Andolana originals

ಓದುಗರ ಪತ್ರ: ಮಾನವ ಸರಪಳಿಯಲ್ಲಿ ಗಾಂಧೀಜಿಯ ಕರಗಳಿಲ್ಲ!

ಸೆಪ್ಟೆಂಬರ್ 15ರ ಭಾನುವಾರ ಕರ್ನಾಟಕ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದು, ಬೀದರ್‌ನಿಂದ ಚಾ ರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.

ಸ್ವಾವಲಂಬಿ, ಸ್ವರಾಜ್ಯ, ಸಾಮರಸ್ಯಪೂರ್ಣ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವನ್ನು ಕಟ್ಟದ ಹೊರತು ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗದು. ಆದ್ದರಿಂದ ಎಲ್ಲ ಹಂತಗಳಲ್ಲಿಯೂ ಪ್ರಜಾಪ್ರಭುತ್ವವನ್ನು ಶಕ್ತಗೊಳಿಸಬೇಕೆಂಬುದು ಗಾಂಧೀಜಿ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರವರ ಆಶಯವಾಗಿತ್ತು. ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಸಾಧಿಸುವ ಸಲುವಾಗಿಯೇ ಗಾಂಧೀಜಿಯವರು ಅಸ್ಪ್ಯಶ್ಯತೆ, ಜಾತೀಯತೆ, ಮಹಿಳಾ ಅಸಮಾನತೆ,ಅಸಮಾನ ಶಿಕ್ಷಣ ಮೊದಲಾದ ಸಾಮಾಜಿಕ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ್ದರು.

ಮುಷ್ಕರ, ಚಳವಳಿ, ಸತ್ಯಾಗ್ರಹಗಳ ಮೂಲಕ ಅಖಂಡ ಭಾರತವನ್ನು ಸುತ್ತಿ ಜನರಿಗೆ ರಾಜಕೀಯ ಮತ್ತು ಸಾಮಾಜಿಕ ಶಿಕ್ಷಣ ನೀಡಿ ತಮ್ಮ ಹಕ್ಕುಗಳೊಂದಿಗೆ ಕರ್ತವ್ಯ ಪ್ರಜ್ಞೆಯನ್ನೂ ಮೂಡಿಸಿ ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ದುಡಿದವರು ಮಹಾತ್ಮ ಗಾಂಧೀಜಿ. ಆದರೆ ಗಾಂಧೀಜಿಯವರ ಹೆಸರನ್ನು ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವು ಕೇವಲ ಮತ ಗಳಿಕೆಗಾಗಿ ಮಾತ್ರ ಬಳಸಿಕೊಂಡು ಉಳಿದ ಸಮಯದಲ್ಲಿ ಅವರನ್ನು ಮರೆತಿದೆ ಅನಿಸುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದಂದು ನಡೆಸುವ ಮಾನವ ಸರಪಳಿಯಲ್ಲಿ ಗಾಂಧೀಜಿಯವರ ಆಶಯಗಳನ್ನು ಕೈಬಿಟ್ಟಿದ್ದು, ಅವರ ಆಶಯಗಳಿಲ್ಲದೆ ಮಾನವ ಸರಪಳಿಯ ಉದ್ದೇಶ ಎಷ್ಟರಮಟ್ಟಿಗೆ ಜನರ ಹೃದಯ ತಲುಪಬಲ್ಲದು? -ಬ್ಯಾ. ರಾ. ಪ್ರಸನ್ನಕುಮಾರ್, ಬ್ಯಾಡರಹಳ್ಳಿ, ಕೆ. ಆರ್. ನಗರ ತಾ.

 

andolana

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

10 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

11 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

13 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

13 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

15 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

15 hours ago