Andolana originals

ನಾಗರಹೊಳೆ: ಫೈರ್‌ಲೇನ್‌ ನಿರ್ಮಾಣ ಕಾರ್ಯಚುರುಕು

ಪ್ರಶಾಂತ್‌ ಎಸ್‌
ಮೈಸೂರು: ಈ ಬಾರಿ ಉತ್ತಮವಾಗಿ ಮಳೆ ಬಿದ್ದಿದ್ದರಿಂದ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿದ್ದು, ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ ಸೋಲಾರ್ ಪಂಪ್ ನಿಂದಾಗಿ ಕೆರೆ- ಕಟ್ಟೆ ಗಳಿಗೆ ನಿರಂತರವಾಗಿ ನೀರು ತುಂಬುತ್ತಿರು ವುದು ಹಾಗೂ ಉದ್ಯಾ ನವನದೊಳಗೆ ಹರಿ ಯುವ ನಾಗರಹೊಳೆ, ಸಾರಥಿ, ಲಕ್ಷ್ಮಣ ತೀರ್ಥ ನದಿಗಳಲ್ಲಿ ನೀರಿನ ಹರಿವು ಇರುವುದರಿಂದ ಅರಣ್ಯ ಬೆಂಕಿ ತಡೆಗೆ ಹಾಗೂ ವನ್ಯಜೀವಿಗಳ ನೀರಿನ ದಾಹ ನೀಗಿಸಲು ಅರಣ್ಯ ಇಲಾಖೆ ಸಜ್ಜಾಗಿದೆ.

ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಫೈರ್‌ಲೇನ್ ಕಾರ್ಯ ಮುಗಿಯುತ್ತಿತ್ತು. ಈ ಬಾರಿ ಜನವರಿ ಅಂತ್ಯದೊಳಗೆ ಬಹುತೇಕ ಮುಗಿಯ ಬಹುದೆಂದು ನಿರೀಕ್ಷಿಸಲಾಗಿದೆ.

೨,೫೩೭ ಕಿ. ಮೀ. ಫೈರ್‌ಲೇನ್ ನಿರ್ವಹಣೆ : ನಾಗರ ಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ವೀರನ ಹೊಸಹಳ್ಳಿ, ಹುಣಸೂರು, ಮತ್ತಿಗೋಡು, ನಾಗರಹೊಳೆ, ಕಲ್ಲಹಳ್ಳ, ಅಂತರಸಂತೆ, ಮೇಟಿಕುಪ್ಪೆ, ಡಿ. ಬಿ. ಕುಪ್ಪೆ ವಲಯಗಳಲ್ಲಿ ೨,೫೩೭ ಕಿ. ಮೀ. ಯಷ್ಟು ಫೈರ್‌ಲೇನ್ ನಿರ್ಮಿಸ ಬೇಕಿದ್ದು, ಈಗಾಗಲೇ ಬೆಂಕಿರೇಖೆ ನಿರ್ಮಿಸುವ ಸಲು ವಾಗಿ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಲೇನ್ ನಿರ್ಮಿಸಲಾಗಿದೆ.

ಬೆಂಕಿ ತಡೆಗೆ ೪೦೦ ಸಿಬ್ಬಂದಿ ಸಜ್ಜು : ಪ್ರತಿ ವಲಯದಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಂಕಿ ನಂದಿಸುವ ಕಾರ್ಯದಲ್ಲಿ ನುರಿತ ಸುಮಾರು ೪೦೦ ಮಂದಿ ಆದಿವಾಸಿಗಳನ್ನು ಪ್ರತಿ ವಲಯಕ್ಕೆ ೪೦-೬೫ಮಂದಿಯಂತೆ ನೇಮಿಸಿಕೊಳ್ಳಲಾಗುವುದು.

ಇವರಿಗೆ ನಿತ್ಯ ಮಧ್ಯಾಹ್ನ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ಸೌಲಭ್ಯಗಳನ್ನು ಕಲ್ಪಿಸಲಾಗು ವುದು ಎಂಬುದಾಗಿ ಅರಣ್ಯಾಧಿಕಾರಿಗಳು ಹೇಳುತ್ತಾರೆ.

ಉದ್ಯಾನವನದ ಹಲವೆಡೆ ಇರುವ ದೊಡ್ಡದಾದ ೩೧ ವೀಕ್ಷಣಾ ಗೋಪುರಗಳ ಮೂಲಕ ಹಾಗೂ ಉದ್ಯಾನವನದ ಅಂಚಿನ ಪ್ರದೇಶದ ಅಲ್ಲಲ್ಲಿ ಮರದ ಮೇಲೆ ಅಟ್ಟಣೆ ನಿರ್ಮಿಸಲಾಗಿದೆ. ಹಗಲು-ರಾತ್ರಿ ಛಾಯಾಚಿತ್ರ ತೆಗೆಯುವ ೩ ಡ್ರೋನ್ ಕ್ಯಾಮೆರಾ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಒಳನುಸುಳುವವರ ಪತ್ತೆಗಾಗಿ ಅಲ್ಲಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.

ಜೀಪ್ ಮೌಂಟೆಡ್ ಟ್ಯಾಂಕರ್ ಅಳವಡಿಕೆ : ಪ್ರತಿ ವಲಯಕ್ಕೆ ಒಂದರಂತೆ ಜೀಪ್ ಮೌಂಟೆಡ್ ಟ್ಯಾಂಕರ್ ಇದೆ. ೮೦ ಸ್ಪ್ರೇಯರ್, ೧೫ ಪವರ್ ಮರ ಕತ್ತರಿಸುವ ಯಂತ್ರ, ೧೧ ಬ್ಲೋಯರ್ಸ್‌ಗಳು ಹಾಗೂ ೩ ಅಗ್ನಿಶಾಮಕ ದಳದ ವಾಹನ ಮತ್ತು ಕ್ಯೂಆರ್‌ಟಿ ವಾಹನಗಳನ್ನು ಸನ್ನದ್ಧವಾಗಿಡಲಾಗುತ್ತದೆ. ಹುಣಸೂರು, ಡಿ. ಬಿ. ಕುಪ್ಪೆ ವಲಯಕ್ಕೆ ೨, ನಾಗರಹೊಳೆ, ವೀರನಹೊಸಹಳ್ಳಿ, ಆನೆಚೌಕೂರು, ಕಲ್ಲಹಳ್ಳ, ಮೇಟಿಕುಪ್ಪೆ, ಅಂತರಸಂತೆ ವಲಯಗಳಿಗೆ ತಲಾ ಒಂದರಂತೆ ೧೧ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಕಾಡ್ಗಿಚ್ಚು ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ಕ್ರಮ
ಕಾಡ್ಗಿಚ್ಚು ಸೃಷ್ಟಿಯಾಗದಂತೆ ನಿರ್ವಹಣೆಗಾಗಿ ಈಗಾಗಲೇ ನಮ್ಮ ಇಲಾಖೆಯ ಹಲವು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು, ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಯಾವುದೇ ಅನಾಹುತ ಸಂಭವಿಸಬಾರದು ಎಂಬ ಕಾರಣಕ್ಕೆ ಇಲಾಖೆಯ ಮೇಲಽಕಾರಿಯವರ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. -ಎಸ್. ಎಸ್. ಸಿದ್ದರಾಜು, ಆರ್. ಎಫ್. ಓ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago