Andolana originals

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಟಿ.ಜಿ.ನಂದಿತಾ ನಿದರ್ಶನ. ನಂದಿತಾ, ಕುಶಾಲನಗರ ತಾಲ್ಲೂಕಿನ ತೊರೆನೂರು ಸಮೀಪದ ಅರೆಗಲು ನಿವಾಸಿ ಟಿ.ಜಿ. ಗಿರೀಶ್ ಹಾಗೂ ಪವಿತ್ರ ದಂಪತಿಯ ಪುತ್ರಿ. ತಂದೆ ಬಡತನದಲ್ಲಿ ಹಲವು ಸವಾಲುಗಳ ನಡುವೆ ಬದುಕು ಸವೆಸುತ್ತಿದ್ದರೂ ನಂದಿತಾಗೆ ಕಲಿಯಲು ಅವು ಅಡ್ಡಿಯಾಗಲಿಲ್ಲ. ೨೦೨೫- ೨೬ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಕೆ ೬೦೦ಕ್ಕೆ ೫೮೫ ಅಂಕಗಳಿಸುವ ಮೂಲಕ ಇಡೀ ಜಿಲ್ಲೆಯ ಗಮನ ಸೆಳೆದಿದ್ದಾರೆ.

ಗಿರೀಶ್ ಅವರು ಇರುವ ತಮ್ಮ ೧.೧೩ ಎಕರೆ ಜಾಗದಲ್ಲಿಯೇ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಹಿರಿಯ ಪುತ್ರ ಟಿ.ಜಿ.ರಕ್ಷಿತ್ ಮೈಸೂರಿನಲ್ಲಿ ಬಿಬಿಎಂ ಓದುತ್ತಿದ್ದು, ತಾಯಿ ಸುಂದರಮ್ಮ, ಪತ್ನಿ ಪವಿತ್ರಾ, ಪುತ್ರಿ ನಂದಿತಾಳೊಂದಿಗೆ ವಾಸವಾಗಿದ್ದಾರೆ. ಕೃಷಿಯಲ್ಲಿ ಬಂದ ಲಾಭದಲ್ಲಿಯೇ ಜೀವನ ಸಾಗಬೇಕಾದ ಅನಿವಾರ್ಯತೆಯಿದೆ. ಹೀಗಾಗಿಯೇ ಅನಿವಾರ್ಯವಾಗಿ ಪುತ್ರಿ ನಂದಿತಾಳನ್ನು ಸರ್ಕಾರಿ ಕಾಲೇಜಿಗೆ ಸೇರಿಸಬೇಕಾಯಿತು.

ಮನೆಯಿಂದ ಕಾಲೇಜಿಗೆ ಸುಮಾರು ೮ ಕಿ.ಮೀ. ಅಂತರವಿದ್ದು, ಊರಿನಿಂದ ೨ ಕಿ.ಮೀ. ದೂರದಲ್ಲಿರುವ ಬಸ್ ನಿಲ್ದಾಣಕ್ಕೆ ಗಿರೀಶ್ ತಮ್ಮ ದ್ವಿಚಕ್ರ ವಾಹನದಲ್ಲಿ ಪುತ್ರಿಯನ್ನು ಕರೆದುಕೊಂಡು ಹೋಗಿ ಬಿಡುವುದು, ಮತ್ತೆ ಸಂಜೆ ಬಸ್ ನಿಲ್ದಾಣಕ್ಕೆ ಬಂದು ವಾಪಸ್ ಮನೆಗೆ ಕರೆದೊಯ್ಯುತ್ತಿದ್ದರು. ಒಮ್ಮೊಮ್ಮೆ ಕಾರಣಾಂತರಗಳಿಂದ ಅವರು ಬಸ್ ನಿಲ್ಧಾಣಕ್ಕೆ ಬರುವುದು ಸಾಧ್ಯವಾಗದಿದ್ದರೆ, ನಂದಿತಾ ನಡೆದುಕೊಂಡೇ ಮನೆಗೆ ಹೋಗಬೇಕಿತ್ತು. ಬಡತನದ ಕಾರಣಕ್ಕಾಗಿ ಮಗಳನ್ನು ಸರ್ಕಾರಿ ಶಾಲೆ, ಕಾಲೇಜಿಗೆ ಸೇರಿಸಬೇಕಾಗಿತ್ತು. ಇದೀಗ ಮಗಳು ಜಿಲ್ಲೆಗೆ ೨ನೇ ಸ್ಥಾನ ಗಳಿಸಿರುವುದು ಖುಷಿ ತಂದಿದೆ ಎಂದು ಗಿರೀಶ್ ತಮ್ಮ ಪುತ್ರಿಯ ಸಾಧನೆ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ.

” ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೬೦೦ಕ್ಕೆ ೫೮೫ ಅಂಕ ಗಳಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿರುವುದಕ್ಕೆ ಖುಷಿಯಾಗಿದೆ. ಪೋಷಕರ ಬೆಂಬಲ, ಉಪನ್ಯಾಸಕರ ಸಹಕಾರ, ಮಾರ್ಗದರ್ಶನದಿಂದ ಇಷ್ಟು ಅಂಕ ಗಳಿಸಲು ಸಾಧ್ಯವಾಗಿದೆ. ಎಲ್ಲರಿಗೂ ಧನ್ಯವಾದ ಸಲ್ಲಿಸಲು ಇಚ್ಛಿಸುತ್ತೇನೆ.”

ಟಿ.ಜಿ.ನಂದಿತಾ, ಕಲಾ ವಿಭಾಗ, ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ

 

 

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

7 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago