Andolana originals

ನಂಜನಗೂಡು: ಹದಗೆಟ್ಟ ರಸ್ತೆಗೆ ಬಂತು ಅಭಿವೃದ್ಧಿ ಭಾಗ್ಯ

ಎಸ್.ಎಸ್.ಭಟ್

ಶಾಸಕರ ಸೂಚನೆಯ ಮೇರೆಗೆ ೧೫ನೇ ಹಣಕಾಸು ಯೋಜನೆಯಡಿ ೨ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ 

ನಂಜನಗೂಡು: ನಗರದಾದ್ಯಂತ ಹದಗೆಟ್ಟ ರಸ್ತೆಗಳಿಗೆ ಈಗ ಅಭಿವೃದ್ದಿಯ ಭಾಗ್ಯ ಬಂದಿದ್ದು, ರಸ್ತೆಗಳ ಮರು ಡಾಂಬರೀಕರಣ ಭರದಿಂದ ಸಾಗಿದೆ. ನಗರದ ವಿವಿಧ ವಾರ್ಡುಗಳಲ್ಲಿ ದುಸ್ಥಿತಿಯಲ್ಲಿದ್ದ ರಸ್ತೆಗಳ ದುರಸ್ತಿಗಾಗಿ ೧೫ನೇ ಹಣಕಾಸು ಯೋಜನೆಯಡಿ ೨ ಕೋಟಿ ರೂ. ಗಳನ್ನು ಬಳಸಿಕೊಳ್ಳುವಂತೆ ಶಾಸಕ ದರ್ಶನ್ ಧ್ರುವ ನಾರಾಯಣ ಅವರು ಸೂಚಿಸಿದ್ದರ ಮೇರೆಗೆ ರಸ್ತೆಗಳ ಮರುಡಾಂಬರೀಕರಣ ಆರಂಭವಾಗಿದೆ.

ನಗರಸಭೆಯ ಜನಪ್ರತಿನಿಧಿಗಳ ಅಧಿಕಾರದ ಅವಧಿ ಮುಗಿದ ೧೭ ದಿನಗಳ ನಂತರ ಈ ರಸ್ತೆ ಅಭಿವೃದ್ಧಿ ಕಾರ್ಯ ಆರಂಭವಾಗಿದ್ದು, ಮೊದಲ ಹಂತವಾಗಿ ೧೩, ೨೪ ಮತ್ತು ೧೬ನೇ ವಾರ್ಡ್ ಹಾಗೂ ದೇವೀರಮ್ಮಹಳ್ಳಿ ಬಡಾವಣೆಗಳ ೩೦ ರಸ್ತೆಗಳ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ನಗರದ ಹದಗೆಟ್ಟ ರಸ್ತೆ, ಚರಂಡಿ ಹಾಗೂ ಸಿಸಿ ರಸ್ತೆಗಳ ಕಾಮಗಾರಿಯನ್ನು ಆದ್ಯತೆ ಮೇಲೆನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದು, ನಗರದಲ್ಲಿ ಅತ್ಯಂತ ದುಸ್ಥಿತಿಗೆ ತಲುಪಿದ್ದ ೧೫ ರಸ್ತೆಗಳನ್ನು ಮಾತ್ರ ಈ ಬಾರಿ ಮರು ಡಾಂಬರೀಕರಣಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇದಲ್ಲದೆ ಸಿಸಿ ರಸ್ತೆ ಹಾಗೂ ಚರಂಡಿ ಇಲ್ಲದ ಕಡೆಗಳಲ್ಲಿ ಚರಂಡಿ ನಿರ್ಮಿಸಲು ಕೂಡ ನಗರಸಭೆ ಮುಂದಾಗಿದೆ.

ಕಾಮಗಾರಿ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಗುಣಮಟ್ಟ ಕಾಮಗಾರಿ ನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದು, ಡಿಸೆಂಬರ್ ಅಂತ್ಯದೊಳಗೆ ನಗರದ ಬಹಳಷ್ಟು ರಸ್ತೆಗಳು ಮರು ಡಾಂಬರೀಕರಣಗೊಳ್ಳಲಿವೆ. ಈ ಕಾಮಗಾರಿಗಳ ಹೊಣೆ ಹೊತ್ತಿರುವ ಇಂಜಿನಿಯರ್ ಮಹೇಶ ಹಾಗೂ ಶಮಂತ ಅವರು ಖುದ್ದು ಸ್ಥಳದಲ್ಲೇ ಇದ್ದು, ಕಾಮಗಾರಿಯ ನಿರ್ವಹಣೆ ನಡೆಸುತ್ತಿರುವುದು ಕಾಮಗಾರಿಗಳ ಸ್ಥಳದಲ್ಲಿ ಅಧಿಕಾರಿಗಳನ್ನೇ ಕಾಣದಿದ್ದ ನಂಜನಗೂಡು ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ.

” ಈ ಸಾಲಿನಲ್ಲಿ ೫೦ ಕೋಟಿ ರೂ. ವಿಶೇಷ ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗಾಗಿ ತರಲಾಗಿದೆ. ಅದರಲ್ಲಿ ೧೦ ಕೋಟಿ ರೂ.ಗಳನ್ನು ನಂಜನಗೂಡು ನಗರದ ಹೊಸಬಡಾವಣೆಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಾಗಿರಿಸಲಾಗಿದ್ದು, ಕಾಮಗಾರಿ ಆರಂಭವಾಗಲಿದೆ.”

-ದರ್ಶನ್ ಧ್ರುವನಾರಾಯಣ, ಶಾಸಕ

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

10 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

10 hours ago