Andolana originals

ಕೌನ್ಸಿಲ್‌ ನಿರ್ಣಯಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕರೆ ʼಸಿದ್ದು ಮಾರ್ಗʼ ಸರಾಗ

  • ಕೆ.ಬಿ. ರಮೇಶ ನಾಯಕ

ಮೈಸೂರು: ಪಿಕೆಟಿಬಿ ಆಸ್ಪತ್ರೆ ಮಾರ್ಗವಾಗಿ ಸಾಗುವ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರದಲ್ಲಿ ಕೌನ್ಸಿಲ್ ಸಭೆಯ ನಿರ್ಣಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ ಸಿದ್ದರಾಮಯ್ಯ ಮಾರ್ಗ ಎಂದು ನಾಮಕರಣ ಮಾಡುವುದು ಖಚಿತವಾಗಿದೆ.

ಸದ್ಯಕ್ಕೆ ಈ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂದು ನಾಮ ಕರಣ ಮಾಡಿರುವ ಕುರಿತಂತೆ ದಾಖಲೆಗಳನ್ನು ಹುಡುಕುವ ಕಾರ್ಯವನ್ನು ನಗರಪಾಲಿಕೆ ಅಽಕಾರಿಗಳು ಕೈಗೆತ್ತಿಕೊಂಡಿದ್ದು, ಮೂರು ದಶಕಗಳ ದಾಖಲೆಗಳ ಪರಿಶೀಲನೆಯಲ್ಲಿ ನಾಮಕರಣದ ನಿರ್ಣಯದ ಪ್ರತಿ ಲಭ್ಯವಾಗಿಲ್ಲವೆಂಬ ಮಾಹಿತಿಯನ್ನು ನಗರಪಾಲಿಕೆ ಆಯುಕ್ತರು ನೀಡಿದ್ದಾರೆ. ಇದರಿಂದಾಗಿ ವಿವಾದ ಮತ್ತಷ್ಟು ಕಾವು ಪಡೆಯುವ ಸಾಧ್ಯತೆ ದಟ್ಟವಾಗಿದೆ.

ದಾಸಪ್ಪ ವೃತ್ತದಿಂದ ರಿಂಗ್ ರಸ್ತೆ ಜಂಕ್ಷನ್ ವರೆಗಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವಂತೆ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ಗೌಡ ಅವರು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.

ಶಾಸಕರ ಮನವಿಯನ್ನು ಪರಿಗಣಿಸಿ ಡಿ. ೧೭ರಂದು ಸಾರ್ವಜನಿಕ ಆಕ್ಷೇಪಣೆಗಳನ್ನು ಆಹ್ವಾನಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಈ ವಿಚಾರಕ್ಕೆ ಸಂಬಂಽಸಿದಂತೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಮಹಾ ರಾಜ ಚಾಮರಾಜ ಒಡೆಯರ್ -ವಾಣಿವಿಲಾಸ ಸನ್ನಿಧಾನದ ಮಹಾರಾಣಿ ಕೆಂಪನಂಜಮ್ಮಣ್ಣಿ ಪುತ್ರಿಯರಾದ ರಾಜಕುಮಾರಿ ಕೃಷ್ಣಾಜಮ್ಮಣ್ಣಿ ಮತ್ತು ರಾಜಕುಮಾರಿ ಚೆಲುವರಾಜಮ್ಮಣ್ಣಿ ಸ್ಮರಣಾರ್ಥವಾಗಿ ಪ್ರಿನ್ಸೆಸ್ ಹೆಸರನ್ನು ಇಡಲಾಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದರು.

ಆದರೆ ಮಾಜಿ ಸಂಸದ ಪ್ರತಾಪ್ ಸಿಂಹ ಮೊದಲಿಗೆ ಸಿದ್ದರಾಮಯ್ಯ ಹೆಸರಿಟ್ಟರೆ ತಪ್ಪೇನು ಎಂದಿದ್ದರೂ ಸ್ವಪಕ್ಷೀಯ ನಾಯಕರ ಒತ್ತಡದಿಂದಾಗಿ ಯೂಟರ್ನ್ ಹೊಡೆದರಲ್ಲದೆ, ಸಿದ್ದರಾಮಯ್ಯ ಹೆಸರನ್ನು ಬೇರೆ ರಸ್ತೆಗೆ ನಾಮಕರಣ ಮಾಡುವಂತೆ ಸಲಹೆ ನೀಡಿದ್ದರು. ಬಿಜೆಪಿ ನಾಯಕರು ಕೂಡ ಸಿದ್ದರಾಮಯ್ಯ ಹೆಸರು ಇಡುವುದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದೆಲ್ಲದರ ನಡುವೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದ ನಿಯೋಗ ನಗರಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಮೂಲಕ ಶೀಘ್ರದಲ್ಲೇ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದೆ.

ಈ ನಿಯೋಗ ಭೇಟಿ ನೀಡಿದ್ದ ವೇಳೆ ಆಯುಕ್ತರು ನೀಡಿರುವ ಮಾಹಿತಿ ಪ್ರಕಾರ ಪಾಲಿಕೆಯಲ್ಲಿ ೧೯೯೯ರಿಂದ ೨೦೨೪ರ ವರೆಗೆ ಎಲ್ಲ ಕಡತಗಳನ್ನು ಪರಿಶೀಲಿಸ ಲಾಗಿದೆ. ಎಲ್ಲಿಯೂ ಪ್ರಿನ್ಸೆಸ್ ಹೆಸರು ಕಂಡು ಬಂದಿಲ್ಲ. ಜತೆಗೆ ಆ ರಸ್ತೆಗೆ ಯಾವ ಹೆಸರೂ ಇಲ್ಲ. ಈಗ ೧೯೬೪ರಿಂದ ೧೯೯೯ರ ವರೆಗಿನ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಅದು ಕೂಡ ಮುಕ್ತಾಯ ಹಂತದಲ್ಲಿದ್ದು, ಇನ್ನೂ ೨೦ ವರ್ಷಗಳ ಕಡತ ಮಾತ್ರ ಪರಿಶೀಲನೆ ಬಾಕಿ ಉಳಿದಿದೆ.

ಇದರ ಜತೆಗೆ ಪಾಲಿಕೆಯ ೯ ವಲಯಗಳ ಆಯುಕ್ತರಿಂದ ಮಾಹಿತಿ ಪಡೆಯಲಾಗಿದೆ. ಎಲ್ಲೂ ಕೂಡ ಪ್ರಿನ್ಸೆಸ್ ಹೆಸರಿರುವ ಬಗ್ಗೆ ಅಽಕೃತ ದಾಖಲೆಗಳಿಲ್ಲ. ಗೆಜೆಟ್‌ನಲ್ಲಿ ಆ ಹೆಸರು ಇದೆಯೋ ಏನೋ ಗೊತ್ತಿಲ್ಲ. ನಗರಪಾಲಿಕೆ ವ್ಯಾಪ್ತಿಯಲ್ಲಿರುವ ಯಾವ ದಾಖಲಾತಿಗಳಲ್ಲೂ ಪ್ರಿನ್ಸೆಸ್ ಹೆಸರಿಲ್ಲ. ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಂಡು ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಪಾಲಿಕೆ ಕೈಗೊಂಡ ನಿರ್ಣಯಕ್ಕೆ ಸರ್ಕಾರ ಅನುಮೋದನೆ ನೀಡುವುದು ಬಹುತೇಕ ಖಚಿತವಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಕುತೂಹಲ ಕೆರಳಿಸಿದೆ.

 

andolana

Recent Posts

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

5 mins ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

43 mins ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

2 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

2 hours ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

4 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

4 hours ago