Andolana originals

ಫೆ.7ಕ್ಕೆ ನಂಜಡೇಶ್ವರ ದೇವಸ್ಥಾನ ಲೋಕಾರ್ಪಣೆ

ಹೆಗ್ಗಡಹಳ್ಳಿಯಲ್ಲಿ ವಿಮಾನಗೋಪುರ ಕಳಸಾರೋಹಣ; ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಆಯೋಜನೆ

ಗುಂಡ್ಲುಪೇಟೆ: ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಶ್ರೀ ನಂಜುಂಡೇಶ್ವರ ದೇವಸ್ಥಾನವು ಗ್ರಾಮಸ್ಥರು, ಸಾರ್ವಜನಿಕರ ಸಹಕಾರದಿಂದ ಪುನರ್ ನಿರ್ಮಾಣವಾಗಿದ್ದು ಫೆ. ೭ಕ್ಕೆ ದೇವಸ್ಥಾನ ಲೋಕಾರ್ಪಣೆಯಾಗಲಿದೆ. ಸಂಪ್ರೋಕ್ಷಣೆ, ವಿಮಾನ ಗೋಪುರ ಕಳಸ ಸ್ಥಾಪನೆ, ಕುಂಭಾಭಿಷೇಕ ಮಹೋತ್ಸವ ನಡೆಯಲಿದೆ.

ಫೆ. ೫ರಂದು ಗೋಧೂಳಿ ಲಗ್ನದಲ್ಲಿ ಸಂಜೆ ೫ರಿಂದ ೬ ಗಂಟೆವರೆಗೆ ಅಗ್ರತೀರ್ಥ ಸಂಗ್ರಹ ಸಮೇತ, ಹಸು-ಕರು ಸಮೇತ ಸಕಲ ಗೌರವಗಳೊಂದಿಗೆ ಯಾಗಾ ಶಾಲಾ ಪ್ರವೇಶ, ಗಣಪತಿ ಪೂಜಾ, ಪಂಚಗವ್ಯ ಸಾಧನ ಪ್ರೋಕ್ಷಣೆ, ಪ್ರಾಸನ ರಕ್ಷಪೂಜೆ ಕೈಂಕರ್ಯಗಳು ನೆರವೇರಲಿವೆ.

ಫೆ. ೬ರಂದು ಬೆಳಿಗ್ಗೆ ಶಂಕುಸ್ಥಾಪನೆ, ಧಾನ್ಯಾಧಿವಾಸ, ನವಗ್ರಹ ಪೂಜೆ, ಸಪ್ತ ಕಳಸ ಪೂಜೆ, ನವಗ್ರಹ ಹೋಮ, ಸಂಜೆ ೪. ೩೦ಕ್ಕೆ ಪೀಠಾಽವಾಸ, ಪುಷ್ಪಾಽಕಾಸ, ಪೀಠಪೂಜೆ, ಯಂತ್ರ ನವರತ್ನ ಸ್ಥಾಪನೆ ಕಾರ್ಯ ಜರುಗಲಿದೆ.

ಫೆ. ೭ರಂದು ಬ್ರಾಹ್ಮೀ ಮುಹೂರ್ತದಲ್ಲಿ ಬೆಳಿಗ್ಗೆ ೫ರಿಂದ ೬ ಗಂಟೆಯ ಒಳಗೆ ವಿಮಾನ ಕಳಸ ಸ್ಥಾಪನೆ, ಪ್ರಧಾನ ದೇವರಿಗೆ ಅಷ್ಟಬಂಧ ನ್ಯಾಸಗಳು, ನಾಡೀ ಸಂಧಾನ, ಪ್ರಾಣಪ್ರತಿಷ್ಠಾಪನೆ, ಪ್ರಧಾನ ಹೋಮ ನಡೆಯುವ ಮೂಲಕ ಶ್ರೀ ನಂಜುಂಡೇಶ್ವರ ಪುನರ್ ನಿರ್ಮಾಣ ದೇವಾಲಯ ಲೋಕಾರ್ಪಣೆಯಾಗಲಿದೆ.

ಧಾರ್ಮಿಕ ಸಭೆ: ಅಂದು ಬೆಳಿಗ್ಗೆ ೧೦ ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ಸುತ್ತೂರು ಮಹಾಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ದೇವನೂರಿನ ಶ್ರೀ ಮಹಾಂತ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಶಾಸಕ ಎಚ್. ಎಂ. ಗಣೇಶ್‌ಪ್ರಸಾದ್, ಮಾಜಿ ಶಾಸಕ ಸಿ. ಎಸ್. ನಿರಂಜನ್‌ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮುಖ್ಯ ಭಾಷಣಕಾರರಾಗಿ ಕಬ್ಬಹಳ್ಳಿ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್. ಎಂ. ಸಿದ್ದರಾಜಪ್ಪ ಹಾಗೂ ಸೋಮಹಳ್ಳಿ ಮಠದ ಸಿದ್ದಮಲ್ಲಸ್ವಾಮೀಜಿ, ಪಡಗೂರು ಅಡವಿ ಮಠದ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ, ಮಾದಪಟ್ಟಣ ವಿರಕ್ತ ಮಠದ ತೋಂಟ ದಾರ್ಯ ಸ್ವಾಮೀಜಿ, ಚಿಕ್ಕತುಪ್ಪೂರು ಮಠದ ಚನ್ನವೀರ ಸ್ವಾಮೀಜಿ, ಕಬ್ಬಹಳ್ಳಿ ಮಠದ ಗುರುಸಿದ್ದ ಸ್ವಾಮೀಜಿ, ಬಾಗಲಕೋಟೆ ಕೂಡಲಸಂಗಮದ ಮಹದೇಶ್ವರ ಸ್ವಾಮೀಜಿ ಭಾಗವಹಿಸುವರು. ಕಾರ್ಯಕ್ರಮದ ನಂತರ ಸಾವಿರಾರು ಜನರಿಗೆ ಅನ್ನಸಂತರ್ಪಣೆ ಏರ್ಪಡಿಸ ಲಾಗಿದೆ. ತಾಲ್ಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

2 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

2 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

2 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

2 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

2 hours ago