Mysore
26
haze

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ರೈತ ದಸರಾದಲ್ಲಿ ರೈತ ಮುಖಂಡರ ಕಡೆಗಣನೆ

ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿ ಇಲಾಖೆ ನಿಷ್ಕ್ರಿಯವಾಗಿದ್ದು, ರಾಜಕಾರಣಿಗಳ ಕಪಿಮುಷ್ಟಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ರೈತ ಮುಖಂಡರು ಹಾಗೂ ರಾಜ್ಯ ಮುಖಂಡರು ಮೈಸೂರು ಜಿಲ್ಲೆಯಲ್ಲಿ ಇರುವುದು ಯಾರಿಗೂ ಕಾಣುತ್ತಿಲ್ಲವೇ? ದಸರಾ ಹಬ್ಬ ಆಚರಣೆ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು, ಕೃಷಿ ಸಚಿವರು, ಜಿಲ್ಲಾ ಆಡಳಿತ, ಕೃಷಿ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತಕ್ಕೆ ಪಕ್ಷಗಳ ಕಾರ್ಯಕರ್ತರು ಕಾಣುತ್ತಾರೆ.

ಜಿಲ್ಲೆಯ ರೈತ ಮುಖಂಡರು ಕಾಣುತ್ತಿಲ್ಲವೇ? ರೈತರ ಸಂಕಷ್ಟಗಳಿಗೆ ಸ್ಪಂದಿಸಿ ಹಗಲಿರುಳು ಹೋರಾಟ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದು ನ್ಯಾಯ ಕೊಡಿಸುವ ರೈತ ಮುಖಂಡರನ್ನು ಕಡೆಗಣಿಸಿ ರೈತ ದಸರಾ ಆಚರಣೆ ಮಾಡಿರುವುದು ರೈತರಿಗೆ ಮಾಡಿದ ವಂಚನೆ ಇದು ಹಾಗೂ ಖಂಡನೀಯ ಎಂದರು. ಮುಂಬರುವ ವರ್ಷಗಳಲ್ಲಿ ರೈತ ದಸರಾ ಆಚರಣೆಗೆ ರೈತ ಮುಖಂಡರನ್ನು ಕಡೆಗಣಿಸಿ, ರೈತ ದಸರಾ ಆಚರಣೆ ಮಾಡಲು ಮುಂದಾದರೆ ಜಿಲ್ಲಾ ಉಸ್ತುವಾರಿ ಸಚಿವ, ಕೃಷಿ ಸಚಿವ, ಕೃಷಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

 

Tags:
error: Content is protected !!