Andolana originals

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ

ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ

ಮಡಿಕೇರಿ: ಅರಣ್ಯ ಇಲಾಖೆ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಚಾರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೊಡಗು ಜಿಲ್ಲೆಗೆ ಸಂಬಂಽಸಿದಂತೆ ಈ ಬಗ್ಗೆ ಚಾರಣಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಕೃತಿ ಸಂಪತ್ತು ಉಳಿವಿಗೆ ಮತ್ತು ಚಾರಣದ ನಿಜವಾದ ಸವಿಯನ್ನು ಸವಿಯಲು ಇಂತಹ ಮಾರ್ಗಸೂಚಿ ಅನಿವಾರ್ಯವೆಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ಹಿಂದೆ ಹಲವು ಟ್ರಕ್ಕಿಂಗ್ ಪ್ರದೇಶ ಗಳಿದ್ದವು. ಆದರೆ, ಈಗ ಅಧಿಕೃತವಾಗಿ ೬-೭ ಪ್ರದೇಶಗಳು ಮಾತ್ರ ಇವೆ. ಅಲ್ಲಿಗೆ ವಾರಂತ್ಯದಲ್ಲಿ ಒಂದೇ ಬಾರಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಲ್ಲದೆ, ಪ್ರಮುಖ ಟ್ರಕ್ಕಿಂಗ್ ಪಾಯಿಂಟ್ ತಡಿಯಂಡ ಮೋಳ್ ಸೇರಿದಂತೆ ಕೆಲವೆಡೆ ಮಾನವ ಸಂಚಾರದಿಂದ ಹಸಿರು ಮಾಯವಾಗಿದ್ದು, ರಸ್ತೆಗಳ ದರ್ಶನವಾಗುತ್ತಿದೆ. ಮುಖ್ಯವಾಗಿ ಚಾರಣಕ್ಕೆ ತೆರಳಬೇಕಾದರೆ ಸೂಕ್ತ ತಯಾರಿ ಮಾಡಿಕೊಳ್ಳಬೇಕಾಗುತ್ತದೆ.

ತಲೆಗೆ ಕ್ಯಾಪ್, ನೀರು, ಆಹಾರ ಪದಾರ್ಥ ಇರುವ ಬ್ಯಾಗ್ ಕೊಂಡೊಯ್ಯಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಕೊಂಡೊಯ್ಯುವ ವಸ್ತುಗಳಿಂದ ಅರಣ್ಯಕ್ಕೆ ಹಾನಿಯಾಗದಂತೆ ನೋಡಿಕೊಳ್ಳಬೇಕಿದೆ. ಆದರೆ, ಜಿಲ್ಲೆಗೆ ಇತರ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು, ಯಾವುದೇ ಸಿದ್ಧತೆ ಇಲ್ಲದೆಯೂ ಚಾರಣ ತಾಣಗಳಿಗೆ ತೆರಳಿ ತಾವು ಸಮಸ್ಯೆಗೊಳಗಾಗುವುದಲ್ಲದೆ, ಸ್ಥಳೀಯರಿಗೂ ಸಮಸ್ಯೆ ಸೃಷ್ಟಿಸುತ್ತಿದ್ದಾರೆ.

ಅರಣ್ಯ ಪ್ರದೇಶಗಳಲ್ಲಿ ಚಾರಣಕ್ಕೆ ತೆರಳುವ ಸಂದರ್ಭದಲ್ಲಿ ಕಾಡು ಪ್ರಾಣಿಗಳ ಆವಾಸ ಸ್ಥಾನಕ್ಕೆ ತೆರಳುತ್ತಿದ್ದೇವೆ ಎಂಬ ಸಾಮಾನ್ಯ ಜ್ಞಾನ ಪ್ರತಿಯೊಬ್ಬರಲ್ಲೂ ಇರಬೇಕಾಗುತ್ತದೆ. ಯಾವುದೇ ಶಬ್ದ ಮಾಡದೆ ಅಲ್ಲಿನ ರಮಣೀಯ ಸೌಂದರ್ಯವನ್ನು ಸವಿಯಬೇಕು. ಆದರೆ, ಈಗ ಚಾರಣಕ್ಕೆ ತೆರಳುವ ಕೆಲವರಲ್ಲಿ ಆ ಪರಿಕಲ್ಪನೆಯೇ ಇಲ್ಲ. ಬೊಬ್ಬೆ ಹೊಡೆಯುವುದು, ಬಂಡೆ ಕಲ್ಲುಗಳ ಮೇಲೆ ಹತ್ತುವುದು ಹೀಗೆ ಒಂದಿಲ್ಲೊಂದು ಸಮಸ್ಯೆ ಸೃಷ್ಟಿಸುವವರೇ ಹೆಚ್ಚಾಗಿದ್ದಾರೆ.

ಚಾರಣಕ್ಕೆ ಸಣ್ಣ ಗುಂಪಿನಲ್ಲಿ ತೆರಳಿದರೆ ಅಲ್ಲಿನ ಸೊಗಸಾದ ವಾತಾವರಣವನ್ನು ಸವಿಯಲು ಸಾಧ್ಯವಾಗುತ್ತದೆ. ಹೆಚ್ಚಿನ ಜನ ತೆರಳಿದಾಗ ಅಲ್ಲಿನ ಸೌಂದರ್ಯವನ್ನು ಸರಿಯಾಗಿ ಸವಿ ಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಅಲ್ಲಿನ ಅರಣ್ಯದ ಬಗ್ಗೆ ಮಾಹಿತಿ ಇರುವವರು ಜೊತೆಗೆ ಇದ್ದರೆ ಚಾರಣಕ್ಕೆ ತೆರಳುವವರಿಗೆ ಯಾವ ಸಮಸ್ಯೆ ಯೂ ಆಗುವುದಿಲ್ಲ. ಈ ಎಲ್ಲ ಕಾರಣಗಳಿಂದ ಅರಣ್ಯ ಸಚಿವರು ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಗೆ ಮೆಚ್ಚುಗೆ ವ್ಯಕ್ತವಾಗಿದೆ.

” ಜಾತ್ರೆಗೆ ಹೋದಂತೆ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ತೆರಳಿದರೆ ಅಲ್ಲಿನ ಸೌಂದರ್ಯವನ್ನು ಸವಿಯಲು ಸಾಧ್ಯವಾಗುವುದಿಲ್ಲ. ಕೊಡಗಿನ ಎಲ್ಲ ಚಾರಣ ಪ್ರದೇಶಕ್ಕೆ ತೆರಳುತ್ತೇವೆ. ಹಿಂದೆ ಇದ್ದಷ್ಟು ಸೌಂದರ್ಯ ಈಗ ಕಾಣ ಸಿಗುವುದಿಲ್ಲ. ಹಸಿರು ಮಾಯವಾಗುತ್ತಿದ್ದು, ಒಣ ರಸ್ತೆ ಮಾದರಿಯ ಚಿತ್ರಣ ಕಂಡುಬರುತ್ತಿದೆ. ಪ್ರಕೃತಿ ಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ಅರಣ್ಯ ಸಚಿವರ ಈ ನೂತನ ಮಾರ್ಗಸೂಚಿ ಶ್ಲಾಘನೀಯವಾಗಿದೆ.”

-ಮಹೇಶ್, ಆರೋಹಣ ಕೊಡಗು ಚಾರಣ ತಂಡದ ಪ್ರಮುಖ

” ಅರಣ್ಯ ಇಲಾಖೆ ವ್ಯಾಪ್ತಿಗೊಳಪಡುವ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೊಸ ಮಾರ್ಗಸೂಚಿ ಅನ್ವಯವಾಗಲಿದ್ದು, ಕೊಡಗು ಜಿಲ್ಲೆಗೂ ಅನ್ವಯವಾಗಲಿದೆ. ಹೊಸ ಮಾರ್ಗಸೂಚಿಯ ಅನುಷ್ಠಾನ ಸಂಬಂಧ ಸಿದ್ಧತೆಯಲ್ಲಿದ್ದು, ಶೀಘ್ರದಲ್ಲೇ ಎಲ್ಲಾ ಚಾರಣ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿಯನ್ನು ಪಾಲಿಸಲಾಗುತ್ತದೆ.”

-ಅಭಿಷೇಕ್, ಉಪಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ

 

 

ಆಂದೋಲನ ಡೆಸ್ಕ್

Recent Posts

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

7 mins ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

14 mins ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

22 mins ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

27 mins ago

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

9 hours ago