Andolana originals

ಟ್ರಂಪ್ ಸಲಹೆಗಾರರಾಗಿ ನಟರಾಜ್ ಕೋಟೆ ನೇಮಕ

ಅಮೆರಿಕದಲ್ಲೂ ಮೊಳಗುತ್ತಿರುವ ಕೋಟೆ ಹೆಸರು

ಮಂಜು ಕೋಟೆ
ಎಚ್. ಡಿ. ಕೋಟೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲಹೆಗಾರರಾಗಿ ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆಯ ಕರ್ನಲ್ ನಟರಾಜ್ ಕೋಟೆ ಅವರು ನೇಮಕಗೊಂಡಿದ್ದಾರೆ.

ಪಟ್ಟಣದ ಎರಡನೇ ಮುಖ್ಯರಸ್ತೆಯ ಮಗ್ಗೆ ವಿಶ್ವೇಶ್ವರಯ್ಯ ಮತ್ತು ಸುಮಿತ್ರ ಅವರ ಮೊದಲನೇ ಪುತ್ರ ನಟರಾಜ್, ಇವರು ಅಮೆರಿಕ ದೇಶದ ಅಧ್ಯಕ್ಷರಿಗೆ ಸಲಹೆಗಾರರಾಗಿ ನೇಮಕವಾಗಿರುವುದು ತಾಲ್ಲೂಕು ಮತ್ತು ಕರ್ನಾಟಕದ ಜನರಲ್ಲಿ ಸಂತಸ ಮೂಡಿಸಿದೆ. ನಟರಾಜ್ ಅವರು ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾಭ್ಯಾಸವನ್ನು ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಮಾಡಿ, ನಂತರ ಮೈಸೂರು ಮತ್ತು ಬೆಂಗಳೂರಿನಲ್ಲಿ ವಿವಿಧೆಡೆ ವಿದ್ಯಾಭ್ಯಾಸ ಮಾಡಿ ೩೦ ವರ್ಷಗಳ ಹಿಂದೆ ಅಮೆರಿಕದಲ್ಲಿ ಖಾಸಗಿ ಕೆಲಸ ಮಾಡುತ್ತಾ ಹೋಟೆಲ್ ಉದ್ಯಮ ಪ್ರಾರಂಭಿಸಿ, ಅಲ್ಲಿ ಪ್ರಬಲ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಇವರ ಕಾರ್ಯವೈಖರಿಯನ್ನು ಗುರುತಿಸಿದ ಅಮೆರಿಕ ಸರ್ಕಾರ ಕೆಲ ವರ್ಷಗಳ ಹಿಂದೆ ಕರ್ನಲ್ ಪ್ರಶಸ್ತಿಯನ್ನು ನೀಡಿತ್ತು. ಕಳೆದ ಬಾರಿ ಅಮೆರಿಕದಲ್ಲಿ ಟ್ರಂಪ್ ಅಧ್ಯಕ್ಷರಾಗಿ ಆಡಳಿತ ನಡೆಸಿದ ಸಂದರ್ಭದಲ್ಲಿ ಸಲಹೆಗಾರರಾಗಿ ನೇಮಕವಾಗಿದ್ದರು. ಈಗ ಮತ್ತೆ ಟ್ರಂಪ್ ಅವರು ಅಧಿಕಾರಕ್ಕೆ ಬಂದಿದ್ದು, ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ನಟರಾಜ್ ಅವರಿಗೆ ಸಚಿವ ಸಂಪುಟ ದರ್ಜೆಯ ಹುದ್ದೆ ನೀಡಿ ಸಲಹೆ ಗಾರರನ್ನಾಗಿ ನೇಮಕ ಮಾಡಿದ್ದಾರೆ.

ಚಿಕಾಗೋ ಸಮೀಪ ಕುಟುಂಬ ಸಮೇತ ಉದ್ಯಮ ನಡೆಸುತ್ತಿರುವ ನಟರಾಜ್, ವರ್ಷಕ್ಕೆ ಎರಡು ತಿಂಗಳು ಬೆಂಗಳೂರು ಮತ್ತು ಕೋಟೆ ಪಟ್ಟಣದ ಮನೆಯಲ್ಲಿ ವಾಸ್ತವ್ಯ ಹೂಡಿ ಕುಟುಂಬಸ್ಥರೊಡನೆ ಮತ್ತು ಸ್ನೇಹಿತರೊಡನೆ ಕಾಲ ಕಳೆಯುತ್ತಾರೆ. ಇಲ್ಲಿನ ಸಂಸ್ಕ ತಿ, ಭಾಷೆ, ನಾಡು, ನುಡಿಗೆ ಹೆಚ್ಚು ಒತ್ತು ನೀಡುತ್ತಾರೆ.

ಅಮೆರಿಕದ ಅಧ್ಯಕ್ಷರು ಭಾರತೀಯರಿಗೆ ಸ್ಥಾನಮಾನ ಕೊಡಬೇಕೆಂಬ ನಿಟ್ಟಿನಲ್ಲಿ ನನ್ನನ್ನು ಮತ್ತೊಮ್ಮೆ ಅವರ ಸಲಹೆಗಾರರನ್ನಾಗಿ ನೇಮಕ ಮಾಡಿ ಕೊಂಡಿರುವುದು ಸಂತಸ ಮೂಡಿಸಿದೆ. ಡೊನಾಲ್ಡ್ ಟ್ರಂಪ್ ಅವರು ದೇಶದ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕೆಂಬ ಆಲೋಚನೆ ಮಾಡಿ ಕಾರ್ಯೋನ್ಮುಖರಾಗುತ್ತಾರೆ. ವಿದೇಶದಲ್ಲಿಯೂ ನಮ್ಮ ‘ಕೋಟೆ’ ಹೆಸರು ಚಾಲನೆ ಯಲ್ಲಿ ಇರಬೇಕೆಂಬ ಉದ್ದೇಶದಿಂದ ಅಲ್ಲಿನ ದಾಖಲಾತಿಗಳಲ್ಲೂ ಕರ್ನಲ್ ನಟರಾಜ್ ಕೋಟೆ ಎಂಬ ಹೆಸರು ಉಳಿಸಿಕೊಂಡಿದ್ದೇನೆ. ಅಮೆರಿಕದ ಅಧ್ಯಕ್ಷರ ಕಚೇರಿಯಲ್ಲಿ ಹಾಗೂ ಇನ್ನಿತರ ಭಾಗದ ಪ್ರಮುಖರು ಸಹ ನನ್ನನ್ನು ಕೋಟೆ ಎಂದೇ ಕರೆಯುತ್ತಾರೆ. ಆಗ ನಮ್ಮ ಊರಿನ ಹೆಸರಿನ ಬಗ್ಗೆ ಹೆಮ್ಮೆ ಆಗುತ್ತದೆ. -ಕರ್ನಲ್ ನಟರಾಜ್ ಕೋಟೆ, ಅಮೆರಿಕ ಅಧ್ಯಕ್ಷ ಟ್ರಂಪ್ ಸಲಹೆಗಾರರು.

 

ಆಂದೋಲನ ಡೆಸ್ಕ್

Recent Posts

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…

2 mins ago

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

36 mins ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

1 hour ago

ಟಿ.ನರಸೀಪುರ: ಗುಂಜಾನರಸಿಂಹಸ್ವಾಮಿ ದರ್ಶನಕ್ಕೆ ಹರಿದುಬಂದ ಜನಸಾಗರ

ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…

2 hours ago

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

3 hours ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

3 hours ago