Andolana originals

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್

ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ ಜ.೩ರಿಂದ ೬ರವರೆಗೆ ಹಾಸನ ಜಿಲ್ಲೆ ಹಳೇಬೀಡು ಸಮೀಪವಿರುವ ಶ್ರೀಪುಷ್ಪಗಿರಿ ಮಠದಲ್ಲಿ ನೈಸರ್ಗಿಕ ಕೃಷಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಶ್ರೀ ನಿರ್ಮಲ ಭೂ ಮಾತಾ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಜೆ.ಅನಂತರಾವ್ ಹೇಳಿದರು.

ನಾಲ್ಕು ದಿನಗಳ ಕಾಲ ನಡೆಯುವ ಈ ಕಾರ್ಯಾಗಾರವನ್ನು ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿಗೆ ಹೆಸರಾಗಿರುವ ಮಹಾರಾಷ್ಟ್ರದ ಪದ್ಮಶ್ರೀ ಡಾ.ಸುಭಾಷ್ ಪಾಳೇಕರ್ ನಡೆಸಿಕೊಡುವರು. ಕಾರ್ಯಾಗಾರದಲ್ಲಿ ಒಂದು ಸಾವಿರ ಜನರಿಗೆ ವಸತಿ ಸಹಿತ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಕಾರ್ಯಾಗಾರವು ಶ್ರೀ ಪುಷ್ಪಗಿರಿ ಮಠದ ಡಾ.ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಯವರ ಸಹಯೋಗದೊಂದಿಗೆ ನಡೆಯಲಿದ್ದು, ಸಾಲ ಮಾಡಿ ಖರೀದಿಸುವ ರಸಗೊಬ್ಬರ, ಕೀಟನಾಶಕ, ಹೈಬ್ರಿಡ್ ಬಿತ್ತನೆ ಬೀಜಗಳು ರೈತಕುಲವನ್ನು ಆತ್ಮಹತ್ಯೆಯ ಹಾದಿ ಹಿಡಿಯುವಂತೆ ಮಾಡಿವೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಈ ಪರಿಸ್ಥಿತಿ ಯಲ್ಲಿ ರೈತರು ರೈತರಾಗಿ ಉಳಿದು ಘನತೆಯ ಬದುಕನ್ನು ಕಟ್ಟಿಕೊಳ್ಳಬೇಕಾದರೆ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ನುಡಿದರು.

ರೈತರು ಏಕಬೆಳೆಯ ಬದಲಾಗಿ ಬಹುಬೆಳೆಯ ಪದ್ಧತಿಯನ್ನು ಅಳವಡಿಸಿಕೊಳ್ಳುವುದು, ರಸಗೊಬ್ಬರಗಳ ಬದಲು ನಾಟಿ ಹಸುವಿನ ಸಗಣಿ ಮತ್ತು ಗಂಜಲದಿಂದ ತಯಾರಾದ ಬೀಜಾಮೃತ, ಜೀವಾಮೃತ ಬಳಸುವುದು, ನೀರನ್ನು ಕಡಿಮೆ ಬಳಸುವ ನೈಸರ್ಗಿಕ ಕೃಷಿಯತ್ತ ರೈತರು ತೆರೆದುಕೊಳ್ಳದಿದ್ದರೆ ಮುಂದಿನ ಮಕ್ಕಳ ಹಾಗೂ ಭೂಮಿಯ ಆರೋಗ್ಯ ಎಲ್ಲವೂ ಕರಾಳವಾಗಲಿದೆ ಎಂದು ಎಚ್ಚರಿಸಿದರು.

ಕಾರ್ಯಾಗಾರದಲ್ಲಿ ಮೂರು ದಿನಗಳ ಕಾಲ ದೇಸಿ ತಳಿಗಳ ಬೀಜ ಮೇಳ, ಆಹಾರ ಮೌಲ್ಯವರ್ಧನೆ ಮತ್ತು ನೇರ ಮಾರುಕಟ್ಟೆ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಅತಿ ಹೆಚ್ಚು ತಳಿಗಳನ್ನು ಸಂರಕ್ಷಿಸಿರುವ ಮೂವರು ರೈತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಯುವ ರೈತರು ಭಾಗವಹಿಸಲು ಮನವಿ: 

ಮಂಡ್ಯ: ಹಸಿರು ಕ್ರಾಂತಿಯ ಪರಿಣಾಮದಿಂದ ರೈತರು ಕಳೆದುಕೊಂಡಿರುವ ನಾಟಿ ಬೀಜಗಳು, ನಿಸರ್ಗದ ಜೊತೆ ಋತುಮಾನಕ್ಕೆ ತಕ್ಕಂತೆ ಆಯ್ಕೆ ಮಾಡುವ ಕೃಷಿ ಜ್ಞಾನ, ನೇರ ಮಾರುಕಟ್ಟೆ ವಿಧಾನಗಳಾದ ರೈತಸಂತೆಗಳನ್ನು ಪರ್ಯಾಯವಾಗಿ ಕಟ್ಟಲೇಬೇಕಾದ ಪರಿಸ್ಥಿತಿ ಎದುರಾಗಿದೆ. ಶ್ರೀ ಪುಷ್ಪಗಿರಿ ಮಠದಲ್ಲಿ ನಡೆಯುವ ಕಾರ್ಯಾಗಾರಕ್ಕೆ ವಿವಿಧ ರಾಜ್ಯಗಳಿಂದ ಮತ್ತು ಪಕ್ಕದ ನೇಪಾಳದ ರೈತರು, ರೈತ ಮುಖಂಡರು ಭಾಗಿಯಾಗುತ್ತಿದ್ದು, ಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಾ. ಕೆ.ಜೆ.ಅನಂತರಾವ್ ಮನವಿ ಮಾಡಿದರು. ಕಾರ್ಯಾಗಾರಕ್ಕೆ ನೋಂದಣಿ ಶುಲ್ಕವಾಗಿ ೮೦೦ ರೂ. ನಿಗದಿಪಡಿಸಿದೆ. ನೋಂದಣಿಗೆ ಜ.೨ರಂದು ಕೊನೆಯ ದಿನ. ಕಾರ್ಯಾಗಾರಕ್ಕೆ ಬರಲು ಆಸಕ್ತಿ ಇದ್ದು, ನೋಂದಣಿ ಶುಲ್ಕ ಪಾವತಿಸಲು ಕಷ್ಟವಿರುವ ೧೦೦ ಸಣ್ಣ ರೈತರಿಗೆ, ಮಹಿಳಾ ರೈತರು ಹಾಗೂ ಯುವ ರೈತರಿಗೆ ಉಚಿತವಾಗಿ ವ್ಯವಸ್ಥೆ ಮಾಡಲಾಗುವುದು. ಉಚಿತ ನೋಂದಣಿಗೆ ಮೊ:೭೬೭೬೨೮೦೧೩೬ನ್ನು ಸಂಪರ್ಕಿಸಲು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

11 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

12 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

14 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

15 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

18 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

18 hours ago