Andolana originals

ಬಹುಮತದ ಮೈತ್ರಿಗೆ ದಕ್ಕೀತೆ ನಂಜನಗೂಡು ನಗರಸಭೆ ಅಧಿಕಾರ?

 

ನಂಜನಗೂಡು: ಇಲ್ಲಿನ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೆ.3ರಂದು ನಡೆಯಲಿದೆ.

ಪರಿಶಿಷ್ಟ ಜಾತಿಗೆ ಅಧ್ಯಕ್ಷ, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಗಾದಿ ಮೀಸಲಾಗಿದ್ದು, ಮೇಲ್ನೋಟಕ್ಕೆ ಬಹುಮತ ಹೊಂದಿರುವ ಬಿಜೆಪಿ- ಜಾತ್ಯತೀತ ಜನತಾದಳ ಮೈತ್ರಿಕೂಟಕ್ಕೆ ನಗರಸಭೆಯ ಅಧಿಕಾರ ದಕ್ಕಿತೆ ಎಂಬ ಎಂಬ ಕುತೂಹಲ ನಗರದಾದ್ಯಂತ ಕಾಣಿಸಿಕೊಂಡಿದೆ.

31 ಸದಸ್ಯರ ಬಲದ ನಂಜನಗೂಡು ನಗರಸಭೆಗೆ 2019ರಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ 15, ಕಾಂಗ್ರೆಸ್ 10 ಮತ್ತು ಜಾ.ದಳ 3 ಹಾಗೂ ಮೂವರು ಪಕ್ಷೇತರ ಸದಸ್ಯರು ಗೆಲುವು ಸಾಧಿಸಿದ್ದರು. ಯಾವುದೇ ಪಕ್ಷಕ್ಕೂ ಬಹುಮತ ಇರದ ಕಾರಣ ಅತಂತ್ರವಾಗಿತ್ತು. ಅಲ್ಲದೆ, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಸಂಬಂಧ ವ್ಯಾಜ್ಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಚುನಾವಣೆ
ನಡೆದ ಒಂದು ವರ್ಷದ ನಂತರ ಉಭಯ ಸ್ಥಾನಗಳಿಗೂ ಚುನಾವಣೆ ನಡೆಸಲು ಅನುಮತಿ ದೊರೆತಿತ್ತು.

ಆಗ ಬಿಜೆಪಿಯ ಶಾಸಕರಾಗಿದ್ದ ಹರ್ಷವರ್ಧನ್ ಹಾಗೂ ಲೋಕಸಭಾ ಸದಸ್ಯರಾಗಿದ್ದ ವಿ.ಶ್ರೀನಿವಾಸ್ ಪ್ರಸಾದರ ಬೆಂಬಲದೊಂದಿಗೆ ನಗರಸಭೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಶಕ್ತವಾಗಿತ್ತು.

ಈಗ ಶಾಸಕ ದರ್ಶನ್ ಧ್ರುವನಾರಾಯಣ, ಸಂಸದ ಸುನಿಲ್ ಬೋಸ್ ಇಬ್ಬರೂ ಕಾಂಗ್ರೆಸ್ ಪಕ್ಷದವರಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಬಲ 12 ಕೇರಿದ್ದು, ಬಿಜೆಪಿ 15 ಸದಸ್ಯರನ್ನು ಹೊಂದಿದೆ.

ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿರುವ ಬಿಜೆಪಿ – ಜಾ.ದಳ ಮೈತ್ರಿಯು ನಗರಸಭೆಯಲ್ಲೂ ಮುಂದುವರಿದರೆ, ಜಾದಳದ ಮೂವರು ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಬಲ 18ಕ್ಕೆ ಹೆಚ್ಚಳವಾಗುತ್ತದೆ. ಅದರಿಂದ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಇದು ಮೇಲ್ನೋಟದ ಚಿತ್ರಣವಾಗಿದೆ. ಆದರೆ ಇಲ್ಲಿನ ಒಳ ಹೂರಣ ಮಾತ್ರ ಹಾಗಿಲ್ಲ ಎಂಬುದು ಬಿಜೆಪಿ ನಾಯಕರ ಚಿಂತೆಗೆ ಕಾರಣವಾಗಿದೆ.

ಕಳೆದ ವಿಧಾನ ಪರಿಷತ್ ಮತ್ತು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಆಗಿದ್ದರೂ ಬಿಜೆಪಿಯು, ಜಾ.ದಳದ ನಗರಸಭಾ ಸದಸ್ಯರನ್ನು ಕಡೆಗಣಿಸಿತ್ತು ಎಂಬ ಅಸಮಾಧಾನ ಜಾ.ದಳದಲ್ಲಿ ಬಲವಾಗಿ ಬೇರೂರಿದೆ.

ಇನ್ನು ಪಕ್ಷೇತರ ಸದಸ್ಯರು ಹಿಂದಿನ ಅವಧಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದ್ದು, ಈ ಬಾರಿ ಅವರು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಬೆಂಬಲಕ್ಕೆ ಧಾವಿಸಿದರೆ 10 + 3+ 2 = ಹದಿನೈದಾಗುತ್ತದೆ. ಬಿಜೆಪಿ ಸದಸ್ಯರ ಸಂಖ್ಯೆಯೂ ಅಷ್ಟೇ ಆಗಿದೆ. ಹಾಗಾಗಿ ಜಾ.ದಳ ಸದಸ್ಯರೇ ನಿರ್ಣಾಯಕರಾಗುತ್ತಾರೆ.

ಒಡೆದ ಮನೆಯಂತಾಗಿರುವ ಬಿಜೆಪಿ: ತಾಲ್ಲೂಕಿನಲ್ಲಿ ಬಿಜೆಪಿ ಒಡೆದ ಮನೆಯಂತಾಗಿದ್ದು, ಮುನಿಸಿಕೊಂಡಿರುವ ಸ್ವಪಕ್ಷೀಯರನ್ನು ಸಮಾಧಾಪಡಿಸುವ ಪ್ರಯತ್ನ ನಡೆದಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಈಗಾಗಲೇ ಪಕ್ಷೇತರರು, ಬಿಜೆಪಿ ಮತ್ತು ಜಾ.ದಳ ಸದಸ್ಯರ ಸಂಪರ್ಕ ಸಾಧಿಸಿದೆ ಎನ್ನಲಾಗಿದೆ. ಆದರೆ, ಪಾಳೆಯದಲ್ಲಿ ಇಂತಹ ಯಾವುದೇ ಬೆಳವಣಿಗೆ ಈವರೆಗೂ ನಡೆದಿಲ್ಲ ಎಂದು ಹೇಳಲಾಗುತ್ತಿದೆ.

ಬಿಜೆಪಿಯಲ್ಲಿ ಹದಿನಾಲ್ಕು ತಿಂಗಳುಗಳ ಅಲ್ಪ ಕಾಲದ ಅಧ್ಯಕ್ಷಗಾದಿಗಾಗಿ ಮೀಸಲಾತಿಗೆ ಅರ್ಹರಾಗಿರುವ ಮಹೇಶ ಅತ್ತಿಖಾನೆ, ಗಾಯತ್ರಿ ಮುರುಗೇಶ, ಮೀನಾಕ್ಷಿ ನಾಗರಾಜ್ ವಿಜಯಲಕ್ಷ್ಮಿ ಆಕಾಂಕ್ಷಿಗಳಾಗಿದ್ದು, ಸನ್ನಿವೇಶವನ್ನಾಧರಿಸಿ ಚುನಾವಣೆಯನ್ನು ಎದುರಿಸಬಲ್ಲವರಿಗಾಗಿ ಪಕ್ಷ ಹುಡುಕಾಟ ನಡೆಸಿದೆ.

ಬಿಜೆಪಿ ಎಲ್ಲರ ಮುನಿಸನ್ನು ಈ ಸಮಯದಲ್ಲಿ ತಣಿಸಲು ಸಾಧ್ಯವಾದರೆ ಈಗಲೂ ಅದು ಅಧಿಕಾರ ಉಳಿಸಿಕೊಳ್ಳಬಹುದಾಗಿದೆ. ಆದರೆ, ಅಧ್ಯಕ್ಷರ ಸ್ಥಾನದ ಅಭ್ಯರ್ಥಿಯೇ ಉಪಾಧ್ಯಕ್ಷರ ಚುನಾವಣೆಯ ಭಾರವನ್ನೂ ಹೊರಬೇಕಾಗಿರುವುದು, ಅಧಿಕಾರದ ಅವಧಿಯೂ ಅಲ್ಪ ಸಮಯದ್ದಾಗಿರುವುದರಿಂದ ಹಿಂದೆ ಮುಂದೆ ನೋಡುವಂತಾಗಿದೆ. ಇಂತಹ ಸನ್ನಿವೇಶದಲ್ಲಿ ಮೇಲ್ನೋಟಕ್ಕೆ ಬಹುಮತ ಇರುವಂತೆ ಕಾಣುತ್ತಿರುವ ಬಿಜೆಪಿ- ಜಾ.ದಳ ಮೈತ್ರಿ ಅಧಿಕಾರದ ಗದ್ದಿಗೆ ಉಳಿಸಿಕೊಳ್ಳುವುದೇ ಅಥವಾ ಕಾಂಗ್ರೆಸ್ ಬೀಸುವ ಬಲೆಗೆ ಸಿಲುಕಿ ಅಧಿಕಾರ ಕಳೆದುಕೊಳ್ಳಲಿದೆಯೇ ಎಂಬುದು ಖಚಿತವಾಗಲು ಇನ್ನು ಐದು ದಿನಗಳು ಬಾಕಿ ಉಳಿದಿವೆ.

• ಸೆ.3ರಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ
ಚುನಾವಣೆ
• 14 ತಿಂಗಳ ಅಧಿಕಾರ; ಆಕಾಂಕ್ಷಿಗಳಲ್ಲೇ
ಹಿಂಜರಿಕೆ
ಬಿಜೆಪಿ ವಿರುದ್ಧ ಜಾ.ದಳ ಸದಸ್ಯರ ಅಸಮಾಧಾನ

ಬಿಜೆಪಿ ಜಿಲ್ಲಾಧ್ಯಕ್ಷ ಎಲ್‌.ಆರ್.ಮಹದೇವಸ್ವಾಮಿ ಅವರು ಗುರುವಾರ ಮೈಸೂರಿನಲ್ಲಿ ಸಭೆ ನಡೆಸಿ ಪಕ್ಷದ ನಗರಸಭಾ ಸದಸ್ಯರು, ಮುಖಂಡರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಪಕ್ಷದಿಂದ ಆಯ್ಕೆಯಾಗಿರುವ ಎಲ್ಲ ಹದಿನೈದು ಸದಸ್ಯರಿಗೂ ವಿಪ್ ಜಾರಿ ಮಾಡಲಾಗುತ್ತದೆ. ನಂಜನಗೂಡಲ್ಲೂ ಮೈತ್ರಿ ಮುಂದುವರಿಕೆಗಾಗಿ ಜಾ.ದಳ ಜಿಲ್ಲಾಧ್ಯಕ್ಷ ಎನ್.ನರಸಿಂಹಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಶುಕ್ರವಾರ ಸಂಜೆ ಅಥವಾ ಶನಿವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಹುರಿಯಾಳುಗಳನ್ನು ಜಂಟಿಯಾಗಿ ಘೋಷಿಸಲಾಗುವುದು.

ಬಿ.ಹರ್ಹವರ್ಧನ್‌, ಮಾಜಿ ಶಾಸಕರು.

ಭಾನುವಾರ ಅಥವಾ ಸೋಮವಾರ ಕಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಹಾಗೂ ಮುಖಂಡರ ಸಭೆ ಕರೆದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ .

-ಕಳಲೆ ಕೇಶವಮೂರ್ತಿ, ಮಾಜಿ ಶಾಸಕರು, ಕಾಂಗ್ರೆಸ್ ಪಕ್ಷದ ಮುಖಂಡರು.

ಕಾಂಗ್ರೆಸ್ ಪಕ್ಷದಿಂದ ಶ್ರೀಕಂಠ ಹಾಗೂ ಎಸ್.ಪಿ.ಮಹೇಶ ಅಧ್ಯಕ್ಷ ಗಾದಿಗೆ ಪ್ರಬಲ ಹುರಿಯಾಳುಗಳಾಗಿದ್ದಾರೆ. ಅವರಲ್ಲಿ ಒಬ್ಬರು ಆಯ್ಕೆಯಾಗಲಿದ್ದಾರೆ. ಸ್ಥಳೀಯವಾಗಿ ಜಾ.ದಳದ ಸದಸ್ಯರು ನಮ್ಮ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ. ಅವರೊಂದಿಗೆ ಪಕ್ಷೇತರರ ಬೆಂಬಲದೊಂದಿಗೆ ಈ ಬಾರಿ ನಮ್ಮ ಅಭ್ಯರ್ಥಿ ನಗರಸಭೆಗೆ ಅಧ್ಯಕ್ಷರಾಗಲಿದ್ದಾರೆ.
-ದರ್ಶನ್ ಧ್ರುವನಾರಾಯಣ, ಶಾಸಕರು

 

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

12 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

30 mins ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

5 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

21 hours ago