Andolana originals

ನಂಜನಗೂಡು: ಹದಗೆಟ್ಟ ರಸ್ತೆಗೆ ಬಂತು ಅಭಿವೃದ್ಧಿ ಭಾಗ್ಯ

ಎಸ್.ಎಸ್.ಭಟ್

ಶಾಸಕರ ಸೂಚನೆಯ ಮೇರೆಗೆ ೧೫ನೇ ಹಣಕಾಸು ಯೋಜನೆಯಡಿ ೨ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ 

ನಂಜನಗೂಡು: ನಗರದಾದ್ಯಂತ ಹದಗೆಟ್ಟ ರಸ್ತೆಗಳಿಗೆ ಈಗ ಅಭಿವೃದ್ದಿಯ ಭಾಗ್ಯ ಬಂದಿದ್ದು, ರಸ್ತೆಗಳ ಮರು ಡಾಂಬರೀಕರಣ ಭರದಿಂದ ಸಾಗಿದೆ. ನಗರದ ವಿವಿಧ ವಾರ್ಡುಗಳಲ್ಲಿ ದುಸ್ಥಿತಿಯಲ್ಲಿದ್ದ ರಸ್ತೆಗಳ ದುರಸ್ತಿಗಾಗಿ ೧೫ನೇ ಹಣಕಾಸು ಯೋಜನೆಯಡಿ ೨ ಕೋಟಿ ರೂ. ಗಳನ್ನು ಬಳಸಿಕೊಳ್ಳುವಂತೆ ಶಾಸಕ ದರ್ಶನ್ ಧ್ರುವ ನಾರಾಯಣ ಅವರು ಸೂಚಿಸಿದ್ದರ ಮೇರೆಗೆ ರಸ್ತೆಗಳ ಮರುಡಾಂಬರೀಕರಣ ಆರಂಭವಾಗಿದೆ.

ನಗರಸಭೆಯ ಜನಪ್ರತಿನಿಧಿಗಳ ಅಧಿಕಾರದ ಅವಧಿ ಮುಗಿದ ೧೭ ದಿನಗಳ ನಂತರ ಈ ರಸ್ತೆ ಅಭಿವೃದ್ಧಿ ಕಾರ್ಯ ಆರಂಭವಾಗಿದ್ದು, ಮೊದಲ ಹಂತವಾಗಿ ೧೩, ೨೪ ಮತ್ತು ೧೬ನೇ ವಾರ್ಡ್ ಹಾಗೂ ದೇವೀರಮ್ಮಹಳ್ಳಿ ಬಡಾವಣೆಗಳ ೩೦ ರಸ್ತೆಗಳ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ನಗರದ ಹದಗೆಟ್ಟ ರಸ್ತೆ, ಚರಂಡಿ ಹಾಗೂ ಸಿಸಿ ರಸ್ತೆಗಳ ಕಾಮಗಾರಿಯನ್ನು ಆದ್ಯತೆ ಮೇಲೆನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದು, ನಗರದಲ್ಲಿ ಅತ್ಯಂತ ದುಸ್ಥಿತಿಗೆ ತಲುಪಿದ್ದ ೧೫ ರಸ್ತೆಗಳನ್ನು ಮಾತ್ರ ಈ ಬಾರಿ ಮರು ಡಾಂಬರೀಕರಣಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇದಲ್ಲದೆ ಸಿಸಿ ರಸ್ತೆ ಹಾಗೂ ಚರಂಡಿ ಇಲ್ಲದ ಕಡೆಗಳಲ್ಲಿ ಚರಂಡಿ ನಿರ್ಮಿಸಲು ಕೂಡ ನಗರಸಭೆ ಮುಂದಾಗಿದೆ.

ಕಾಮಗಾರಿ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಗುಣಮಟ್ಟ ಕಾಮಗಾರಿ ನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದು, ಡಿಸೆಂಬರ್ ಅಂತ್ಯದೊಳಗೆ ನಗರದ ಬಹಳಷ್ಟು ರಸ್ತೆಗಳು ಮರು ಡಾಂಬರೀಕರಣಗೊಳ್ಳಲಿವೆ. ಈ ಕಾಮಗಾರಿಗಳ ಹೊಣೆ ಹೊತ್ತಿರುವ ಇಂಜಿನಿಯರ್ ಮಹೇಶ ಹಾಗೂ ಶಮಂತ ಅವರು ಖುದ್ದು ಸ್ಥಳದಲ್ಲೇ ಇದ್ದು, ಕಾಮಗಾರಿಯ ನಿರ್ವಹಣೆ ನಡೆಸುತ್ತಿರುವುದು ಕಾಮಗಾರಿಗಳ ಸ್ಥಳದಲ್ಲಿ ಅಧಿಕಾರಿಗಳನ್ನೇ ಕಾಣದಿದ್ದ ನಂಜನಗೂಡು ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ.

” ಈ ಸಾಲಿನಲ್ಲಿ ೫೦ ಕೋಟಿ ರೂ. ವಿಶೇಷ ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗಾಗಿ ತರಲಾಗಿದೆ. ಅದರಲ್ಲಿ ೧೦ ಕೋಟಿ ರೂ.ಗಳನ್ನು ನಂಜನಗೂಡು ನಗರದ ಹೊಸಬಡಾವಣೆಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಾಗಿರಿಸಲಾಗಿದ್ದು, ಕಾಮಗಾರಿ ಆರಂಭವಾಗಲಿದೆ.”

-ದರ್ಶನ್ ಧ್ರುವನಾರಾಯಣ, ಶಾಸಕ

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

8 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

9 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

9 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

9 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

9 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

10 hours ago