Andolana originals

ಒಂದೂವರೆ ವರ್ಷದಿಂದ ಅಧಿಕಾರವಿಲ್ಲದೆ ಅಭಿವೃದ್ಧಿಗೆ ಹಿನ್ನಡೆ

ಕೋಟೆ: ಪುರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿರುದ್ದ ತಡೆಯಾಜ್ಞೆ ಹಿನ್ನೆಲೆಯಲ್ಲಿ ನಡೆಯದ ಚುನಾವಣೆ

ಮಂಜು ಕೋಟೆ

ಎಚ್‌.ಡಿ.ಕೋಟೆ: ಪಟ್ಟಣದ ಪುರಸಭೆಯ ಆಡಳಿತ ಮಂಡಳಿಗೆ ಒಂದೂವರೆ ವರ್ಷದಿಂದ ಅಧಿಕಾರವಿಲ್ಲದೆ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ.

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅವಧಿ ಪೂರ್ಣಗೊಂಡು ಒಂದೂವರೆ ವರ್ಷ ಕಳೆದಿದೆ. ಎರಡು ತಿಂಗಳ ಹಿಂದೆ ಸರ್ಕಾರ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ ನಡೆಸುವಂತೆ ಅವಕಾಶ ಮಾಡಿಕೊಡಲಾಗಿತ್ತು.

ಪ್ರಕಟಗೊಂಡಿದ್ದ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆಯ ಮೀಸಲಾತಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧು ಕುಮಾರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಸರ್ಕಾರ ಮತ್ತು ನಗರಾಭಿವೃದ್ಧಿ ಇಲಾಖೆ ತಡೆಯಾಜ್ಞೆಯನ್ನು ತೆರವುಗೊಳಿಸುವುದಾ ಗಲಿ ಅಥವಾ ಹೊಸ ಮೀಸಲಾತಿಯ ಮೂಲಕ ಚುನಾವಣೆ ಮಾಡುವ ಪ್ರಕ್ರಿಯೆಯನ್ನಾಗಲಿ ನಡೆಸದೇ ಇರುವುದರಿಂದ ಆಡಳಿತ ಮಂಡಳಿಗೆ ಅಧಿಕಾರ ನಡೆಸುವ ಅವಕಾಶ ಇಲ್ಲದಂತಾಗಿದೆ.

ಒಂದೂವರೆ ವರ್ಷದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳು ಖಾಲಿಯಾಗಿರುವುದರಿಂದ ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ಸಹಕಾರವಾಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಿದ್ದರೂ ಬಜೆಟ್ ಮಂಡನೆ ಸಭೆ ನಡೆದಿದ್ದನ್ನು ಬಿಟ್ಟರೆ ಬೇರೆ ಯಾವುದೇ ಸಾಮಾನ್ಯ ಸಭೆ ನಡೆದಿಲ್ಲ. ಇದರಿಂದ ಪಟ್ಟಣದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಚುರುಕಾಗಿ ನಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗದೆ ಕೆಲವೊಂದು ಕಾಮಗಾರಿಗಳು ಕಳಪೆಯಿಂದ ನಡೆದಿದ್ದರಿಂದ ಇದನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಪಿಡಿ ಶುಭ ಅವರು ಇಲ್ಲಿನ ಇಂಜಿನಿಯರ್ ಸುರೇಶ ಅವರನ್ನು ಇತ್ತೀಚೆಗೆ ಅಮಾನತ್ತುಗೊಳಿಸಿದ್ದರು.

ಇಲ್ಲಿನ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ನಡುವಿನ ಮುಸುಕಿನ ಗುದ್ದಾಟದಿಂದ ಸಾರ್ವಜನಿಕರ ಮತ್ತು ಕಚೇರಿಯ ಕೆಲಸ ಕಾರ್ಯಗಳು ಬಹಳಷ್ಟು ವಿಳಂಬವಾಗುತ್ತಿವೆ ಎಂಬ ಆರೋಪವೂ ಕೇಳಿಬರುತ್ತಿದೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ನಡೆದು ಅಧಿಕಾರಕ್ಕೆ ಬರಬೇಕು ಅಥವಾ ಆಡಳಿತಾಧಿಕಾರಿಯಾದ ಹುಣಸೂರಿನ ಉಪವಿಭಾಗಾಧಿಕಾರಿ ವಿಜಯಕುಮಾರ್ ಅವರು ಪುರಸಭೆ ಸದಸ್ಯರ ಸಾಮಾನ್ಯ ಸಭೆ ನಡೆಸಿ ಆಡಳಿತವನ್ನು ಚುರುಕುಗೊಳಿಸಿ ಅಭಿವೃದ್ಧಿ ಕೆಲಸಗಳನ್ನು ನಡೆಸಿದಾಗ ಮಾತ್ರ ಹಿಂದುಳಿದಿರುವ ಈ ಪುರಸಭೆ ಅಭಿವೃದ್ಧಿಯತ್ತ ಸಾಗಲಿದೆ. ಕಚೇರಿಯ ಕೆಲಸ-ಕಾರ್ಯಗಳು ಸಮರ್ಪಕವಾಗಿ ನಡೆಯಲಿವೆ. ಪಟ್ಟಣಕ್ಕೆ ಮೂಲಸೌಕರ್ಯಗಳು ದೊರೆಯ ಲಿವೆ ಎಂಬುದು ಪಟ್ಟಣದ ಸಾರ್ವಜನಿಕರ ಆಶಯವಾಗಿದೆ.

ನಾಯಕ ಸಮುದಾಯಕ್ಕೆ ಸೇರಿದ ಮಹಿಳೆಯರು ಪುರಸಭೆಯಲ್ಲಿ ಅಧಿಕಾರ ನಡೆಸಲು ಶಾಸಕರು ಮತ್ತು ಕಾಂಗ್ರೆಸ್ ಸದಸ್ಯರು ಅವಕಾಶ ನೀಡದೆ ತಡೆಯಾಜ್ಞೆ ತಂದಿದ್ದಾರೆ. ಬೇರೆ ಸಮುದಾಯಕ್ಕೆ ಮೀಸಲಾತಿ ಒದಗಿಸಿ ಅಧಿಕಾರ ಮಾಡುವ ಅವಕಾಶವನ್ನು ಕೂಡ ಕಲ್ಪಿಸದೇ ಇರುವುದರಿಂದ ಪುರಸಭೆಯ ಅಭಿವೃದ್ಧಿ ಕೆಲಸಗಳು ನಡೆಯದೆ ಜನಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದಾರೆ.

-ಶಿವಮ್ಮ ಚಾಕಹಳ್ಳಿ ಕೃಷ್ಣ, ಪುರಸಭೆ ಜಾ.ದಳ ಸದಸ್ಯರು

ಅಧ್ಯಕ್ಷ ಸ್ಥಾನದ ಮೀಸಲಾತಿಗೆ ಮಾತ್ರ ತಡೆಯಾಜ್ಞೆ ಇರುವುದರಿಂದ ಉಳಿದ ಸ್ಥಾನಗಳಿಗೆ ಚುನಾವಣೆ ನಡೆಸಬಹುದೇ ಎಂದು ಚುನಾವಣಾ ಶಾಖೆಯವರಿಗೆ ಪತ್ರ ಬರೆಯಲಾಗಿದೆ. ಸದಸ್ಯರುಗಳ ಸಾಮಾನ್ಯ ಸಭೆ ನಡೆಸಲು ಆಡಳಿತ ಅಧಿಕಾರಿಗಳು ಸೂಚಿಸಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದೇನೆ.

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

1 hour ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

2 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

2 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

3 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

3 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

4 hours ago