Andolana originals

ನಂಜನಗೂಡು: ಹದಗೆಟ್ಟ ರಸ್ತೆಗೆ ಬಂತು ಅಭಿವೃದ್ಧಿ ಭಾಗ್ಯ

ಎಸ್.ಎಸ್.ಭಟ್

ಶಾಸಕರ ಸೂಚನೆಯ ಮೇರೆಗೆ ೧೫ನೇ ಹಣಕಾಸು ಯೋಜನೆಯಡಿ ೨ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ 

ನಂಜನಗೂಡು: ನಗರದಾದ್ಯಂತ ಹದಗೆಟ್ಟ ರಸ್ತೆಗಳಿಗೆ ಈಗ ಅಭಿವೃದ್ದಿಯ ಭಾಗ್ಯ ಬಂದಿದ್ದು, ರಸ್ತೆಗಳ ಮರು ಡಾಂಬರೀಕರಣ ಭರದಿಂದ ಸಾಗಿದೆ. ನಗರದ ವಿವಿಧ ವಾರ್ಡುಗಳಲ್ಲಿ ದುಸ್ಥಿತಿಯಲ್ಲಿದ್ದ ರಸ್ತೆಗಳ ದುರಸ್ತಿಗಾಗಿ ೧೫ನೇ ಹಣಕಾಸು ಯೋಜನೆಯಡಿ ೨ ಕೋಟಿ ರೂ. ಗಳನ್ನು ಬಳಸಿಕೊಳ್ಳುವಂತೆ ಶಾಸಕ ದರ್ಶನ್ ಧ್ರುವ ನಾರಾಯಣ ಅವರು ಸೂಚಿಸಿದ್ದರ ಮೇರೆಗೆ ರಸ್ತೆಗಳ ಮರುಡಾಂಬರೀಕರಣ ಆರಂಭವಾಗಿದೆ.

ನಗರಸಭೆಯ ಜನಪ್ರತಿನಿಧಿಗಳ ಅಧಿಕಾರದ ಅವಧಿ ಮುಗಿದ ೧೭ ದಿನಗಳ ನಂತರ ಈ ರಸ್ತೆ ಅಭಿವೃದ್ಧಿ ಕಾರ್ಯ ಆರಂಭವಾಗಿದ್ದು, ಮೊದಲ ಹಂತವಾಗಿ ೧೩, ೨೪ ಮತ್ತು ೧೬ನೇ ವಾರ್ಡ್ ಹಾಗೂ ದೇವೀರಮ್ಮಹಳ್ಳಿ ಬಡಾವಣೆಗಳ ೩೦ ರಸ್ತೆಗಳ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ನಗರದ ಹದಗೆಟ್ಟ ರಸ್ತೆ, ಚರಂಡಿ ಹಾಗೂ ಸಿಸಿ ರಸ್ತೆಗಳ ಕಾಮಗಾರಿಯನ್ನು ಆದ್ಯತೆ ಮೇಲೆನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದು, ನಗರದಲ್ಲಿ ಅತ್ಯಂತ ದುಸ್ಥಿತಿಗೆ ತಲುಪಿದ್ದ ೧೫ ರಸ್ತೆಗಳನ್ನು ಮಾತ್ರ ಈ ಬಾರಿ ಮರು ಡಾಂಬರೀಕರಣಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇದಲ್ಲದೆ ಸಿಸಿ ರಸ್ತೆ ಹಾಗೂ ಚರಂಡಿ ಇಲ್ಲದ ಕಡೆಗಳಲ್ಲಿ ಚರಂಡಿ ನಿರ್ಮಿಸಲು ಕೂಡ ನಗರಸಭೆ ಮುಂದಾಗಿದೆ.

ಕಾಮಗಾರಿ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಗುಣಮಟ್ಟ ಕಾಮಗಾರಿ ನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದು, ಡಿಸೆಂಬರ್ ಅಂತ್ಯದೊಳಗೆ ನಗರದ ಬಹಳಷ್ಟು ರಸ್ತೆಗಳು ಮರು ಡಾಂಬರೀಕರಣಗೊಳ್ಳಲಿವೆ. ಈ ಕಾಮಗಾರಿಗಳ ಹೊಣೆ ಹೊತ್ತಿರುವ ಇಂಜಿನಿಯರ್ ಮಹೇಶ ಹಾಗೂ ಶಮಂತ ಅವರು ಖುದ್ದು ಸ್ಥಳದಲ್ಲೇ ಇದ್ದು, ಕಾಮಗಾರಿಯ ನಿರ್ವಹಣೆ ನಡೆಸುತ್ತಿರುವುದು ಕಾಮಗಾರಿಗಳ ಸ್ಥಳದಲ್ಲಿ ಅಧಿಕಾರಿಗಳನ್ನೇ ಕಾಣದಿದ್ದ ನಂಜನಗೂಡು ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ.

” ಈ ಸಾಲಿನಲ್ಲಿ ೫೦ ಕೋಟಿ ರೂ. ವಿಶೇಷ ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗಾಗಿ ತರಲಾಗಿದೆ. ಅದರಲ್ಲಿ ೧೦ ಕೋಟಿ ರೂ.ಗಳನ್ನು ನಂಜನಗೂಡು ನಗರದ ಹೊಸಬಡಾವಣೆಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಾಗಿರಿಸಲಾಗಿದ್ದು, ಕಾಮಗಾರಿ ಆರಂಭವಾಗಲಿದೆ.”

-ದರ್ಶನ್ ಧ್ರುವನಾರಾಯಣ, ಶಾಸಕ

ಆಂದೋಲನ ಡೆಸ್ಕ್

Recent Posts

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

11 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

25 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

46 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago