Andolana originals

ಹೋಬಳಿ ಕೇಂದ್ರದಲ್ಲಿ ಬಸ್ ತಂಗುದಾಣವಿಲ್ಲದೆ ಪರದಾಟ

ಪಿ ಶಿವಕುಮಾರ್

ದೊಡ್ಡ ಕವಲಂದೆ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ 

ದೊಡ್ಡಕವಲಂದೆ: ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮ ಹೋಬಳಿ ಕೇಂದ್ರವಾಗಿದ್ದು ಪ್ರತಿನಿತ್ಯ ಸರ್ಕಾರಿ ಸಾರಿಗೆ ಬಸ್ ಗಳು, ಖಾಸಗಿ ಬಸ್‌ಗಳು ಗ್ರಾಮದ ಮೂಲಕ ಸಂಚರಿಸುತ್ತವೆ. ಆದರೆ ಪ್ರಯಾಣಿಕರು ವಿರಮಿಸಿ ಕೊಳ್ಳಲು ಬಸ್ ತಂಗುದಾಣ ಇಲ್ಲದೆ ಬಿಸಿಲು, ಮಳೆಯಲ್ಲೇ ನಿಲ್ಲಬೇಕಾಗಿದೆ.

ನಂಜನಗೂಡು- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ ೭೬೬ ರಲ್ಲಿ ದೊಡ್ಡ ಕವಲಂದೆ ಹೋಬಳಿ ಕೇಂದ್ರ ಇದೆ. ಈ ಹೆದ್ದಾರಿಯು ಮೈಸೂರು, ನಂಜನಗೂಡು, ಚಾಮರಾಜನಗರ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ಸೇರಿದಂತೆ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಸುತ್ತಮುತ್ತಲಿನ ಸಾರ್ವಜನಿಕರು ನಗರ ಮತ್ತು ಪಟ್ಟಣ ಪ್ರದೇಶಕ್ಕೆ ತೆರಳಲು ಹೋಬಳಿ ಕೇಂದ್ರಕ್ಕೆ ಆಗಮಿಸುತ್ತಾರೆ.

ಆದರೆ ಹೋಬಳಿ ಕೇಂದ್ರದಲ್ಲಿ ಸೂಕ್ತ ಬಸ್ ನಿಲ್ದಾಣ ಇಲ್ಲದೆ ರಸ್ತೆಯಲ್ಲಿಯೇ ನಿಂತು ಬಸ್ ಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. ಬಸ್ ನಿಲ್ದಾಣ ಇಲ್ಲದ ಕಾರಣ ಬಸ್ ಹಿಡಿಯುವವರು ನಡು ರಸ್ತೆಯಲ್ಲಿ ನಿಂತು ದಿನನಿತ್ಯ ಹೈರಾಣಾಗುತ್ತಿದ್ದಾರೆ. ಬಿಸಿಲು ಮಳೆ ಹೆಚ್ಚಾದ ಸಂದರ್ಭದಲ್ಲಿ ಅಕ್ಕ ಪಕ್ಕದ ಅಂಗಡಿ ಮಳಿಗೆಗಳ ಬಳಿ ಪ್ರಯಾಣಿಕರು ಆಶ್ರಯ ಪಡೆಯಬೇಕಾಗಿದೆ. ಕೆಲವು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ಬಸ್ ಹತ್ತಲು ಹೋಗಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದರು.

ಬಸ್ ನಿಲ್ದಾಣ ನಿರ್ಮಿಸಿ ಕೊಡುವಂತೆ ಸಾರ್ವಜನಿಕರು ಹಲವಾರು ಬಾರಿ ದೂರು ನೀಡಿದರೂ ಅಧಿಕಾರಿಗಳು ಜಾಗ ಇಲ್ಲ ಎನ್ನುವ ನೆಪವನ್ನು ಹೇಳುತ್ತಿದ್ದಾರೆ ಎಂಬುದು ಗ್ರಾಮಸ್ಥರ ಆರೋಪ. ಹೋಬಳಿ ಕೇಂದ್ರದಲ್ಲಿ ಜಾಗದ ಸಮಸ್ಯೆಯ ನೆಪ ಇಟ್ಟುಕೊಂಡು ನಿಲ್ದಾಣ ನಿರ್ಮಿಸಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪೊಲೀಸ್ ಇಲಾಖೆ ಕಟ್ಟಡ ಹಾಗೂ ದೇವನೂರು ಗ್ರಾಮಕ್ಕೆ ತೆರಳುವ ಬಳಿ ಜಾಗ ಇದ್ದು ಬಸ್ ನಿಲ್ದಾಣಕ್ಕೆ ಉಪಯೋಗಿಸಿಕೊಂಡು, ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಪ್ರಯಾಣಿಕ ಮಂಜೇಶ್ ಒತ್ತಾಯಿಸಿದ್ದಾರೆ.

” ಬಸ್ ನಿಲ್ದಾಣ ಸಂಬಂಧ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆದಿರುವ ವಿಷಯ  ನನಗೂ ತಿಳಿದಿದೆ. ಆದರೆ ಕಂದಾಯ ಇಲಾಖೆಗೆ ಸಂಬಂಧಿಸಿದ ಜಾಗ ದೊಡ್ಡ ಕವಲಂದೆ ಗ್ರಾಮದಲ್ಲಿ ಇಲ್ಲ. ಸಮಸ್ಯೆಗೆ ಸಂಬಂಧಿಸಿದಂತೆ ಕೆಎಸ್‌ಆರ್ ಟಿಸಿ ಹಾಗೂ ತಾಪಂ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಸದ್ಯಕ್ಕೆ ಪೊಲೀಸ್ ಇಲಾಖೆ ಕಟ್ಟಡ ಖಾಲಿಯಿದ್ದು, ಇದು ಸೂಕ್ತವೆನಿಸಿದರೆ ಮುಂದಿನ ಕ್ರಮ ಕೈಗೊಳ್ಳುತ್ತೇನೆ.

-ಶಿವಕುಮಾರ್ ಕಾಸನೂರು, ತಹಸಿಲ್ದಾರ್

” ದೊಡ್ಡ ಕವಲಂದೆ ಹೋಬಳಿ ಕೇಂದ್ರವಾಗಿದ್ದರೂ ಯಾವುದೇ ಪ್ರಯೋಜನವಿಲ್ಲ. ಮೂಲಸೌಕರ್ಯಕ್ಕಾಗಿ ಪ್ರಯಾಣಿಕರು ದಿನನಿತ್ಯ ಪರದಾಡುತ್ತಿರುವುದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಕಾಣಿಸುತ್ತಿಲ್ಲ. ಜೀವ ಕೈಯಲ್ಲಿ ಹಿಡಿದುಕೊಂಡು ಬಸ್‌ಗಳಿಗೆ ಕಾಯಬೇಕಿರುವುದು ವಿಪರ್ಯಾಸವೇ ಸರಿ. ಈಗಲಾದರೂ ಬಸ್ ತಂಗುದಾಣ ನಿರ್ಮಿಸಲಿ.

-ಕೆ.ಜಿ.ಬಸವಣ್ಣ, ಪ್ರಯಾಣಿಕರು

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

19 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

19 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago