Andolana originals

ವಿದೇಶಗಳಲ್ಲೂ ಕನ್ನಡಾಭಿಮಾನ ಮೆರೆಯುವ ನಾಗೇಗೌಡ

ಮಂಜು ಕೋಟೆ

ವಿದೇಶಕ್ಕೆ ಭೇಟಿ ನೀಡಿದಾಗ ಕನ್ನಡ ಧ್ವಜ ಪ್ರದರ್ಶಿಸಿ, ನಾಡು, ನುಡಿ, ಸಂಸ್ಕೃತಿಯ ಅರಿವು ಮೂಡಿಸುವುದು ಇವರ ವಿಶೇಷ

ಎಚ್.ಡಿ.ಕೋಟೆ: ಕನ್ನಡ ನಾಡು-ನುಡಿ, ಸಂಸ್ಕ ತಿಗೆ ಹೆಚ್ಚು ಆದ್ಯತೆ ನೀಡುವ ಸಲುವಾಗಿ ಕನ್ನಡ ಅಭಿಮಾನಿಯೊಬ್ಬರು ಪ್ರತಿ ವರ್ಷವೂ ವಿದೇಶಗಳಿಗೆ ಭೇಟಿ ನೀಡಿದಾಗ, ಪ್ರಮುಖ ಸ್ಥಳಗಳಲ್ಲಿ ಕನ್ನಡದ ಬಾವುಟ ಪ್ರದರ್ಶಿಸಿ, ಅಲ್ಲಿನ ಕೆಲ ಜನರಿಗೆ ಕನ್ನಡ ನಾಡು-ನುಡಿಯ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ರಾಜ್ಯದಲ್ಲೇ ಹಿಂದುಳಿದ ಮತ್ತು ಗಡಿ ಭಾಗದ ತಾಲ್ಲೂಕಾಗಿರುವ ಕೋಟೆ ಪಟ್ಟಣದ ಪೇಂಟ್ ನಾಗೇಗೌಡ ವಿಶೇಷ ಕನ್ನಡ ಅಭಿಮಾನಿಯಾಗಿದ್ದಾರೆ. ಒಂದನೇ ತರಗತಿಯಿಂದ ಪದವಿಯ ವರೆಗೂ ಸರ್ಕಾರಿ ಶಾಲೆಯಲ್ಲಿ ಓದಿ ಕನ್ನಡ ನಾಡು-ನುಡಿಗೆ ಒತ್ತು ನೀಡುತ್ತಾ, ವಿನಾಯಕ ಬಣ್ಣದ ಅಂಗಡಿಯನ್ನು ನಡೆಸುತ್ತಾ ಪ್ರತಿ ಸಾಲಿನಲ್ಲೂ ಒಂದೊಂದು ದೇಶಕ್ಕೆ ಪ್ರವಾಸ ಹೋಗುತ್ತಾರೆ. ಆಗ ನಾಡು-ನುಡಿ ಮತ್ತು ಕರ್ನಾಟಕದ ಬಾವುಟಗಳನ್ನು ಪ್ರದರ್ಶಿಸುವ ಮೂಲಕ ಕನ್ನಡ ಅಭಿಮಾನಿ ಎಂದೇ ಹೆಸರು ಗಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಹುತೇಕರು ದೇಶ-ವಿದೇಶಗಳಿಗೆ ಮೋಜು ಮಸ್ತಿಗಾಗಿ ಪ್ರವಾಸ ಕೈಗೊಳ್ಳುತ್ತಾರೆ. ಆದರೆ ಪೇಂಟ್ ನಾಗೇಗೌಡ ತಮ್ಮ ವಿದೇಶ ಪ್ರವಾಸಗಳಲ್ಲಿ ನಮ್ಮ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಆದ್ಯತೆ ನೀಡಿ, ರಾಜ್ಯ ಮತ್ತು ದೇಶದ ಬಾವುಟಗಳನ್ನು ಅಲ್ಲಿನ ಕೆಲ ಜನರಿಗೆ ಪರಿಚಯಿಸುತ್ತಿರುವುದು ವಿಶೇಷವಾಗಿದೆ. ಆರು ವರ್ಷಗಳ ಅವಧಿಯಲ್ಲಿ ಖಜಕಿಸ್ತಾನ, ರಷ್ಯಾ, ಇಂಡೋನೇಷ್ಯಾ, ಮಲೇಶಿಯಾ, ಬ್ಯಾಂಕಾಕ್, ವಿಯೆಟ್ನಾಂ, ಪುಕೆಟ್ ಮುಂತಾದ ೧೨ಕ್ಕೂ ಹೆಚ್ಚು ದೇಶಗಳಲ್ಲಿ ಕನ್ನಡದ ಬಾವುಟವನ್ನು ಪ್ರದರ್ಶಿಸಿದ್ದಾರೆ.

ರಾಜ್ಯದ ಗಡಿಭಾಗದಲ್ಲಿರುವ ತಾಲ್ಲೂಕು ಮತ್ತು ಪಟ್ಟಣಗಳಲ್ಲಿ ಕನ್ನಡವೇ ನಶಿಸುತ್ತಿರುವ ಪರಿಸ್ಥಿತಿ ಎದುರಾಗಿ ಪರಭಾಷಿಗರ ಹಾವಳಿ ಹೆಚ್ಚಾಗುತ್ತಿದೆ. ಜೊತೆಗೆ ಗಡಿ ಭಾಗಗಳಲ್ಲಿ ಮೂಲ ಸೌಕರ್ಯ, ಶೈಕ್ಷಣಿಕ ಮತ್ತು ಆರೋಗ್ಯದ ಪ್ರಗತಿ ಸಮರ್ಪಕವಾಗಿರದೆ ಹೊರ ರಾಜ್ಯಗಳಿಗೆ ಜನಸಾಮಾನ್ಯರು ವಲಸೆ ಹೋಗುತ್ತಿದ್ದು, ಅಲ್ಲಿನ ಸಂಸ್ಕ ತಿ, ನಾಡು-ನುಡಿಗೆ ಮಾರುಹೋಗುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ನಾಗೇಗೌಡರ ಕನ್ನಡಾಭಿಮಾನ ಇತರರಿಗೆ ಮಾದರಿಯಾಗಿದೆ. ಇದೇ ರೀತಿ ಪ್ರತಿಯೊಬ್ಬರೂ ನಾಡು ನುಡಿ, ಸಂಸ್ಕ ತಿ ಬಗ್ಗೆ ಒಲವು ತೋರಿಸಿ ಉಳಿಸಿ ಬೆಳೆಸಲು ಮುಂದಾದರೆ ಮಾತ್ರ ಗಡಿ ಭಾಗದ ತಾಲ್ಲೂಕಿನಲ್ಲಿ ಕನ್ನಡಕ್ಕೆ ಉಳಿಗಾಲ ಎಂಬುದು ಅನೇಕರ ಅನಿಸಿಕೆಯಾಗಿದೆ.

” ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರುವುದರಿಂದ ನಾಡು-ನುಡಿ, ಸಂಸ್ಕ ತಿಗೆ ಹೆಚ್ಚು ಒತ್ತು ಕೊಡಲು ಸಾಧ್ಯವಾಗಿದೆ. ಕರ್ನಾಟಕದಲ್ಲಿರುವ ನಾವು ನಮ್ಮ ಭಾಷೆಯನ್ನು ಉಳಿಸಿ ಬೆಳೆಸದಿದ್ದರೆ ಮುಂದಿನ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗಲಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಲ್ಲೂ ನಮ್ಮ ಕರ್ನಾಟಕದ ನಾಡು-ನುಡಿ, ಬಾವುಟಗಳ ಮಹತ್ವವನ್ನು ಕೆಲವರಿಗಾದರೂ ಪರಿಚಯಿಸುವ ಸಲುವಾಗಿ ವಿದೇಶಗಳಿಗೆ ಪ್ರವಾಸ ಕೈಗೊಂಡಾಗ ಇಂತಹ ಕಾರ್ಯಕ್ರಮ ನಡೆಸುತ್ತಿದ್ದೇನೆ.”

-ಪೇಂಟ್ ನಾಗೇಗೌಡ

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

10 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

11 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

11 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

16 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

17 hours ago