Andolana originals

ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ವಿಳಂಬ: ಆರೋಪ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು ತಿಂಗಳುಗಳೇ ಕಳೆದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಹತ್ತಾರು ಕಿ.ಮೀ. ರಸ್ತೆ ಅಗೆದು ಕಾಮಗಾರಿ ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಕಿರಿಕಿರಿಯಾಗುತ್ತಿದೆ. ರಸ್ತೆ ಅಗಲೀಕರಣ ಮಾಡುತ್ತಿದ್ದರೂ ವಿದ್ಯುತ್ ಕಂಬಗಳು, ಮರಗಳನ್ನು ತೆರವು ಮಾಡಿಲ್ಲ. ಕೆಲವು ಪೆಟ್ರೋಲ್ ಬಂಕ್‌ಗಳು ಮೊದಲೇ ರಾಷ್ಟ್ರೀಯ ಹೆದ್ದಾರಿಗೆ ಚಾಚಿದಂತೆ ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ತೆರವು ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ರಸ್ತೆಗೆ ಮಣ್ಣು, ಜಲ್ಲಿ ಹಾಕಿ ಬಿಗಿ ಮಾಡುವ ಕಾರ್ಯ ನಡೆಯುತ್ತಿದ್ದರೂ ಮರ ಮತ್ತು ಕಂಬಗಳನ್ನು ತೆರವು ಮಾಡದೆ ಇರುವುದರಿಂದ ನಂತರ ಮರ, ಕಂಬಗಳನ್ನು ತೆರವುಗೊಳಿಸುವ ವೇಳೆ ರಸ್ತೆ ಸಡಿಲವಾಗುತ್ತದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ರಸ್ತೆಯನ್ನು ಐದು ಕಿ.ಮೀ. ಅಂತರದವರೆಗೆ ಮಾಡಿ, ನಂತರ ಮತ್ತೆ ೫ ಕಿ.ಮೀ.ನಂತೆ ಮಾಡಿದರೆ ಸಮಸ್ಯೆಯಾಗುವುದಿಲ್ಲ.

ಆದರೆ ಹತ್ತಾರು ಕಿ.ಮೀ. ದೂರ ಒಟ್ಟಿಗೆ ರಸ್ತೆ ಅಗಲಿಕರಣ ಮಾಡಲು ಮುಂದಾಗಿ ಮಂದಗತಿಯಲ್ಲಿ ಕಾಮಗಾರಿ ನಡೆಸಿದರೆ ವಾಹನ ಸವಾರರಿಗೆ ಕಿರಿಕಿರಿಯಾಗುತ್ತದೆ ಎಂಬುದು ವಾಹನ ಸವಾರರ ಆರೋಪ.

ಇದರ ಬಗ್ಗೆ ಪ್ರಶ್ನಿಸಲು ವಾಹನ ಸವಾರರು ಮುಂದಾದರೆ ನಮಗೆ ಕನ್ನಡ ಬರುವುದಿಲ್ಲ ಎಂದು ಇಂಜಿನಿಯರ್, ಸಿಬ್ಬಂದಿ, ಕಾರ್ಮಿಕರು ಹೇಳುತ್ತಾರೆ. ತಮಿಳುನಾಡು ಮೂಲದ ಕಂಪೆನಿಗೆ ಗುತ್ತಿಗೆ ನೀಡಲಾಗಿದೆ ಎನ್ನಲಾಗಿದೆ.

ವ್ಯಾಪಾರಸ್ಥರಿಗೆ ನಷ್ಟ: ರಸ್ತೆ ಬದಿಯಲ್ಲಿ ಅಗೆದಿರುವ ಕಾರಣ ಅಂಗಡಿ ಮುಂಗಟ್ಟು ಇಟ್ಟುಕೊಂಡಿರುವ ವ್ಯಾಪಾರಸ್ಥರಿಗೆ ಸಮಸ್ಯೆಯಾಗುತ್ತಿದೆ. ಎರಡೂ ಬದಿಗಳಲ್ಲಿ ರಸ್ತೆಯನ್ನು ಅಗೆದಿರುವ ಕಾರಣ ರಸ್ತೆ ಕಿರಿದಾ ಗಿದ್ದು, ಟಿಪ್ಪರ್ ಮತ್ತಿತರ ವಾಹನಗಳ ಚಾಲನೆಯಿಂದ ಅಪಘಾತಗಳಾಗುವ ಆತಂಕವಿದೆ.

” ರಸ್ತೆ ಅಗಲೀಕರಣ ಕಾಮಗಾರಿ ಕಳಪೆಯಾಗಿದೆ. ಜಲ್ಲಿ ಬಳ ಸಿಲ್ಲ, ಮಣ್ಣು ಮಿಶ್ರಿತ ಮಾಡಿ ಹಾಕಿದ್ದಾರೆ. ಸರಿಯಾಗಿ ಅಗಲೀಕರಣವಾಗುತ್ತಿಲ್ಲ. ಸೆಸ್ ನವರು ಕಂಬಗಳನ್ನು, ಅರಣ್ಯ ಇಲಾಖೆಯವರು ಮರಗಳನ್ನು ತೆರವುಗೊಳಿಸಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ.”

ಮಹದೇವಪ್ಪ, ರೈತ ಮುಖಂಡ, ಮಾಡ್ರಹಳ್ಳಿ

” ಅವೈಜ್ಞಾನಿಕ ಕಾಮಗಾರಿ ನಡೆ ಯುತ್ತಿದೆ. ಕೆಲವೆಡೆ ಮಾತ್ರ ಚತುಷ್ಪಥ ಮಾಡುತ್ತಿದ್ದು, ಕೆಲವೆಡೆ ಯಥಾಸ್ಥಿತಿ ಇದೆ. ಇದರಿಂದ ವಾಹನ ಸವಾರರಿಗೆ ರಸ್ತೆಯ ಅಂದಾಜು ತಿಳಿಯದೆ ಅಪಘಾತಗಳಾಗಲಿದೆ. ಗ್ರಾವಲ್ಸ್ ಕಡಿಮೆ ಹಾಕಿ ಗುಣಮಟ್ಟದ ರಸ್ತೆ ಕಿತ್ತು ಅದ್ವಾನ ಮಾಡಿದ್ದಾರೆ. ಬೇಗೂರಲ್ಲಿ ಚತುಷ್ಪಥ ಮತ್ತು ಸರ್ವೀಸ್ ರಸ್ತೆಯಾಗಬೇಕು.”

ರವಿ ಕಮರಹಳ್ಳಿ, ಬಿಜೆಪಿ ಯುವ ಮುಖಂಡ

” ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿತ್ತು. ರಸ್ತೆ ಅಗಲೀಕರಣದಿಂದಅಪಘಾತಗಳ ಸಂಖ್ಯೆ ಕಡಿಮೆಯಾಗಲಿದೆ. ಗುಂಡ್ಲುಪೇಟೆ-ಮೈಸೂರು ರಸ್ತೆ ಅಗಲೀಕರಣದಿಂದ ವಾಹನ ಸವಾರರಿಗೂ ಸಮಯ ಉಳಿಯುತ್ತದೆ. ಮರಗಳ ತೆರವಿಗೆ ಅರಣ್ಯ ಇಲಾಖೆಯಿಂದ ಎನ್‌ಒಸಿ ಕೆಲವೇ ದಿನಗಳಲ್ಲಿ ಸಿಗಲಿದ್ದು, ರಸ್ತೆ ಅಭಿವೃದ್ಧಿ ಮಾಡುವಾಗ ಸಮಸ್ಯೆ ಎದುರಾಗುವುದು ಸಹಜ. ನಮ್ಮ ತಾಲ್ಲೂಕಿನ ಸಂಪರ್ಕ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಎಲ್ಲರೂ ಸಹಕರಿಸಬೇಕು.”

ಎಚ್.ಎಂ.ಗಣೇಶ್ ಪ್ರಸಾದ್, ಶಾಸಕ

ಆಂದೋಲನ ಡೆಸ್ಕ್

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

8 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

8 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

8 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

9 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

12 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

13 hours ago