ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿ ಇಲಾಖೆ ನಿಷ್ಕ್ರಿಯವಾಗಿದ್ದು, ರಾಜಕಾರಣಿಗಳ ಕಪಿಮುಷ್ಟಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ರೈತ ಮುಖಂಡರು ಹಾಗೂ ರಾಜ್ಯ ಮುಖಂಡರು ಮೈಸೂರು ಜಿಲ್ಲೆಯಲ್ಲಿ ಇರುವುದು ಯಾರಿಗೂ ಕಾಣುತ್ತಿಲ್ಲವೇ? ದಸರಾ ಹಬ್ಬ ಆಚರಣೆ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು, ಕೃಷಿ ಸಚಿವರು, ಜಿಲ್ಲಾ ಆಡಳಿತ, ಕೃಷಿ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತಕ್ಕೆ ಪಕ್ಷಗಳ ಕಾರ್ಯಕರ್ತರು ಕಾಣುತ್ತಾರೆ.
ಜಿಲ್ಲೆಯ ರೈತ ಮುಖಂಡರು ಕಾಣುತ್ತಿಲ್ಲವೇ? ರೈತರ ಸಂಕಷ್ಟಗಳಿಗೆ ಸ್ಪಂದಿಸಿ ಹಗಲಿರುಳು ಹೋರಾಟ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದು ನ್ಯಾಯ ಕೊಡಿಸುವ ರೈತ ಮುಖಂಡರನ್ನು ಕಡೆಗಣಿಸಿ ರೈತ ದಸರಾ ಆಚರಣೆ ಮಾಡಿರುವುದು ರೈತರಿಗೆ ಮಾಡಿದ ವಂಚನೆ ಇದು ಹಾಗೂ ಖಂಡನೀಯ ಎಂದರು. ಮುಂಬರುವ ವರ್ಷಗಳಲ್ಲಿ ರೈತ ದಸರಾ ಆಚರಣೆಗೆ ರೈತ ಮುಖಂಡರನ್ನು ಕಡೆಗಣಿಸಿ, ರೈತ ದಸರಾ ಆಚರಣೆ ಮಾಡಲು ಮುಂದಾದರೆ ಜಿಲ್ಲಾ ಉಸ್ತುವಾರಿ ಸಚಿವ, ಕೃಷಿ ಸಚಿವ, ಕೃಷಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…