Andolana originals

ನಾಗರಹೊಳೆ: ಫೈರ್‌ಲೇನ್‌ ನಿರ್ಮಾಣ ಕಾರ್ಯಚುರುಕು

ಪ್ರಶಾಂತ್‌ ಎಸ್‌
ಮೈಸೂರು: ಈ ಬಾರಿ ಉತ್ತಮವಾಗಿ ಮಳೆ ಬಿದ್ದಿದ್ದರಿಂದ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿದ್ದು, ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ ಸೋಲಾರ್ ಪಂಪ್ ನಿಂದಾಗಿ ಕೆರೆ- ಕಟ್ಟೆ ಗಳಿಗೆ ನಿರಂತರವಾಗಿ ನೀರು ತುಂಬುತ್ತಿರು ವುದು ಹಾಗೂ ಉದ್ಯಾ ನವನದೊಳಗೆ ಹರಿ ಯುವ ನಾಗರಹೊಳೆ, ಸಾರಥಿ, ಲಕ್ಷ್ಮಣ ತೀರ್ಥ ನದಿಗಳಲ್ಲಿ ನೀರಿನ ಹರಿವು ಇರುವುದರಿಂದ ಅರಣ್ಯ ಬೆಂಕಿ ತಡೆಗೆ ಹಾಗೂ ವನ್ಯಜೀವಿಗಳ ನೀರಿನ ದಾಹ ನೀಗಿಸಲು ಅರಣ್ಯ ಇಲಾಖೆ ಸಜ್ಜಾಗಿದೆ.

ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಫೈರ್‌ಲೇನ್ ಕಾರ್ಯ ಮುಗಿಯುತ್ತಿತ್ತು. ಈ ಬಾರಿ ಜನವರಿ ಅಂತ್ಯದೊಳಗೆ ಬಹುತೇಕ ಮುಗಿಯ ಬಹುದೆಂದು ನಿರೀಕ್ಷಿಸಲಾಗಿದೆ.

೨,೫೩೭ ಕಿ. ಮೀ. ಫೈರ್‌ಲೇನ್ ನಿರ್ವಹಣೆ : ನಾಗರ ಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ವೀರನ ಹೊಸಹಳ್ಳಿ, ಹುಣಸೂರು, ಮತ್ತಿಗೋಡು, ನಾಗರಹೊಳೆ, ಕಲ್ಲಹಳ್ಳ, ಅಂತರಸಂತೆ, ಮೇಟಿಕುಪ್ಪೆ, ಡಿ. ಬಿ. ಕುಪ್ಪೆ ವಲಯಗಳಲ್ಲಿ ೨,೫೩೭ ಕಿ. ಮೀ. ಯಷ್ಟು ಫೈರ್‌ಲೇನ್ ನಿರ್ಮಿಸ ಬೇಕಿದ್ದು, ಈಗಾಗಲೇ ಬೆಂಕಿರೇಖೆ ನಿರ್ಮಿಸುವ ಸಲು ವಾಗಿ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಲೇನ್ ನಿರ್ಮಿಸಲಾಗಿದೆ.

ಬೆಂಕಿ ತಡೆಗೆ ೪೦೦ ಸಿಬ್ಬಂದಿ ಸಜ್ಜು : ಪ್ರತಿ ವಲಯದಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಂಕಿ ನಂದಿಸುವ ಕಾರ್ಯದಲ್ಲಿ ನುರಿತ ಸುಮಾರು ೪೦೦ ಮಂದಿ ಆದಿವಾಸಿಗಳನ್ನು ಪ್ರತಿ ವಲಯಕ್ಕೆ ೪೦-೬೫ಮಂದಿಯಂತೆ ನೇಮಿಸಿಕೊಳ್ಳಲಾಗುವುದು.

ಇವರಿಗೆ ನಿತ್ಯ ಮಧ್ಯಾಹ್ನ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ಸೌಲಭ್ಯಗಳನ್ನು ಕಲ್ಪಿಸಲಾಗು ವುದು ಎಂಬುದಾಗಿ ಅರಣ್ಯಾಧಿಕಾರಿಗಳು ಹೇಳುತ್ತಾರೆ.

ಉದ್ಯಾನವನದ ಹಲವೆಡೆ ಇರುವ ದೊಡ್ಡದಾದ ೩೧ ವೀಕ್ಷಣಾ ಗೋಪುರಗಳ ಮೂಲಕ ಹಾಗೂ ಉದ್ಯಾನವನದ ಅಂಚಿನ ಪ್ರದೇಶದ ಅಲ್ಲಲ್ಲಿ ಮರದ ಮೇಲೆ ಅಟ್ಟಣೆ ನಿರ್ಮಿಸಲಾಗಿದೆ. ಹಗಲು-ರಾತ್ರಿ ಛಾಯಾಚಿತ್ರ ತೆಗೆಯುವ ೩ ಡ್ರೋನ್ ಕ್ಯಾಮೆರಾ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಒಳನುಸುಳುವವರ ಪತ್ತೆಗಾಗಿ ಅಲ್ಲಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.

ಜೀಪ್ ಮೌಂಟೆಡ್ ಟ್ಯಾಂಕರ್ ಅಳವಡಿಕೆ : ಪ್ರತಿ ವಲಯಕ್ಕೆ ಒಂದರಂತೆ ಜೀಪ್ ಮೌಂಟೆಡ್ ಟ್ಯಾಂಕರ್ ಇದೆ. ೮೦ ಸ್ಪ್ರೇಯರ್, ೧೫ ಪವರ್ ಮರ ಕತ್ತರಿಸುವ ಯಂತ್ರ, ೧೧ ಬ್ಲೋಯರ್ಸ್‌ಗಳು ಹಾಗೂ ೩ ಅಗ್ನಿಶಾಮಕ ದಳದ ವಾಹನ ಮತ್ತು ಕ್ಯೂಆರ್‌ಟಿ ವಾಹನಗಳನ್ನು ಸನ್ನದ್ಧವಾಗಿಡಲಾಗುತ್ತದೆ. ಹುಣಸೂರು, ಡಿ. ಬಿ. ಕುಪ್ಪೆ ವಲಯಕ್ಕೆ ೨, ನಾಗರಹೊಳೆ, ವೀರನಹೊಸಹಳ್ಳಿ, ಆನೆಚೌಕೂರು, ಕಲ್ಲಹಳ್ಳ, ಮೇಟಿಕುಪ್ಪೆ, ಅಂತರಸಂತೆ ವಲಯಗಳಿಗೆ ತಲಾ ಒಂದರಂತೆ ೧೧ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಕಾಡ್ಗಿಚ್ಚು ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ಕ್ರಮ
ಕಾಡ್ಗಿಚ್ಚು ಸೃಷ್ಟಿಯಾಗದಂತೆ ನಿರ್ವಹಣೆಗಾಗಿ ಈಗಾಗಲೇ ನಮ್ಮ ಇಲಾಖೆಯ ಹಲವು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು, ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಯಾವುದೇ ಅನಾಹುತ ಸಂಭವಿಸಬಾರದು ಎಂಬ ಕಾರಣಕ್ಕೆ ಇಲಾಖೆಯ ಮೇಲಽಕಾರಿಯವರ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. -ಎಸ್. ಎಸ್. ಸಿದ್ದರಾಜು, ಆರ್. ಎಫ್. ಓ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ

 

ಆಂದೋಲನ ಡೆಸ್ಕ್

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

6 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

6 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

9 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

9 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

10 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

10 hours ago