Andolana originals

ವನ್ಯಜೀವಿಗಳ ಹಾವಳಿ ತಡೆಗೆ ಹೊಸ ಪ್ರಯೋಗ

ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಚೈನ್‌ಲಿಂಕ್ ಮೆಶ್ ಅಳವಡಿಕೆಗೆ ಮುಂದಾದ ಅರಣ್ಯ ಇಲಾಖೆ 

ಮೈಸೂರು: ಕಾಡಂಚಿನ ಗ್ರಾಮಗಳಿಗೆ ವನ್ಯಜೀವಿಗಳು ಬಾರದಂತೆ ತಡೆಯಲು ಸೋಲಾರ್ ತಂತಿಬೇಲಿ, ಕಂದಕನಿರ್ಮಾಣ, ರೈಲ್ವೆ ಕಂಬಿ ಬ್ಯಾರಿಕೇಡ್ ಅಳವಡಿಕೆ ಸೇರಿದಂತೆ ಹಲವಾರು ತಂತ್ರಗಳನ್ನು ಕೈಗೊಂಡಿದ್ದ ಅರಣ್ಯ ಇಲಾಖೆ ಈಗ ಹೊಸದೊಂದು ಪ್ರಯೋಗಕ್ಕೆ ಮುಂದಾಗಿದೆ.

ಜಿಲ್ಲೆಯ ಸರಗೂರು, ಎಚ್.ಡಿ.ಕೋಟೆ ಹಾಗೂ ನಂಜನಗೂಡು ತಾಲ್ಲೂಕುಗಳ ಗ್ರಾಮಗಳು ಬಂಡೀಪುರ ಅರಣ್ಯದೊಂದಿಗೆ ಹೊಂದಿಕೊಂಡಿವೆ. ಹೀಗಾಗಿ ಈ ತಾಲ್ಲೂಕುಗಳಲ್ಲಿ ಚಿರತೆ, ಹುಲಿ, ಆನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬುದ್ಧಿವಂತ ಆನೆಗಳು ರೈಲ್ವೆ ಬ್ಯಾರಿಕೇಡ್‌ಗಳನ್ನೂ ದಾಟಿ ಬರುತ್ತಿವೆ. ಕೆಲವು ಆನೆಗಳು ಬ್ಯಾರಿಕೇಡ್‌ನಲ್ಲಿ ಸಿಲುಕಿ ಒದ್ದಾಡಿದ ಘಟನೆಗಳೂ ನಡೆದಿವೆ.

ಹುಲಿ ಮಾತ್ರವಲ್ಲದೇ ಕಾಡಂಚಿನ ರೈತರಿಗೆ ಉಪಟಳ ನೀಡುವ ಜಿಂಕೆ, ಕಾಡುಹಂದಿ ಹಾಗೂ ಚಿರತೆಗಳ ಹಾವಳಿಗೂ ಕಡಿವಾಣ ಹಾಕಲು ಏನೇ ಪ್ರಯತ್ನ ಮಾಡಿದರೂ ವನ್ಯ ಜೀವಿಗಳು ಕಾಡಿನಿಂದ ನಾಡಿಗೆ ಬರುವುದು ಮಾತ್ರ ನಿಲ್ಲುತ್ತಿಲ್ಲ. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಚೈನ್‌ಲಿಂಕ್ ಮೆಶ್ ಅಳವಡಿಸಲು ಸಿದ್ಧತೆ ನಡೆಸಿದ್ದಾರೆ.

ಮೆಶ್ ಅಳವಡಿಕೆಗೆ ಚಾಲನೆ: ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯುವ ದೃಷ್ಟಿ ಯಿಂದ ಅಂತರಸಂತೆ ವಲಯದ ಸುತ್ತಮುತ್ತಲಿನ ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ಜಾಲರಿ (ಮೆಶ್) ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶಾಸಕ ಅನಿಲ್ ಚಿಕ್ಕಮಾದು, ರೈತ ಕಲ್ಯಾಣ ಸಂಘದ ಜಿಲ್ಲಾಧ್ಯಕ್ಷ ಚಂದನ್ ಗೌಡ, ಜಿಪಂ ಮಾಜಿ ಸದಸ್ಯ ರವಿ, ರೈತ ಸಂಘದ ಪದಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

” ನಾಗರಹೊಳೆಯ ಅಂತರಸಂತೆ ವ್ಯಾಪ್ತಿಯ ತಾರಕ ಗಸ್ತಿನಿಂದ ಉದ್ಭೂರು ಗೇಟ್‌ವರೆಗೆ ಸುಮಾರು ೧೩ ಕಿ.ಮೀ. ಅಳವಡಿಸಿರುವ ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಮೊದಲ ಹಂತದಲ್ಲಿ ಬೆಂಗಳೂರಿನ ಚಾಕೋಲೇಟ್ಸ್ ಫೌಂಡೇಶನ್ ಸಹಯೋಗದೊಂದಿಗೆ ಚೈನ್‌ಲಿಂಕ್ ಮೆಶ್ ಅಳವಡಿಸುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ. ಸುಮಾರು ೬-೭ ಅಡಿಗಷ್ಟು ಎತ್ತರದ ಮೆಶ್ ಹಾಗೂ ಅದರ ಮೇಲೆ ಕಂಬಿಗಳನ್ನು ಅಳವಡಿಸಿ ಸೋಲಾರ್ ತಂತಿ ಹಾಕಲಾಗುವುದು. ಈ ಪ್ರಯೋಗ ಯಶಸ್ವಿಯಾದರೆ ನಂತರ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.”

” ತಾರಕ ಗಸ್ತಿನಿಂದ ಉದ್ಬೂರು ಗೇಟ್‌ವರೆಗೆ ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಚೈನ್ ಲಿಂಕ್ ಮೆಶ್ ಹಾಕಲಾಗುವುದು. ಇದರಿಂದ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾದರೆ, ಮುಂದಿನ ದಿನಗಳಲ್ಲಿ ಎಲ್ಲಿ ಪ್ರಾಣಿಗಳ ಹಾವಳಿ ಹೆಚ್ಚಿದೆಯೋ ಆ ಸ್ಥಳಗಳಲ್ಲೂ ಹಾಕಲು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು.”

ಮಧು, ಎಸಿಎಫ್, ಮೇಟಿಕುಪ್ಪೆ ಅರಣ್ಯ ವಲಯ

” ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಪ್ಪಿಸುವ ಸಲುವಾಗಿ ಮೇಲಧಿಕಾರಿಗಳ ಹಾಗೂ ಸ್ಥಳೀಯ ಶಾಸಕರ ಸಹಕಾರದೊಂದಿಗೆ ನಾಗರಹೊಳೆ ವ್ಯಾಪ್ತಿಯಲ್ಲಿ ೧೩ ಕಿ.ಮೀ. ಚೈನ್ ಲಿಂಕ್ ಮೆಶ್ ಅಳವಡಿಸಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ವನ್ಯಜೀವಿಗಳ ಹಾವಳಿ ತಗ್ಗಲಿದೆ ಎಂಬ ವಿಶ್ವಾಸವಿದೆ.”

ಎಸ್.ಎಸ್.ಸಿದ್ದರಾಜು, ಆರ್‌ಎಫ್‌ಒ, ಅಂತರಸಂತೆ

” ಬ್ಯಾರಿಕೇಡ್‌ಗಳಿಗೆ ಚೈನ್ ಲಿಂಕ್ ಮೆಶ್ ಅಳವಡಿಸುವ ಮೂಲಕ ವನ್ಯಜೀವಿಗಳ ಅತಿಕ್ರಮಣವನ್ನು ತಡೆದು, ರೈತರ ಬೆಳೆಗಳ ರಕ್ಷಣೆ ಜೊತೆಗೆ ಮಾನವ-ಪ್ರಾಣಿ ಸಂಘರ್ಷವನ್ನೂ ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.”

ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

7 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

7 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

8 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

8 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

8 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

9 hours ago