Andolana originals

ಒಂದೂವರೆ ವರ್ಷದಿಂದ ಅಧಿಕಾರವಿಲ್ಲದೆ ಅಭಿವೃದ್ಧಿಗೆ ಹಿನ್ನಡೆ

ಕೋಟೆ: ಪುರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿರುದ್ದ ತಡೆಯಾಜ್ಞೆ ಹಿನ್ನೆಲೆಯಲ್ಲಿ ನಡೆಯದ ಚುನಾವಣೆ

ಮಂಜು ಕೋಟೆ

ಎಚ್‌.ಡಿ.ಕೋಟೆ: ಪಟ್ಟಣದ ಪುರಸಭೆಯ ಆಡಳಿತ ಮಂಡಳಿಗೆ ಒಂದೂವರೆ ವರ್ಷದಿಂದ ಅಧಿಕಾರವಿಲ್ಲದೆ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ.

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅವಧಿ ಪೂರ್ಣಗೊಂಡು ಒಂದೂವರೆ ವರ್ಷ ಕಳೆದಿದೆ. ಎರಡು ತಿಂಗಳ ಹಿಂದೆ ಸರ್ಕಾರ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ ನಡೆಸುವಂತೆ ಅವಕಾಶ ಮಾಡಿಕೊಡಲಾಗಿತ್ತು.

ಪ್ರಕಟಗೊಂಡಿದ್ದ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆಯ ಮೀಸಲಾತಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧು ಕುಮಾರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಸರ್ಕಾರ ಮತ್ತು ನಗರಾಭಿವೃದ್ಧಿ ಇಲಾಖೆ ತಡೆಯಾಜ್ಞೆಯನ್ನು ತೆರವುಗೊಳಿಸುವುದಾ ಗಲಿ ಅಥವಾ ಹೊಸ ಮೀಸಲಾತಿಯ ಮೂಲಕ ಚುನಾವಣೆ ಮಾಡುವ ಪ್ರಕ್ರಿಯೆಯನ್ನಾಗಲಿ ನಡೆಸದೇ ಇರುವುದರಿಂದ ಆಡಳಿತ ಮಂಡಳಿಗೆ ಅಧಿಕಾರ ನಡೆಸುವ ಅವಕಾಶ ಇಲ್ಲದಂತಾಗಿದೆ.

ಒಂದೂವರೆ ವರ್ಷದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳು ಖಾಲಿಯಾಗಿರುವುದರಿಂದ ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ಸಹಕಾರವಾಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಿದ್ದರೂ ಬಜೆಟ್ ಮಂಡನೆ ಸಭೆ ನಡೆದಿದ್ದನ್ನು ಬಿಟ್ಟರೆ ಬೇರೆ ಯಾವುದೇ ಸಾಮಾನ್ಯ ಸಭೆ ನಡೆದಿಲ್ಲ. ಇದರಿಂದ ಪಟ್ಟಣದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಚುರುಕಾಗಿ ನಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗದೆ ಕೆಲವೊಂದು ಕಾಮಗಾರಿಗಳು ಕಳಪೆಯಿಂದ ನಡೆದಿದ್ದರಿಂದ ಇದನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಪಿಡಿ ಶುಭ ಅವರು ಇಲ್ಲಿನ ಇಂಜಿನಿಯರ್ ಸುರೇಶ ಅವರನ್ನು ಇತ್ತೀಚೆಗೆ ಅಮಾನತ್ತುಗೊಳಿಸಿದ್ದರು.

ಇಲ್ಲಿನ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ನಡುವಿನ ಮುಸುಕಿನ ಗುದ್ದಾಟದಿಂದ ಸಾರ್ವಜನಿಕರ ಮತ್ತು ಕಚೇರಿಯ ಕೆಲಸ ಕಾರ್ಯಗಳು ಬಹಳಷ್ಟು ವಿಳಂಬವಾಗುತ್ತಿವೆ ಎಂಬ ಆರೋಪವೂ ಕೇಳಿಬರುತ್ತಿದೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ನಡೆದು ಅಧಿಕಾರಕ್ಕೆ ಬರಬೇಕು ಅಥವಾ ಆಡಳಿತಾಧಿಕಾರಿಯಾದ ಹುಣಸೂರಿನ ಉಪವಿಭಾಗಾಧಿಕಾರಿ ವಿಜಯಕುಮಾರ್ ಅವರು ಪುರಸಭೆ ಸದಸ್ಯರ ಸಾಮಾನ್ಯ ಸಭೆ ನಡೆಸಿ ಆಡಳಿತವನ್ನು ಚುರುಕುಗೊಳಿಸಿ ಅಭಿವೃದ್ಧಿ ಕೆಲಸಗಳನ್ನು ನಡೆಸಿದಾಗ ಮಾತ್ರ ಹಿಂದುಳಿದಿರುವ ಈ ಪುರಸಭೆ ಅಭಿವೃದ್ಧಿಯತ್ತ ಸಾಗಲಿದೆ. ಕಚೇರಿಯ ಕೆಲಸ-ಕಾರ್ಯಗಳು ಸಮರ್ಪಕವಾಗಿ ನಡೆಯಲಿವೆ. ಪಟ್ಟಣಕ್ಕೆ ಮೂಲಸೌಕರ್ಯಗಳು ದೊರೆಯ ಲಿವೆ ಎಂಬುದು ಪಟ್ಟಣದ ಸಾರ್ವಜನಿಕರ ಆಶಯವಾಗಿದೆ.

ನಾಯಕ ಸಮುದಾಯಕ್ಕೆ ಸೇರಿದ ಮಹಿಳೆಯರು ಪುರಸಭೆಯಲ್ಲಿ ಅಧಿಕಾರ ನಡೆಸಲು ಶಾಸಕರು ಮತ್ತು ಕಾಂಗ್ರೆಸ್ ಸದಸ್ಯರು ಅವಕಾಶ ನೀಡದೆ ತಡೆಯಾಜ್ಞೆ ತಂದಿದ್ದಾರೆ. ಬೇರೆ ಸಮುದಾಯಕ್ಕೆ ಮೀಸಲಾತಿ ಒದಗಿಸಿ ಅಧಿಕಾರ ಮಾಡುವ ಅವಕಾಶವನ್ನು ಕೂಡ ಕಲ್ಪಿಸದೇ ಇರುವುದರಿಂದ ಪುರಸಭೆಯ ಅಭಿವೃದ್ಧಿ ಕೆಲಸಗಳು ನಡೆಯದೆ ಜನಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದಾರೆ.

-ಶಿವಮ್ಮ ಚಾಕಹಳ್ಳಿ ಕೃಷ್ಣ, ಪುರಸಭೆ ಜಾ.ದಳ ಸದಸ್ಯರು

ಅಧ್ಯಕ್ಷ ಸ್ಥಾನದ ಮೀಸಲಾತಿಗೆ ಮಾತ್ರ ತಡೆಯಾಜ್ಞೆ ಇರುವುದರಿಂದ ಉಳಿದ ಸ್ಥಾನಗಳಿಗೆ ಚುನಾವಣೆ ನಡೆಸಬಹುದೇ ಎಂದು ಚುನಾವಣಾ ಶಾಖೆಯವರಿಗೆ ಪತ್ರ ಬರೆಯಲಾಗಿದೆ. ಸದಸ್ಯರುಗಳ ಸಾಮಾನ್ಯ ಸಭೆ ನಡೆಸಲು ಆಡಳಿತ ಅಧಿಕಾರಿಗಳು ಸೂಚಿಸಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದೇನೆ.

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ

ಆಂದೋಲನ ಡೆಸ್ಕ್

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

9 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

9 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

10 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

10 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

14 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

15 hours ago