Andolana originals

ಕೊಡಗಿನಲ್ಲಿ ಶುಂಠಿ ಬೆಳೆಯಲ್ಲಿ ಹೊಸ ರೋಗ ಪತ್ತೆ

ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ರೋಗ; ಕೋಯಿಕೋಡ್‌ನ ವಿಜ್ಞಾನಿಗಳ ಸಂಶೋಧನೆಯಿಂದ ದೃಢ

ನವೀನ್ ಡಿಸೋಜ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯನ್ನು ಇನ್ನಿಲ್ಲದಂತೆ ಬಾಽಸಿದ್ದ ಹೊಸ ಶಿಲೀಂಧ್ರ ರೋಗವನ್ನು ಕೋಯಿಕೋಡ್‌ನ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ, ಇದರ ನಿಯಂತ್ರಣಕ್ಕೆ ಸಲಹೆಗಳನ್ನೂ ನೀಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಶುಂಠಿ ಗಿಡದ ಎಲೆಗಳು ಹಳದಿಯಾಗಿ ಒಣಗಲು ಆರಂಭವಾಗಿತ್ತು. ಮಾತ್ರವಲ್ಲ, ಕಾಂಡದ ಒಣಗುವಿಕೆಯ ಜೊತೆಗೆ ಗೆಡ್ಡೆಗಳ ತೂಕವು ಶೇ. ೩೦ರಷ್ಟು ಕಡಿಮೆಯಾಗಿತ್ತು. ಏಕಾಏಕಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಹೊಸ ಬಗೆಯ ಈ ರೋಗದಿಂದ ಬೆಳೆಗಾರರು ಆತಂಕದಲ್ಲಿದ್ದರು. ಇದಕ್ಕೆ ಸ್ಪಂದಿಸಿದ ಇಲ್ಲಿನ ಅಪ್ಪಂಗಳದ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕಚೇರಿಯ ವಿಜ್ಞಾನಿಗಳು ರೋಗಪೀಡಿತ ಶುಂಠಿ ಸಸ್ಯಗಳ ಮಾದರಿಗಳನ್ನು ಕೋಯಿಕೋಡ್‌ನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.

ಬಹಳಷ್ಟು ವೇಳೆ ಪ್ರಯೋಗಾಲಯ ತಲುಪುವ ಹೊತ್ತಿಗೆ ಸಸ್ಯವು ಒಣಗಿ ಹೋಗಿರುತ್ತಿತ್ತು. ೪-೫ ಬಾರಿ ಮಾದರಿಗಳನ್ನು ಕಳುಹಿಸಿಕೊಡಲಾಯಿತು. ಅಂತಿಮವಾಗಿ ಪ್ರಯೋಗಾಲಯಕ್ಕೆ ಮಾದರಿ ತಲುಪಿಸಿ ವಿಜ್ಞಾನಿಗಳಿಗೆ ಸಂಶೋಧನೆ ನಡೆಸಲು ಅವಕಾಶ ಲಭಿಸಿತ್ತು. ಪ್ರಯೋಗಾಲಯದಲ್ಲಿ ಇದು ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ರೋಗ ಎಂಬುದು ದೃಢಪಟ್ಟಿದೆ.

ಪೈರಿಕ್ಯುಲೇರಿಯಾವು ಭತ್ತ, ಗೋಧಿ ಮತ್ತು ಬಾರ್ಲಿಯಂತಹ ಏಕದಳ ಸಸ್ಯಗಳಲ್ಲಿ ಬ್ಲಾಸ್ಟ್ ರೋಗವನ್ನು ಉಂಟುಮಾಡುತ್ತದೆ, ಶುಂಠಿಯಲ್ಲಿ ಇದು ಮೊದಲ ಬಾರಿಗೆ ವರದಿಯಾಗಿದೆ. ಈ ರೋಗ ಬಂದ ಶುಂಠಿ ಗಿಡದ ಎಲೆಗಳು ಹಳದಿಯಾಗಿ ಕಾಣಿಸಿಕೊಳ್ಳುತ್ತವೆ. ಆರಂಭಿಕ ಹಂತದಲ್ಲಿ ಕಪ್ಪು ಅಥವಾ ಆಲಿವ್-ಹಸಿರು ಬಣ್ಣದ ಚುಕ್ಕೆಗಳು ಜೊತೆಗೂಡಿರುತ್ತವೆ.

ಒಮ್ಮೆ ಈ ಸೋಂಕು ತಗುಲಿದರೆ, ಅದು ವೇಗವಾಗಿ ಹರಡುತ್ತದೆ ಮತ್ತು ಕೆಲವೇ ಗಂಟೆಗಳಲ್ಲಿ ಇಡೀ ಹೊಲವನ್ನು ಆವರಿಸುತ್ತದೆ. ಇದು ತೀವ್ರವಾದ ಬೆಳೆ ನಷ್ಟಕ್ಕೆ ಕಾರಣವಾಗುತ್ತದೆ. ರೋಗಪೀಡಿತ ಸಸ್ಯಗಳು ಗೆಡ್ಡೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಖಚಿತಪಡಿಸಿದ್ದರೂ, ಗೆಡ್ಡೆಗಳ ತೂಕ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದು ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ಕಾಯಿಲೆ ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ. ಒಮ್ಮೆ ಈ ಸೋಂಕು ತಗುಲಿದರೆ, ಅದು ವೇಗವಾಗಿ ಹರಡುತ್ತದೆ. ಮುಂಜಾಗ್ರತಾ ಕ್ರಮವಾಗಿ ಶುಂಠಿ ಗೆಡ್ಡೆಗಳನ್ನು ನೆಡುವ ಮೊದಲು ಔಷಧಗಳಿಂದ ಉಪಚರಿಸಿದರೆ ಮುಂದೆ ಈ ರೋಗ ಬಾರದಂತೆ ತಡೆಗಟ್ಟಬಹುದು. -ಡಾ. ಅಂಕೇಗೌಡ, ಮುಖ್ಯಸ್ಥ, ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ, ಅಪ್ಪಂಗಳ

ನಿಯಂತ್ರಣ ಕ್ರಮಗಳೇನು?
ಶುಂಠಿ ಬಿತ್ತನೆಗೂ ಮುನ್ನವೇ ಬೀಜದ ಗೆಡ್ಡೆಗಳನ್ನು ಔಷಧಗಳಿಂದ ಉಪಚರಿಸಿದರೆ ಮುಂದೆ ಈ ರೋಗ ಬಾರದಂತೆ ತಡೆಗಟ್ಟಬಹುದು. ಒಂದು ಲೀಟರ್ ನೀರಿಗೆ ಶಿಲೀಂಧ್ರ ನಾಶಕ ಪ್ರೊಪಿಕೊನಜೋಲ್‌ಅನ್ನು ೧ ಎಂ. ಎಲ್. ನಷ್ಟು ಅಥವಾ ಒಂದು ಲೀಟರ್ ನೀರಿಗೆ ಕಾರ್ಬೆಂಡಜಿಮ್ ಮತ್ತು ಮ್ಯಾಂಕೋಜೆಬ್ ಸಂಯೋಜನೆಯನ್ನು ೨ ಗ್ರಾಂನಷ್ಟು ಬೆರೆಸಿ ಬೀಜದ ಗೆಡ್ಡೆಗಳನ್ನು ಈ ಶಿಲೀಂಧ್ರನಾಶಕದಲ್ಲಿ ೩೦ ನಿಮಿಷಗಳ ಕಾಲ ಅದ್ದಿ ಚೆನ್ನಾಗಿ ಗಾಳಿ ಇರುವ ಸ್ಥಳದಲ್ಲಿ ಶೇಖರಿಸಬೇಕು. ರೋಗ ನಿರೋಧಕ ಕ್ರಮವಾಗಿ ನಾಟಿ ಮಾಡಿದ ೪ ತಿಂಗಳುಗಳ ಒಳಗೆ ಒಂದು ಲೀಟರ್ ನೀರಿಗೆ ಪ್ರೊಪಿಕೊನಜೋಲ್ ಅಥವಾ ಟೆಬುಕೊನಜೋಲ್ ಅನ್ನು ಒಂದು ಲೀಟರ್ ನೀರಿಗೆ ೧ ಎಂಎಲ್‌ನಷ್ಟು ಬೆರೆಸಿ ಸಿಂಪಡಿಸಬೇಕು. ಇದರಿಂದ ರೋಗ ಬಾರದಂತೆ ತಡೆಗಟ್ಟಬಹುದು.

ರೋಗಕ್ಕೆ ಕಾರಣ ಏನು?
ಸಂಶೋಧಕರ ಪ್ರಕಾರ, ಕೊಡಗಿನಲ್ಲಿರುವ ನಿರ್ದಿಷ್ಟ ಹವಾಮಾನ ಪರಿಸ್ಥಿತಿಗಳಿಂದಾಗಿಯೇ ರೋಗ ಹರಡುವಿಕೆ ಹೆಚ್ಚಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಬೆಳಿಗ್ಗೆ ಇಬ್ಬನಿ ಬೀಳಲು ಆರಂಭಿಸಿತ್ತು. ಇದು ಶಿಲೀಂಧ್ರ ಅಭಿವೃದ್ಧಿ ಹೊಂದಲು ಮತ್ತು ಹರಡಲು ಸೂಕ್ತವಾದ ವಾತಾವರಣವನ್ನು ಒದಗಿಸಿತು. ಇದು ಕೊಡಗಿನ ಮತ್ತು ಸುತ್ತಮತ್ತಲಿನ ಕೆಲವು ಪ್ರದೇಶದ ಶುಂಠಿ ಹೊಲಗಳಲ್ಲಿ ರೋಗವು ವೇಗವಾಗಿ ಹರಡಲು ಕಾರಣವಾಯಿತು ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

42 seconds ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago