ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿ ಇಲಾಖೆ ನಿಷ್ಕ್ರಿಯವಾಗಿದ್ದು, ರಾಜಕಾರಣಿಗಳ ಕಪಿಮುಷ್ಟಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ರೈತ ಮುಖಂಡರು ಹಾಗೂ ರಾಜ್ಯ ಮುಖಂಡರು ಮೈಸೂರು ಜಿಲ್ಲೆಯಲ್ಲಿ ಇರುವುದು ಯಾರಿಗೂ ಕಾಣುತ್ತಿಲ್ಲವೇ? ದಸರಾ ಹಬ್ಬ ಆಚರಣೆ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು, ಕೃಷಿ ಸಚಿವರು, ಜಿಲ್ಲಾ ಆಡಳಿತ, ಕೃಷಿ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತಕ್ಕೆ ಪಕ್ಷಗಳ ಕಾರ್ಯಕರ್ತರು ಕಾಣುತ್ತಾರೆ.
ಜಿಲ್ಲೆಯ ರೈತ ಮುಖಂಡರು ಕಾಣುತ್ತಿಲ್ಲವೇ? ರೈತರ ಸಂಕಷ್ಟಗಳಿಗೆ ಸ್ಪಂದಿಸಿ ಹಗಲಿರುಳು ಹೋರಾಟ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದು ನ್ಯಾಯ ಕೊಡಿಸುವ ರೈತ ಮುಖಂಡರನ್ನು ಕಡೆಗಣಿಸಿ ರೈತ ದಸರಾ ಆಚರಣೆ ಮಾಡಿರುವುದು ರೈತರಿಗೆ ಮಾಡಿದ ವಂಚನೆ ಇದು ಹಾಗೂ ಖಂಡನೀಯ ಎಂದರು. ಮುಂಬರುವ ವರ್ಷಗಳಲ್ಲಿ ರೈತ ದಸರಾ ಆಚರಣೆಗೆ ರೈತ ಮುಖಂಡರನ್ನು ಕಡೆಗಣಿಸಿ, ರೈತ ದಸರಾ ಆಚರಣೆ ಮಾಡಲು ಮುಂದಾದರೆ ಜಿಲ್ಲಾ ಉಸ್ತುವಾರಿ ಸಚಿವ, ಕೃಷಿ ಸಚಿವ, ಕೃಷಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…
ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್…