Andolana originals

ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ವಿಳಂಬ: ಆರೋಪ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು ತಿಂಗಳುಗಳೇ ಕಳೆದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಹತ್ತಾರು ಕಿ.ಮೀ. ರಸ್ತೆ ಅಗೆದು ಕಾಮಗಾರಿ ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಕಿರಿಕಿರಿಯಾಗುತ್ತಿದೆ. ರಸ್ತೆ ಅಗಲೀಕರಣ ಮಾಡುತ್ತಿದ್ದರೂ ವಿದ್ಯುತ್ ಕಂಬಗಳು, ಮರಗಳನ್ನು ತೆರವು ಮಾಡಿಲ್ಲ. ಕೆಲವು ಪೆಟ್ರೋಲ್ ಬಂಕ್‌ಗಳು ಮೊದಲೇ ರಾಷ್ಟ್ರೀಯ ಹೆದ್ದಾರಿಗೆ ಚಾಚಿದಂತೆ ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ತೆರವು ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ರಸ್ತೆಗೆ ಮಣ್ಣು, ಜಲ್ಲಿ ಹಾಕಿ ಬಿಗಿ ಮಾಡುವ ಕಾರ್ಯ ನಡೆಯುತ್ತಿದ್ದರೂ ಮರ ಮತ್ತು ಕಂಬಗಳನ್ನು ತೆರವು ಮಾಡದೆ ಇರುವುದರಿಂದ ನಂತರ ಮರ, ಕಂಬಗಳನ್ನು ತೆರವುಗೊಳಿಸುವ ವೇಳೆ ರಸ್ತೆ ಸಡಿಲವಾಗುತ್ತದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ರಸ್ತೆಯನ್ನು ಐದು ಕಿ.ಮೀ. ಅಂತರದವರೆಗೆ ಮಾಡಿ, ನಂತರ ಮತ್ತೆ ೫ ಕಿ.ಮೀ.ನಂತೆ ಮಾಡಿದರೆ ಸಮಸ್ಯೆಯಾಗುವುದಿಲ್ಲ.

ಆದರೆ ಹತ್ತಾರು ಕಿ.ಮೀ. ದೂರ ಒಟ್ಟಿಗೆ ರಸ್ತೆ ಅಗಲಿಕರಣ ಮಾಡಲು ಮುಂದಾಗಿ ಮಂದಗತಿಯಲ್ಲಿ ಕಾಮಗಾರಿ ನಡೆಸಿದರೆ ವಾಹನ ಸವಾರರಿಗೆ ಕಿರಿಕಿರಿಯಾಗುತ್ತದೆ ಎಂಬುದು ವಾಹನ ಸವಾರರ ಆರೋಪ.

ಇದರ ಬಗ್ಗೆ ಪ್ರಶ್ನಿಸಲು ವಾಹನ ಸವಾರರು ಮುಂದಾದರೆ ನಮಗೆ ಕನ್ನಡ ಬರುವುದಿಲ್ಲ ಎಂದು ಇಂಜಿನಿಯರ್, ಸಿಬ್ಬಂದಿ, ಕಾರ್ಮಿಕರು ಹೇಳುತ್ತಾರೆ. ತಮಿಳುನಾಡು ಮೂಲದ ಕಂಪೆನಿಗೆ ಗುತ್ತಿಗೆ ನೀಡಲಾಗಿದೆ ಎನ್ನಲಾಗಿದೆ.

ವ್ಯಾಪಾರಸ್ಥರಿಗೆ ನಷ್ಟ: ರಸ್ತೆ ಬದಿಯಲ್ಲಿ ಅಗೆದಿರುವ ಕಾರಣ ಅಂಗಡಿ ಮುಂಗಟ್ಟು ಇಟ್ಟುಕೊಂಡಿರುವ ವ್ಯಾಪಾರಸ್ಥರಿಗೆ ಸಮಸ್ಯೆಯಾಗುತ್ತಿದೆ. ಎರಡೂ ಬದಿಗಳಲ್ಲಿ ರಸ್ತೆಯನ್ನು ಅಗೆದಿರುವ ಕಾರಣ ರಸ್ತೆ ಕಿರಿದಾ ಗಿದ್ದು, ಟಿಪ್ಪರ್ ಮತ್ತಿತರ ವಾಹನಗಳ ಚಾಲನೆಯಿಂದ ಅಪಘಾತಗಳಾಗುವ ಆತಂಕವಿದೆ.

” ರಸ್ತೆ ಅಗಲೀಕರಣ ಕಾಮಗಾರಿ ಕಳಪೆಯಾಗಿದೆ. ಜಲ್ಲಿ ಬಳ ಸಿಲ್ಲ, ಮಣ್ಣು ಮಿಶ್ರಿತ ಮಾಡಿ ಹಾಕಿದ್ದಾರೆ. ಸರಿಯಾಗಿ ಅಗಲೀಕರಣವಾಗುತ್ತಿಲ್ಲ. ಸೆಸ್ ನವರು ಕಂಬಗಳನ್ನು, ಅರಣ್ಯ ಇಲಾಖೆಯವರು ಮರಗಳನ್ನು ತೆರವುಗೊಳಿಸಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ.”

ಮಹದೇವಪ್ಪ, ರೈತ ಮುಖಂಡ, ಮಾಡ್ರಹಳ್ಳಿ

” ಅವೈಜ್ಞಾನಿಕ ಕಾಮಗಾರಿ ನಡೆ ಯುತ್ತಿದೆ. ಕೆಲವೆಡೆ ಮಾತ್ರ ಚತುಷ್ಪಥ ಮಾಡುತ್ತಿದ್ದು, ಕೆಲವೆಡೆ ಯಥಾಸ್ಥಿತಿ ಇದೆ. ಇದರಿಂದ ವಾಹನ ಸವಾರರಿಗೆ ರಸ್ತೆಯ ಅಂದಾಜು ತಿಳಿಯದೆ ಅಪಘಾತಗಳಾಗಲಿದೆ. ಗ್ರಾವಲ್ಸ್ ಕಡಿಮೆ ಹಾಕಿ ಗುಣಮಟ್ಟದ ರಸ್ತೆ ಕಿತ್ತು ಅದ್ವಾನ ಮಾಡಿದ್ದಾರೆ. ಬೇಗೂರಲ್ಲಿ ಚತುಷ್ಪಥ ಮತ್ತು ಸರ್ವೀಸ್ ರಸ್ತೆಯಾಗಬೇಕು.”

ರವಿ ಕಮರಹಳ್ಳಿ, ಬಿಜೆಪಿ ಯುವ ಮುಖಂಡ

” ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿತ್ತು. ರಸ್ತೆ ಅಗಲೀಕರಣದಿಂದಅಪಘಾತಗಳ ಸಂಖ್ಯೆ ಕಡಿಮೆಯಾಗಲಿದೆ. ಗುಂಡ್ಲುಪೇಟೆ-ಮೈಸೂರು ರಸ್ತೆ ಅಗಲೀಕರಣದಿಂದ ವಾಹನ ಸವಾರರಿಗೂ ಸಮಯ ಉಳಿಯುತ್ತದೆ. ಮರಗಳ ತೆರವಿಗೆ ಅರಣ್ಯ ಇಲಾಖೆಯಿಂದ ಎನ್‌ಒಸಿ ಕೆಲವೇ ದಿನಗಳಲ್ಲಿ ಸಿಗಲಿದ್ದು, ರಸ್ತೆ ಅಭಿವೃದ್ಧಿ ಮಾಡುವಾಗ ಸಮಸ್ಯೆ ಎದುರಾಗುವುದು ಸಹಜ. ನಮ್ಮ ತಾಲ್ಲೂಕಿನ ಸಂಪರ್ಕ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಎಲ್ಲರೂ ಸಹಕರಿಸಬೇಕು.”

ಎಚ್.ಎಂ.ಗಣೇಶ್ ಪ್ರಸಾದ್, ಶಾಸಕ

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

6 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

7 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

7 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

16 hours ago