Andolana originals

ಹುಲಿಯ ಡಿಎನ್ಎ ಪರೀಕ್ಷೆಗೂ ನೆರೆ ರಾಜ್ಯದ ಆಶ್ರಯ

ಮಾದರಿ ಪರೀಕ್ಷೆ ವರದಿಗಾಗಿ ತಿಂಗಳುಗಟ್ಟಲೇ ಕಾಯುವ ಪರಿಸ್ಥಿತಿ

ವ್ಯಾಘ್ರಗಳ ಕೂದಲು ಮತ್ತು ಎಂಜಲು ಹೈದರಾಬಾದ್‌ನ ಪ್ರಯೋಗಾಲಯಕ್ಕೆ ರವಾನೆ

ಎಸ್.ಪ್ರಶಾಂತ್

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನುಗು, ಮೊಳೆಯೂರು ವನ್ಯಜೀವಿ ವಲಯ ವ್ಯಾಪ್ತಿಯ ಅರಣ್ಯದಂಚಿನ ಗ್ರಾಮಗಳಲ್ಲಿ ಮೂವರು ರೈತರನ್ನು ಬಲಿ ಪಡೆದಿದ್ದ ಹುಲಿಯ ಡಿಎನ್‌ಎ ಮಾದರಿ ಪರೀಕ್ಷೆಗೂ ನೆರೆಯ ತೆಲಂಗಾಣದ ರಾಜ್ಯದ ಪ್ರಯೋಗಾಲಯವನ್ನೇ ಅವಲಂಬಿಸಬೇಕಾಗಿದ್ದು, ವರದಿಗಾಗಿ ತಿಂಗಳುಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯ ಸರಗೂರು, ನಂಜನಗೂಡು, ಹುಣಸೂರು ತಾಲೂಕಿನ ಕಾಡಂಚಿನ ಭಾಗಗಳಲ್ಲಿ ಹಾಗೂ ಮೈಸೂರು ತಾಲೂಕಿನ ಇಲವಾಲ ಸುತ್ತಮುತ್ತಲಿನಲ್ಲಿ ಹುಲಿಗಳು ಕಾಣಿಸಿಕೊಳ್ಳುತ್ತಿದ್ದು, ಕೂಂಬಿಂಗ್ ಕಾರ್ಯಾಚರಣೆಯೂ ಆರಂಭಗೊಂಡಿದೆ. ಅರಣ್ಯ ಇಲಾಖೆ ನಂಜನಗೂಡು ವ್ಯಾಪ್ತಿಯಲ್ಲಿ ಎರಡು ಹುಲಿಗಳನ್ನು ಸೆರೆ ಹಿಡಿದಿದೆ.

ವರದಿ ಬರಲು ವಿಳಂಬ: ಮೂವರನ್ನು ಬಲಿ ಪಡೆದ ಹುಲಿ ಯಾವುದು ಎಂಬುದನ್ನು ಖಾತ್ರಿಪಡಿಸಿಕೊಳ್ಳುವ ಉದ್ದೇಶದಿಂದ ಸೆರೆಸಿಕ್ಕ ಎರಡು ಹುಲಿಗಳ ಮಾದರಿಯನ್ನು ಹೈದರಾಬಾದ್‌ನ ವಿಧಿವಿಜ್ಞಾನ ಪ್ರಯೋಗಾಲ ಯಕ್ಕೆ ಕಳುಹಿಸಲಾಗಿದೆ. ಇಲ್ಲಿಗೆ ದೇಶದ ವಿವಿಧ ಪ್ರಕರಣಗಳ ಮಾದರಿ ಬರುವುದರಿಂದ ವರದಿ ಬರಲು ಇನ್ನೂ ಒಂದು ತಿಂಗಳು ವಿಳಂಬವಾಗಬಹುದು ಎನ್ನಲಾ ಗಿದೆ. ಅಲ್ಲದೇ, ಬೆಂಗಳೂರಿನಲ್ಲಿ ೨.೭ ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಿರುವ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯವನ್ನು ಇನ್ನೂ ಪೂರ್ಣ ಪ್ರಮಾಣದಲ್ಲಿ ಏಕೆ ಕಾರ್ಯಾರಂಭ ಮಾಡಿಲ್ಲ? ಎಂಬ ಪ್ರಶ್ನೆಯೂ ಮೂಡಿದೆ.

ತರಬೇತಿ ನಿರತ ಸಿಬ್ಬಂದಿ ವನ್ಯಜೀವಿಗೆ ಸಂಬಂಧಿಸಿದ ಅಪರಾಧಗಳ ತನಿಖೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ನಿರ್ಣಾಯಕ ಪಾತ್ರವನ್ನು ನಿರ್ವಹಿಸುತ್ತದೆ. ಈ ಪ್ರಯೋಗಾಲಯವು ಆಧುನಿಕ ಉಪಕರಣಗಳನ್ನು ಹೊಂದಿರುವುದರಿಂದ ತನಿಖೆಗೆ ಸಂಬಂಧಿಸಿದಂತೆ ಸ್ಪಷ್ಟ ವಿಶ್ಲೇಷಣೆ ಮತ್ತು ವರದಿಗಳನ್ನು ಒದಗಿಸುತ್ತದೆ. ಅಲ್ಲದೇ, ಸೆರೆಸಿಕ್ಕ ಹುಲಿಯ ಉಗುರು, ಕೂದಲು, ರಕ್ತ ಸೇರಿದಂತೆ ಇತರ ಮಾದರಿಗಳಿಂದ ಮನುಷ್ಯನನ್ನು ಕೊಂದ ಹುಲಿ ಯಾವುದು ಎಂಬುದು ತಿಳಿದು ಬರಲಿದೆ. ಆದರೆ, ರಾಜ್ಯದಲ್ಲಿ ಸ್ಥಾಪಿಸಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗೆ ತರಬೇತಿ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಪರೀಕ್ಷೆಗಾಗಿ ಹೈದರಾಬಾದ್‌ಗೆ ಕಳುಹಿಸುವುದು ಅನಿವಾರ್ಯವಾಗಿದೆ.

ವರದಿ ಬಂದರೆ ಖಾತ್ರಿ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಮಾಹಿತಿ ನಿರ್ಣಾಯಕ. ಆದರೆ, ಪ್ರಯೋಗಾಲಯ ಸ್ಥಾಪನೆ ದಶಕದಿಂದ ಆಮೆಗತಿಯಲ್ಲಿದೆ.

ಎರಡು ಹುಲಿಗಳ ಮಾದರಿ ರವಾನೆ:  ಅರಣ್ಯ ಇಲಾಖೆ ಅ.೨೮ರಂದು ನಂಜನಗೂಡಿನ ಈರೇಗೌಡನಹುಂಡಿಯಲ್ಲಿ ಹಾಗೂ ನ.೮ರಂದು ಮೊಳೆಯೂರು ಸಮೀಪ ಎರಡು ಹುಲಿಗಳನ್ನು ಸೆರೆಹಿಡಿದಿತ್ತು. ಈ ಎರಡೂ ಹುಲಿಗಳ ಕೂದಲು, ಎಂಜಲಿನ ಸ್ಯಾಂಪಲ್ ಸೇರಿದಂತೆ ಡಿಎನ್‌ಎ ಮಾದರಿಗಳನ್ನು ಹೈದರಾಬಾದ್‌ಗೆ ಕಳುಹಿಸಲಾಗಿದೆ. ಆದರೆ, ವರದಿ ಬರಲು ಇನ್ನೂ ತಡವಾಗುವ ಕಾರಣ ಅರಣ್ಯ ಇಲಾಖೆ ಕೂಂಬಿಂಗ್ ಮುಂದುವರೆಸಿದೆ. ಅಲ್ಲದೇ, ತೊಂದರೆ ಮಾಡದ ಹುಲಿಗಳನ್ನು ಸೆರೆ ಹಿಡಿಯುವುದು ಅನಿವಾರ್ಯವಾಗಿದೆ. ವರದಿ ತಡವಾಗಿರುವ ಕಾರಣ ಸೆರೆಸಿಕ್ಕ ಹುಲಿಯೇ ದಾಳಿ ಮಾಡಿತ್ತೇ ಅಥವಾ ಬೇರೆ ಹುಲಿಯೇ ಎಂಬ ಗೊಂದಲ ಗ್ರಾಮಸ್ಥರಲ್ಲಿ ಮೂಡಿದೆ.

” ವರದಿ ಶೀಘ್ರ ಬರಲಿ ಎಂಬ ಉದ್ದೇಶದಿಂದ ಹೈದರಾಬಾದ್‌ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸೆರೆ ಸಿಕ್ಕ ಹುಲಿಯ ಡಿಎನ್‌ಎ ಮಾದರಿಗಳನ್ನು ರವಾನಿಸಲಾಗಿದೆ. ದೇಶದ ವಿವಿಧ ಭಾಗಗಳಿಂದ ಪ್ರಕರಣಗಳ ಮಾದರಿಯನ್ನು ಹೈದರಾಬಾದ್‌ಗೆ ಕಳುಹಿಸಿರುವುದರಿಂದ ವರದಿ ಬರಲು ತಿಂಗಳಾಗಬಹುದು.”

-ಪರಮೇಶ್, ಎಸಿಎಫ್, ಹೆಡಿಯಾಲ ಉಪವಿಭಾಗ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ 

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago