Andolana originals

ರೈತ ದಸರಾದಲ್ಲಿ ರೈತ ಮುಖಂಡರ ಕಡೆಗಣನೆ

ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿ ಇಲಾಖೆ ನಿಷ್ಕ್ರಿಯವಾಗಿದ್ದು, ರಾಜಕಾರಣಿಗಳ ಕಪಿಮುಷ್ಟಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ರೈತ ಮುಖಂಡರು ಹಾಗೂ ರಾಜ್ಯ ಮುಖಂಡರು ಮೈಸೂರು ಜಿಲ್ಲೆಯಲ್ಲಿ ಇರುವುದು ಯಾರಿಗೂ ಕಾಣುತ್ತಿಲ್ಲವೇ? ದಸರಾ ಹಬ್ಬ ಆಚರಣೆ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು, ಕೃಷಿ ಸಚಿವರು, ಜಿಲ್ಲಾ ಆಡಳಿತ, ಕೃಷಿ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತಕ್ಕೆ ಪಕ್ಷಗಳ ಕಾರ್ಯಕರ್ತರು ಕಾಣುತ್ತಾರೆ.

ಜಿಲ್ಲೆಯ ರೈತ ಮುಖಂಡರು ಕಾಣುತ್ತಿಲ್ಲವೇ? ರೈತರ ಸಂಕಷ್ಟಗಳಿಗೆ ಸ್ಪಂದಿಸಿ ಹಗಲಿರುಳು ಹೋರಾಟ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದು ನ್ಯಾಯ ಕೊಡಿಸುವ ರೈತ ಮುಖಂಡರನ್ನು ಕಡೆಗಣಿಸಿ ರೈತ ದಸರಾ ಆಚರಣೆ ಮಾಡಿರುವುದು ರೈತರಿಗೆ ಮಾಡಿದ ವಂಚನೆ ಇದು ಹಾಗೂ ಖಂಡನೀಯ ಎಂದರು. ಮುಂಬರುವ ವರ್ಷಗಳಲ್ಲಿ ರೈತ ದಸರಾ ಆಚರಣೆಗೆ ರೈತ ಮುಖಂಡರನ್ನು ಕಡೆಗಣಿಸಿ, ರೈತ ದಸರಾ ಆಚರಣೆ ಮಾಡಲು ಮುಂದಾದರೆ ಜಿಲ್ಲಾ ಉಸ್ತುವಾರಿ ಸಚಿವ, ಕೃಷಿ ಸಚಿವ, ಕೃಷಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

 

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago