Andolana originals

ಟ್ರಂಪ್ ಸಲಹೆಗಾರರಾಗಿ ನಟರಾಜ್ ಕೋಟೆ ನೇಮಕ

ಅಮೆರಿಕದಲ್ಲೂ ಮೊಳಗುತ್ತಿರುವ ಕೋಟೆ ಹೆಸರು

ಮಂಜು ಕೋಟೆ
ಎಚ್. ಡಿ. ಕೋಟೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲಹೆಗಾರರಾಗಿ ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆಯ ಕರ್ನಲ್ ನಟರಾಜ್ ಕೋಟೆ ಅವರು ನೇಮಕಗೊಂಡಿದ್ದಾರೆ.

ಪಟ್ಟಣದ ಎರಡನೇ ಮುಖ್ಯರಸ್ತೆಯ ಮಗ್ಗೆ ವಿಶ್ವೇಶ್ವರಯ್ಯ ಮತ್ತು ಸುಮಿತ್ರ ಅವರ ಮೊದಲನೇ ಪುತ್ರ ನಟರಾಜ್, ಇವರು ಅಮೆರಿಕ ದೇಶದ ಅಧ್ಯಕ್ಷರಿಗೆ ಸಲಹೆಗಾರರಾಗಿ ನೇಮಕವಾಗಿರುವುದು ತಾಲ್ಲೂಕು ಮತ್ತು ಕರ್ನಾಟಕದ ಜನರಲ್ಲಿ ಸಂತಸ ಮೂಡಿಸಿದೆ. ನಟರಾಜ್ ಅವರು ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾಭ್ಯಾಸವನ್ನು ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಮಾಡಿ, ನಂತರ ಮೈಸೂರು ಮತ್ತು ಬೆಂಗಳೂರಿನಲ್ಲಿ ವಿವಿಧೆಡೆ ವಿದ್ಯಾಭ್ಯಾಸ ಮಾಡಿ ೩೦ ವರ್ಷಗಳ ಹಿಂದೆ ಅಮೆರಿಕದಲ್ಲಿ ಖಾಸಗಿ ಕೆಲಸ ಮಾಡುತ್ತಾ ಹೋಟೆಲ್ ಉದ್ಯಮ ಪ್ರಾರಂಭಿಸಿ, ಅಲ್ಲಿ ಪ್ರಬಲ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಇವರ ಕಾರ್ಯವೈಖರಿಯನ್ನು ಗುರುತಿಸಿದ ಅಮೆರಿಕ ಸರ್ಕಾರ ಕೆಲ ವರ್ಷಗಳ ಹಿಂದೆ ಕರ್ನಲ್ ಪ್ರಶಸ್ತಿಯನ್ನು ನೀಡಿತ್ತು. ಕಳೆದ ಬಾರಿ ಅಮೆರಿಕದಲ್ಲಿ ಟ್ರಂಪ್ ಅಧ್ಯಕ್ಷರಾಗಿ ಆಡಳಿತ ನಡೆಸಿದ ಸಂದರ್ಭದಲ್ಲಿ ಸಲಹೆಗಾರರಾಗಿ ನೇಮಕವಾಗಿದ್ದರು. ಈಗ ಮತ್ತೆ ಟ್ರಂಪ್ ಅವರು ಅಧಿಕಾರಕ್ಕೆ ಬಂದಿದ್ದು, ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ನಟರಾಜ್ ಅವರಿಗೆ ಸಚಿವ ಸಂಪುಟ ದರ್ಜೆಯ ಹುದ್ದೆ ನೀಡಿ ಸಲಹೆ ಗಾರರನ್ನಾಗಿ ನೇಮಕ ಮಾಡಿದ್ದಾರೆ.

ಚಿಕಾಗೋ ಸಮೀಪ ಕುಟುಂಬ ಸಮೇತ ಉದ್ಯಮ ನಡೆಸುತ್ತಿರುವ ನಟರಾಜ್, ವರ್ಷಕ್ಕೆ ಎರಡು ತಿಂಗಳು ಬೆಂಗಳೂರು ಮತ್ತು ಕೋಟೆ ಪಟ್ಟಣದ ಮನೆಯಲ್ಲಿ ವಾಸ್ತವ್ಯ ಹೂಡಿ ಕುಟುಂಬಸ್ಥರೊಡನೆ ಮತ್ತು ಸ್ನೇಹಿತರೊಡನೆ ಕಾಲ ಕಳೆಯುತ್ತಾರೆ. ಇಲ್ಲಿನ ಸಂಸ್ಕ ತಿ, ಭಾಷೆ, ನಾಡು, ನುಡಿಗೆ ಹೆಚ್ಚು ಒತ್ತು ನೀಡುತ್ತಾರೆ.

ಅಮೆರಿಕದ ಅಧ್ಯಕ್ಷರು ಭಾರತೀಯರಿಗೆ ಸ್ಥಾನಮಾನ ಕೊಡಬೇಕೆಂಬ ನಿಟ್ಟಿನಲ್ಲಿ ನನ್ನನ್ನು ಮತ್ತೊಮ್ಮೆ ಅವರ ಸಲಹೆಗಾರರನ್ನಾಗಿ ನೇಮಕ ಮಾಡಿ ಕೊಂಡಿರುವುದು ಸಂತಸ ಮೂಡಿಸಿದೆ. ಡೊನಾಲ್ಡ್ ಟ್ರಂಪ್ ಅವರು ದೇಶದ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕೆಂಬ ಆಲೋಚನೆ ಮಾಡಿ ಕಾರ್ಯೋನ್ಮುಖರಾಗುತ್ತಾರೆ. ವಿದೇಶದಲ್ಲಿಯೂ ನಮ್ಮ ‘ಕೋಟೆ’ ಹೆಸರು ಚಾಲನೆ ಯಲ್ಲಿ ಇರಬೇಕೆಂಬ ಉದ್ದೇಶದಿಂದ ಅಲ್ಲಿನ ದಾಖಲಾತಿಗಳಲ್ಲೂ ಕರ್ನಲ್ ನಟರಾಜ್ ಕೋಟೆ ಎಂಬ ಹೆಸರು ಉಳಿಸಿಕೊಂಡಿದ್ದೇನೆ. ಅಮೆರಿಕದ ಅಧ್ಯಕ್ಷರ ಕಚೇರಿಯಲ್ಲಿ ಹಾಗೂ ಇನ್ನಿತರ ಭಾಗದ ಪ್ರಮುಖರು ಸಹ ನನ್ನನ್ನು ಕೋಟೆ ಎಂದೇ ಕರೆಯುತ್ತಾರೆ. ಆಗ ನಮ್ಮ ಊರಿನ ಹೆಸರಿನ ಬಗ್ಗೆ ಹೆಮ್ಮೆ ಆಗುತ್ತದೆ. -ಕರ್ನಲ್ ನಟರಾಜ್ ಕೋಟೆ, ಅಮೆರಿಕ ಅಧ್ಯಕ್ಷ ಟ್ರಂಪ್ ಸಲಹೆಗಾರರು.

 

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

6 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

7 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

8 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

8 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

10 hours ago