Andolana originals

ವನ್ಯಜೀವಿಗಳ ಹಾವಳಿ ತಡೆಗೆ ಹೊಸ ಪ್ರಯೋಗ

ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಚೈನ್‌ಲಿಂಕ್ ಮೆಶ್ ಅಳವಡಿಕೆಗೆ ಮುಂದಾದ ಅರಣ್ಯ ಇಲಾಖೆ 

ಮೈಸೂರು: ಕಾಡಂಚಿನ ಗ್ರಾಮಗಳಿಗೆ ವನ್ಯಜೀವಿಗಳು ಬಾರದಂತೆ ತಡೆಯಲು ಸೋಲಾರ್ ತಂತಿಬೇಲಿ, ಕಂದಕನಿರ್ಮಾಣ, ರೈಲ್ವೆ ಕಂಬಿ ಬ್ಯಾರಿಕೇಡ್ ಅಳವಡಿಕೆ ಸೇರಿದಂತೆ ಹಲವಾರು ತಂತ್ರಗಳನ್ನು ಕೈಗೊಂಡಿದ್ದ ಅರಣ್ಯ ಇಲಾಖೆ ಈಗ ಹೊಸದೊಂದು ಪ್ರಯೋಗಕ್ಕೆ ಮುಂದಾಗಿದೆ.

ಜಿಲ್ಲೆಯ ಸರಗೂರು, ಎಚ್.ಡಿ.ಕೋಟೆ ಹಾಗೂ ನಂಜನಗೂಡು ತಾಲ್ಲೂಕುಗಳ ಗ್ರಾಮಗಳು ಬಂಡೀಪುರ ಅರಣ್ಯದೊಂದಿಗೆ ಹೊಂದಿಕೊಂಡಿವೆ. ಹೀಗಾಗಿ ಈ ತಾಲ್ಲೂಕುಗಳಲ್ಲಿ ಚಿರತೆ, ಹುಲಿ, ಆನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬುದ್ಧಿವಂತ ಆನೆಗಳು ರೈಲ್ವೆ ಬ್ಯಾರಿಕೇಡ್‌ಗಳನ್ನೂ ದಾಟಿ ಬರುತ್ತಿವೆ. ಕೆಲವು ಆನೆಗಳು ಬ್ಯಾರಿಕೇಡ್‌ನಲ್ಲಿ ಸಿಲುಕಿ ಒದ್ದಾಡಿದ ಘಟನೆಗಳೂ ನಡೆದಿವೆ.

ಹುಲಿ ಮಾತ್ರವಲ್ಲದೇ ಕಾಡಂಚಿನ ರೈತರಿಗೆ ಉಪಟಳ ನೀಡುವ ಜಿಂಕೆ, ಕಾಡುಹಂದಿ ಹಾಗೂ ಚಿರತೆಗಳ ಹಾವಳಿಗೂ ಕಡಿವಾಣ ಹಾಕಲು ಏನೇ ಪ್ರಯತ್ನ ಮಾಡಿದರೂ ವನ್ಯ ಜೀವಿಗಳು ಕಾಡಿನಿಂದ ನಾಡಿಗೆ ಬರುವುದು ಮಾತ್ರ ನಿಲ್ಲುತ್ತಿಲ್ಲ. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಚೈನ್‌ಲಿಂಕ್ ಮೆಶ್ ಅಳವಡಿಸಲು ಸಿದ್ಧತೆ ನಡೆಸಿದ್ದಾರೆ.

ಮೆಶ್ ಅಳವಡಿಕೆಗೆ ಚಾಲನೆ: ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯುವ ದೃಷ್ಟಿ ಯಿಂದ ಅಂತರಸಂತೆ ವಲಯದ ಸುತ್ತಮುತ್ತಲಿನ ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ಜಾಲರಿ (ಮೆಶ್) ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶಾಸಕ ಅನಿಲ್ ಚಿಕ್ಕಮಾದು, ರೈತ ಕಲ್ಯಾಣ ಸಂಘದ ಜಿಲ್ಲಾಧ್ಯಕ್ಷ ಚಂದನ್ ಗೌಡ, ಜಿಪಂ ಮಾಜಿ ಸದಸ್ಯ ರವಿ, ರೈತ ಸಂಘದ ಪದಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

” ನಾಗರಹೊಳೆಯ ಅಂತರಸಂತೆ ವ್ಯಾಪ್ತಿಯ ತಾರಕ ಗಸ್ತಿನಿಂದ ಉದ್ಭೂರು ಗೇಟ್‌ವರೆಗೆ ಸುಮಾರು ೧೩ ಕಿ.ಮೀ. ಅಳವಡಿಸಿರುವ ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಮೊದಲ ಹಂತದಲ್ಲಿ ಬೆಂಗಳೂರಿನ ಚಾಕೋಲೇಟ್ಸ್ ಫೌಂಡೇಶನ್ ಸಹಯೋಗದೊಂದಿಗೆ ಚೈನ್‌ಲಿಂಕ್ ಮೆಶ್ ಅಳವಡಿಸುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ. ಸುಮಾರು ೬-೭ ಅಡಿಗಷ್ಟು ಎತ್ತರದ ಮೆಶ್ ಹಾಗೂ ಅದರ ಮೇಲೆ ಕಂಬಿಗಳನ್ನು ಅಳವಡಿಸಿ ಸೋಲಾರ್ ತಂತಿ ಹಾಕಲಾಗುವುದು. ಈ ಪ್ರಯೋಗ ಯಶಸ್ವಿಯಾದರೆ ನಂತರ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.”

” ತಾರಕ ಗಸ್ತಿನಿಂದ ಉದ್ಬೂರು ಗೇಟ್‌ವರೆಗೆ ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಚೈನ್ ಲಿಂಕ್ ಮೆಶ್ ಹಾಕಲಾಗುವುದು. ಇದರಿಂದ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾದರೆ, ಮುಂದಿನ ದಿನಗಳಲ್ಲಿ ಎಲ್ಲಿ ಪ್ರಾಣಿಗಳ ಹಾವಳಿ ಹೆಚ್ಚಿದೆಯೋ ಆ ಸ್ಥಳಗಳಲ್ಲೂ ಹಾಕಲು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು.”

ಮಧು, ಎಸಿಎಫ್, ಮೇಟಿಕುಪ್ಪೆ ಅರಣ್ಯ ವಲಯ

” ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಪ್ಪಿಸುವ ಸಲುವಾಗಿ ಮೇಲಧಿಕಾರಿಗಳ ಹಾಗೂ ಸ್ಥಳೀಯ ಶಾಸಕರ ಸಹಕಾರದೊಂದಿಗೆ ನಾಗರಹೊಳೆ ವ್ಯಾಪ್ತಿಯಲ್ಲಿ ೧೩ ಕಿ.ಮೀ. ಚೈನ್ ಲಿಂಕ್ ಮೆಶ್ ಅಳವಡಿಸಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ವನ್ಯಜೀವಿಗಳ ಹಾವಳಿ ತಗ್ಗಲಿದೆ ಎಂಬ ವಿಶ್ವಾಸವಿದೆ.”

ಎಸ್.ಎಸ್.ಸಿದ್ದರಾಜು, ಆರ್‌ಎಫ್‌ಒ, ಅಂತರಸಂತೆ

” ಬ್ಯಾರಿಕೇಡ್‌ಗಳಿಗೆ ಚೈನ್ ಲಿಂಕ್ ಮೆಶ್ ಅಳವಡಿಸುವ ಮೂಲಕ ವನ್ಯಜೀವಿಗಳ ಅತಿಕ್ರಮಣವನ್ನು ತಡೆದು, ರೈತರ ಬೆಳೆಗಳ ರಕ್ಷಣೆ ಜೊತೆಗೆ ಮಾನವ-ಪ್ರಾಣಿ ಸಂಘರ್ಷವನ್ನೂ ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.”

ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

7 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

9 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago