Andolana originals

ಟ್ರಂಪ್ ಸಲಹೆಗಾರರಾಗಿ ನಟರಾಜ್ ಕೋಟೆ ನೇಮಕ

ಅಮೆರಿಕದಲ್ಲೂ ಮೊಳಗುತ್ತಿರುವ ಕೋಟೆ ಹೆಸರು

ಮಂಜು ಕೋಟೆ
ಎಚ್. ಡಿ. ಕೋಟೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲಹೆಗಾರರಾಗಿ ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆಯ ಕರ್ನಲ್ ನಟರಾಜ್ ಕೋಟೆ ಅವರು ನೇಮಕಗೊಂಡಿದ್ದಾರೆ.

ಪಟ್ಟಣದ ಎರಡನೇ ಮುಖ್ಯರಸ್ತೆಯ ಮಗ್ಗೆ ವಿಶ್ವೇಶ್ವರಯ್ಯ ಮತ್ತು ಸುಮಿತ್ರ ಅವರ ಮೊದಲನೇ ಪುತ್ರ ನಟರಾಜ್, ಇವರು ಅಮೆರಿಕ ದೇಶದ ಅಧ್ಯಕ್ಷರಿಗೆ ಸಲಹೆಗಾರರಾಗಿ ನೇಮಕವಾಗಿರುವುದು ತಾಲ್ಲೂಕು ಮತ್ತು ಕರ್ನಾಟಕದ ಜನರಲ್ಲಿ ಸಂತಸ ಮೂಡಿಸಿದೆ. ನಟರಾಜ್ ಅವರು ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾಭ್ಯಾಸವನ್ನು ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಮಾಡಿ, ನಂತರ ಮೈಸೂರು ಮತ್ತು ಬೆಂಗಳೂರಿನಲ್ಲಿ ವಿವಿಧೆಡೆ ವಿದ್ಯಾಭ್ಯಾಸ ಮಾಡಿ ೩೦ ವರ್ಷಗಳ ಹಿಂದೆ ಅಮೆರಿಕದಲ್ಲಿ ಖಾಸಗಿ ಕೆಲಸ ಮಾಡುತ್ತಾ ಹೋಟೆಲ್ ಉದ್ಯಮ ಪ್ರಾರಂಭಿಸಿ, ಅಲ್ಲಿ ಪ್ರಬಲ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಇವರ ಕಾರ್ಯವೈಖರಿಯನ್ನು ಗುರುತಿಸಿದ ಅಮೆರಿಕ ಸರ್ಕಾರ ಕೆಲ ವರ್ಷಗಳ ಹಿಂದೆ ಕರ್ನಲ್ ಪ್ರಶಸ್ತಿಯನ್ನು ನೀಡಿತ್ತು. ಕಳೆದ ಬಾರಿ ಅಮೆರಿಕದಲ್ಲಿ ಟ್ರಂಪ್ ಅಧ್ಯಕ್ಷರಾಗಿ ಆಡಳಿತ ನಡೆಸಿದ ಸಂದರ್ಭದಲ್ಲಿ ಸಲಹೆಗಾರರಾಗಿ ನೇಮಕವಾಗಿದ್ದರು. ಈಗ ಮತ್ತೆ ಟ್ರಂಪ್ ಅವರು ಅಧಿಕಾರಕ್ಕೆ ಬಂದಿದ್ದು, ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ನಟರಾಜ್ ಅವರಿಗೆ ಸಚಿವ ಸಂಪುಟ ದರ್ಜೆಯ ಹುದ್ದೆ ನೀಡಿ ಸಲಹೆ ಗಾರರನ್ನಾಗಿ ನೇಮಕ ಮಾಡಿದ್ದಾರೆ.

ಚಿಕಾಗೋ ಸಮೀಪ ಕುಟುಂಬ ಸಮೇತ ಉದ್ಯಮ ನಡೆಸುತ್ತಿರುವ ನಟರಾಜ್, ವರ್ಷಕ್ಕೆ ಎರಡು ತಿಂಗಳು ಬೆಂಗಳೂರು ಮತ್ತು ಕೋಟೆ ಪಟ್ಟಣದ ಮನೆಯಲ್ಲಿ ವಾಸ್ತವ್ಯ ಹೂಡಿ ಕುಟುಂಬಸ್ಥರೊಡನೆ ಮತ್ತು ಸ್ನೇಹಿತರೊಡನೆ ಕಾಲ ಕಳೆಯುತ್ತಾರೆ. ಇಲ್ಲಿನ ಸಂಸ್ಕ ತಿ, ಭಾಷೆ, ನಾಡು, ನುಡಿಗೆ ಹೆಚ್ಚು ಒತ್ತು ನೀಡುತ್ತಾರೆ.

ಅಮೆರಿಕದ ಅಧ್ಯಕ್ಷರು ಭಾರತೀಯರಿಗೆ ಸ್ಥಾನಮಾನ ಕೊಡಬೇಕೆಂಬ ನಿಟ್ಟಿನಲ್ಲಿ ನನ್ನನ್ನು ಮತ್ತೊಮ್ಮೆ ಅವರ ಸಲಹೆಗಾರರನ್ನಾಗಿ ನೇಮಕ ಮಾಡಿ ಕೊಂಡಿರುವುದು ಸಂತಸ ಮೂಡಿಸಿದೆ. ಡೊನಾಲ್ಡ್ ಟ್ರಂಪ್ ಅವರು ದೇಶದ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕೆಂಬ ಆಲೋಚನೆ ಮಾಡಿ ಕಾರ್ಯೋನ್ಮುಖರಾಗುತ್ತಾರೆ. ವಿದೇಶದಲ್ಲಿಯೂ ನಮ್ಮ ‘ಕೋಟೆ’ ಹೆಸರು ಚಾಲನೆ ಯಲ್ಲಿ ಇರಬೇಕೆಂಬ ಉದ್ದೇಶದಿಂದ ಅಲ್ಲಿನ ದಾಖಲಾತಿಗಳಲ್ಲೂ ಕರ್ನಲ್ ನಟರಾಜ್ ಕೋಟೆ ಎಂಬ ಹೆಸರು ಉಳಿಸಿಕೊಂಡಿದ್ದೇನೆ. ಅಮೆರಿಕದ ಅಧ್ಯಕ್ಷರ ಕಚೇರಿಯಲ್ಲಿ ಹಾಗೂ ಇನ್ನಿತರ ಭಾಗದ ಪ್ರಮುಖರು ಸಹ ನನ್ನನ್ನು ಕೋಟೆ ಎಂದೇ ಕರೆಯುತ್ತಾರೆ. ಆಗ ನಮ್ಮ ಊರಿನ ಹೆಸರಿನ ಬಗ್ಗೆ ಹೆಮ್ಮೆ ಆಗುತ್ತದೆ. -ಕರ್ನಲ್ ನಟರಾಜ್ ಕೋಟೆ, ಅಮೆರಿಕ ಅಧ್ಯಕ್ಷ ಟ್ರಂಪ್ ಸಲಹೆಗಾರರು.

 

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

10 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

11 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

12 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

12 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

12 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

13 hours ago