್. ಎಂ. ಗಣೇಶ್ ಪ್ರಸಾದ್ ಸರ್ಕಾರಕ್ಕೆ ಮನವಿ ಮಾಡಿದ ಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸೋದ್ಯಮ ಇಲಾಖೆಯ ಮೂಲಕ ಒಂದು ಕೋಟಿ ರೂ. ಅನುದಾನ ನೀಡಿದ್ದು, ಶಾಸಕರ ಕೋರಿಕೆಯಂತೆ ಕೆ. ಎಸ್. ನಾಗರತ್ನಮ್ಮರವರ ಸ್ಥಾರಕವನ್ನು ಅಭಿವೃದ್ಧಿಪಡಿಸಿ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ನಾಗರತ್ನಮ್ಮ ಅವರು ನಮ್ಮ ಕ್ಷೇತ್ರದ ಅತ್ಯಂತ ಪ್ರಭಾವಿ ಹಾಗೂ ಧೀಮಂತ ರಾಜಕಾರಣಿಯಾಗಿದ್ದರು. ತಾಲ್ಲೂಕಿಗೆ ಸೀಮಿತವಾಗದೆ ರಾಜ್ಯಮಟ್ಟದ ನಾಯಕರಾಗಿದ್ದರು. ಅವರ ರಾಜಕೀಯ ಹಾದಿ ಎಲ್ಲರಿಗೂ ಸ್ಫೂರ್ತಿ. ಅವರ ಹೆಸರು, ಆಡಳಿತ ವೈಖರಿಯ ಬಗ್ಗೆ ಕೇಳಿ ಬೆಳೆದವರು ನಾವು. ನಮ್ಮ ಅವಧಿಯಲ್ಲಿ ಅವರ ಸಮಾಧಿ ಸಾರಕವಾಗುತ್ತಿರುವುದು ಸಂತಸದ ವಿಚಾರ. ಹಣ ಬಿಡುಗಡೆಯಾಗಿದ್ದು, ಸ್ಮಾರಕ ಅಭಿವೃದ್ಧಿ ಮಾಡಿಯೇ ತೀರುತ್ತೇನೆ.

ಎಚ್. ಎಂ. ಗಣೇಶ್ ಪ್ರಸಾದ್, ಶಾಸಕ

ಸಮಾಧಿ ಅಭಿವೃದ್ಧಿ ಬಗ್ಗೆ ಧ್ವನಿ ಎತ್ತಿದ್ದೇ ನಾನು : ವಾಟಾಳ್
ಆಂದೋಲನ ದಿನಪತ್ರಿಕೆಯೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಅವರು, ನಾನು 1967ರಲ್ಲಿ ಮೊದಲ ಬಾರಿ ಶಾಸಕನಾಗಿದ್ದಾಗಿಂದಲೂ ಕೆ. ಎಸ್. ನಾಗರತ್ನಮ್ಮ ಪರಿಚಿತರು. ಅವರು ಧೀಮಂತ ನಾಯಕಿ, ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ಏಳು ಬಾರಿ ಶಾಸಕರಾಗಿ ಆಯ್ಕೆಯಾಗುವುದು ಅಷ್ಟು ಸುಲಭವಲ್ಲ. ಅವರು ನಿಧನರಾದಾಗಲೂ ನಾನು ಕಬ್ಬಹಳ್ಳಿ ಗ್ರಾಮಕ್ಕೆ ಹೋಗಿದ್ದೆ. ಅವರು ಅಗಲಿ 32 ವರ್ಷಗಳಾಗಿದ್ದರೂ ಸ್ಮಾರಕ ಮಾಡಲು ಆಗಿರಲಿಲ್ಲ. ಈ ವಿಚಾರವಾಗಿ ಏಳು ತಿಂಗಳ ಹಿಂದೆ ಮಾತನಾಡಿದ್ದೆ. ಇನ್ನೆರಡು ದಿನಗಳಲ್ಲಿ ಕಬ್ಬಹಳ್ಳಿಗೆ ಬಂದು ಪ್ರತಿಭಟನೆ ಮಾಡುವ ಬಗ್ಗೆ ಯೋಚಿಸಿದ್ದೆ. ಅಷ್ಟರಲ್ಲಿ ಸರ್ಕಾರ ಎಚ್ಚೆತ್ತು ಅನುದಾನ ಬಿಡುಗಡೆ ಮಾಡಿದೆ. ಆದಷ್ಟು ಬೇಗ ಸ್ಮಾರಕವಾಗಬೇಕು. ಎರಡು ದಿನಗಳಲ್ಲಿ ಕಬ್ಬಹಳ್ಳಿಗೆ ಬಂದು ದಿ. ನಾಗರತ್ನಮ್ಮ ಸಮಾಧಿ ವೀಕ್ಷಿಸಲಿದ್ದೇನೆ.
– ವಾಟಾಳ್ ನಾಗರಾಜು, ಕನ್ನಡಪರ ಹೋರಾಟಗಾರ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

2 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

2 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

3 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

19 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

22 hours ago