Andolana originals

ಮನ್ರೇಗಾ: ೭ ತಿಂಗಳಿಂದ ಸಿಬ್ಬಂದಿಗೆ ಶೂನ್ಯ ವೇತನ!

ಕೆ.ಬಿ.ರಮೇಶನಾಯಕ

ಇಂದಿನಿಂದಲೇ ಸಾಮೂಹಿಕ ರಜೆ ಹಾಕಲು ಸಿಬ್ಬಂದಿ ಚಿಂತನೆ 

ನೌಕರರ ಮನವೊಲಿಕೆಗೆ ಅಧಿಕಾರಿಗಳ ಕಸರತ್ತು

ಮೈಸೂರು ಜಿಲ್ಲೆಯಲ್ಲಿ ೧೨೦ ಮಂದಿ ಸಿಬ್ಬಂದಿ

ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ನೌಕರರು

ಕೇಂದ್ರ ಸರ್ಕಾರದ ಅನುದಾನದ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರ

ಮೈಸೂರು: ದಶಕದ ಹಿಂದೆ ಗ್ರಾಮೀಣ ಪ್ರದೇಶದ ಜನರು ಗುಳೆ ಹೋಗದಂತೆ ತಡೆದು ದುಡಿಯುವ ಕೈಗಳಿಗೆ ಕೆಲಸ ನೀಡಲು ಆರಂಭಿಸಿದ ಮನ್ರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮೈಸೂರು ಜಿಲ್ಲೆಯವರು ಸೇರಿದಂತೆ ರಾಜ್ಯದ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಏಳು ತಿಂಗಳುಗಳಿಂದ ವೇತನ ಪಾವತಿಯಾಗದೆ ಕಂಗೆಟ್ಟಿದ್ದಾರೆ.

ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವ ಕಾರಣ ರಾಜ್ಯ ಸರ್ಕಾರ ಕೂಡ ಕೈ ಚೆಲ್ಲುವಂತೆ ಆಗಿದೆ. ಇದರಿಂದಾಗಿ ಕುಟುಂಬ ನಿರ್ವಹಣೆ ಮಾಡಲಾಗದ ನೌಕರರು ತಬ್ಬಲಿತನ ಅನುಭವಿಸುತ್ತಿದ್ದಾರೆ. ವೇತನ ಪಾವತಿಗೆ ಇಂದು – ನಾಳೆ ಎನ್ನುವ ಭರವಸೆ ಕೇಳಿ ಕೇಳಿ ಸಾಕಾಗಿ ಹತಾಶೆಯಿಂದ ಊರಿಗೆ ಮರಳುತ್ತಿರುವ ನೌಕರರು ಸಾಮೂಹಿಕ ರಜೆ ಹಾಕಿ ಮನೆಯಲ್ಲೇ ಉಳಿ ಯುವ ಆಲೋಚನೆಯಲ್ಲಿದ್ದಾರೆ.

ಇದರಿಂದಾಗಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಮನವೊಲಿಸುವ ಕಾರ್ಯದಲ್ಲಿ ತೊಡಗಿರುವುದು ಕಂಡುಬಂದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಕೂಲಿ ಕೆಲಸ ಅರಸಿ ಗುಳೆ ಹೋಗುತ್ತಿದ್ದರಿಂದ ಸ್ಥಳೀಯವಾಗಿ ಕೂಲಿ ನೀಡಲು ಯುಪಿಎ ಸರ್ಕಾರ ಅಽಕಾರದಲ್ಲಿದ್ದಾಗ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನ್ರೇಗಾ) ಯೋಜನೆಯನ್ನು ದೇಶಾದ್ಯಂತ ಆರಂಭಿಸಲಾಗಿತ್ತು.

ವರ್ಷದಿಂದ ವರ್ಷಕ್ಕೆ ಮನ್ರೇಗಾ ಯೋಜನೆಯಡಿ ನೀಡುತ್ತಿದ್ದ ಅನುದಾನವನ್ನು ಹೆಚ್ಚಳ ಮಾಡಿದ್ದರಿಂದ, ಆಯಾಯ ಜಿಲ್ಲೆಗಳಲ್ಲಿ ಮಾನವ ದಿನಗಳ ಸೃಜನೆಗೆ ಗುರಿ ನೀಡಲಾಗುತ್ತಿತ್ತು. ಈ ಯೋಜನೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು ಎಂಬ ಕಾರಣಕ್ಕೆ ವಿವಿಧ ಹುದ್ದೆಗಳನ್ನು ಸೃಷ್ಟಿಸಿ ಹೊರಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿತ್ತು.

ಮೈಸೂರು ಜಿಲ್ಲೆಯಲ್ಲಿ ಮನ್ರೇಗಾ ನಿರ್ವಹಣೆಗೆ ಸಹಾಯಕ ಕಾರ್ಯಕ್ರಮ ಅಧಿಕಾರಿ, ಬೇರ್ ಪುಟ್ ಟೆಕ್ನಿಷಿ ಯನ್, ಐಇಸಿ ಕೋ ಆರ್ಡಿನೇಟರ್, ಜಿಲ್ಲಾ ಎಂಐಎಸ್ ಕೋ ಆರ್ಡಿನೇಟರ್, ತಾಲ್ಲೂಕು ಮಟ್ಟದ ತಾಂತ್ರಿಕ ಕೋಆರ್ಡಿನೇಟರ್‌ಗಳಾಗಿ ೧೨೦ ಮಂದಿ ಕೆಲಸ ಮಾಡುತ್ತಿದ್ದರೆ, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಎಲ್ಲಾ ಸಿಬ್ಬಂದಿಗೆ ಪ್ರತಿ ತಿಂಗಳು ವೇತನ ಪಾವತಿಸಲಾಗುತ್ತಿತ್ತು.

ಕೇಂದ್ರ ಸರ್ಕಾರ ೧೦೦ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದರೆ ಶೇ.೬ರಂತೆ ಆಡಳಿತಾತ್ಮಕ ವೆಚ್ಚಕ್ಕೆ ೬ ಕೋಟಿ ರೂ. ಮೀಸಲಿಟ್ಟು ವೇತನ ಪಾವತಿಸಬೇಕಿತ್ತು. ಆದರೆ, ಕೇಂದ್ರದ ಅನುದಾನ ನಿರೀಕ್ಷೆ ಇಟ್ಟುಕೊಂಡು ಸೆಪ್ಟೆಂಬರ್ ಮತ್ತು ನವೆಂಬರ್ ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು ಕೂಡ ಮೆಟೀರಿಯಲ್ ಕಾಂಪೋನೆಟ್ (ಶೇ.೬೦ ರಷ್ಟು ಮಾನವಶಕ್ತಿ, ಶೇ.೪೦ರಷ್ಟು ಯಂತ್ರೋಪಕರಣ ಬಳಕೆ ನಿಯಮ)ಗೆ ಬಿಡುಗಡೆ ಮಾಡಿ ಬಿಟ್ಟಿದ್ದರು. ಇದರ ನಡುವೆ ಕೆಲವು ಜಿಲ್ಲೆಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿಗೆ ಏಜೆನ್ಸಿ ಆಯ್ಕೆ ವಿಚಾರದಲ್ಲಿ ಗೊಂದಲ ಏರ್ಪಟ್ಟಿತ್ತು. ಈ ಏಜೆನ್ಸಿಯ ಸಮಸ್ಯೆ ಇತ್ಯರ್ಥಪಡಿಸುವ ಹೊತ್ತಿಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೇ ಇರುವುದು ನೌಕರರಿಗೆ ವೇತನ ಪಾವತಿಸಲು ಹಣ ಇಲ್ಲದೆ ಅಧಿಕಾರಿಗಳು ಅಸಹಾಯಕರಾಗಿ ಕುಳಿತಿದ್ದಾರೆ. ಸಿಬ್ಬಂದಿ ವೇತನ ಪಾವತಿಗೆ ಆಗಿರುವ ಆಡಳಿತಾತ್ಮಕ ಮತ್ತು ಅನುದಾನ ಕೊರತೆಯನ್ನು ನಿವಾರಿಸಲು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದು ಒತ್ತಡ ಹೇರಿದ್ದರೆ, ರಾಜ್ಯದ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಸಚಿವರು ಮತ್ತು ಅಧಿಕಾರಿಗಳು ಕೇಂದ್ರದ ಮೇಲೆ ಪದೇ ಪದೇ ಒತ್ತಡ ಹೇರುತ್ತಲೇ ಇದ್ದರೂ ಅನುದಾನ ಮಾತ್ರ ಬಿಡುಗಡೆಯಾಗದ ಕಾರಣ ಏಳು ತಿಂಗಳುಗಳಿಂದ ವೇತನ ಸಿಗದೆ ಕಾರ್ಮಿಕರು ಹತಾಶೆಗೊಂಡಿದ್ದಾರೆ. ಕುಟುಂಬ ನಿರ್ವಹಣೆ, ಮನೆ ಬಾಡಿಗೆ, ಮಕ್ಕಳನ್ನು ಶಾಲೆಗೆ ಸೇರಿಸಲು ಹಣ ಇಲ್ಲದೆ ತುಂಬಾ ತೊಂದರೆ ಆಗಿದೆ ಎಂದು ನಿತ್ಯ ಅಧಿಕಾರಿಗಳ ಎದುರು ನೌಕರರು ಗೋಳು ಹೇಳಿಕೊಳ್ಳುವುದು ಸಾಮಾನ್ಯವಾಗಿದೆ. ಕೇಂದ್ರ ಸರ್ಕಾರವು ಅನುದಾನ ಬಿಡುಗಡೆ ಮಾಡುವ ಮೂಲಕ ನೌಕರರ ಹಿತರಕ್ಷಣೆಗೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

” ಮನ್ರೇಗಾ ಯೋಜನೆಯಡಿ ಬಾಕಿ ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯದಿಂದಲೂ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವಾರ ಬಿಡುಗಡೆ ಆಗುವ ನಿರೀಕ್ಷೆಯಿದೆ. ಅನುದಾನ ವಿಳಂಬದ ಬಗ್ಗೆ ನಮಗೆ ಗೊತ್ತಿಲ್ಲ. ಈತನಕ ಸಕಾಲಕ್ಕೆ ಬಿಡುಗಡೆ ಆಗುತ್ತಿತ್ತು.”

-ಡಾ.ಎಂ.ಕೃಷ್ಣರಾಜು, ಉಪ ಕಾರ್ಯದರ್ಶಿ, ಜಿಪಂ

” ಮನ್ರೇಗಾ ಯೋಜನೆಯಡಿ ಪ್ರಗತಿ ಸಾಧಿಸಲು ಸಿಬ್ಬಂದಿ ಪಾತ್ರ ಅಪಾರವಿದೆ. ಪ್ರತಿಯೊಂದು ಕಾಮಗಾರಿಯ ಮೇಲೂ ನಿಗಾ, ಲೆಕ್ಕಪತ್ರ ಸೇರಿದಂತೆ ಪ್ರತಿಯೊಂದು ನಿರ್ವಹಣೆ ಮಾಡುವ ನಮಗೆ ಏಳು ತಿಂಗಳುಗಳಿಂದ ವೇತನ ಇಲ್ಲದೆ ಸಮಸ್ಯೆ ಆಗಿದೆ. ಅಧಿಕಾರಿಗಳು ಹೇಳುವ ಆಶ್ವಾಸನೆ ಮಾತು ಕೇಳಿ ಕೇಳಿ ಸಾಕಾಗಿದೆ. ಕೇಂದ್ರ ಕೊಡುವ ತನಕ ಕಾಯದೆ ಜಿಪಂನ ಯಾವುದಾದರೂ ನಿಧಿಯಲ್ಲಿ ವೇತನ ಪಾವತಿಸಲಿ.”

– ಹೆಸರು ಹೇಳಲು ಇಚ್ಛಿಸದ ಸಿಬ್ಬಂದಿ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

6 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

6 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

7 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

8 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

13 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

13 hours ago