Andolana originals

ಓದುಗರ ಪತ್ರ: ಮಾನವ ಸರಪಳಿಯಲ್ಲಿ ಗಾಂಧೀಜಿಯ ಕರಗಳಿಲ್ಲ!

ಸೆಪ್ಟೆಂಬರ್ 15ರ ಭಾನುವಾರ ಕರ್ನಾಟಕ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದು, ಬೀದರ್‌ನಿಂದ ಚಾ ರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.

ಸ್ವಾವಲಂಬಿ, ಸ್ವರಾಜ್ಯ, ಸಾಮರಸ್ಯಪೂರ್ಣ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವನ್ನು ಕಟ್ಟದ ಹೊರತು ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗದು. ಆದ್ದರಿಂದ ಎಲ್ಲ ಹಂತಗಳಲ್ಲಿಯೂ ಪ್ರಜಾಪ್ರಭುತ್ವವನ್ನು ಶಕ್ತಗೊಳಿಸಬೇಕೆಂಬುದು ಗಾಂಧೀಜಿ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರವರ ಆಶಯವಾಗಿತ್ತು. ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಸಾಧಿಸುವ ಸಲುವಾಗಿಯೇ ಗಾಂಧೀಜಿಯವರು ಅಸ್ಪ್ಯಶ್ಯತೆ, ಜಾತೀಯತೆ, ಮಹಿಳಾ ಅಸಮಾನತೆ,ಅಸಮಾನ ಶಿಕ್ಷಣ ಮೊದಲಾದ ಸಾಮಾಜಿಕ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ್ದರು.

ಮುಷ್ಕರ, ಚಳವಳಿ, ಸತ್ಯಾಗ್ರಹಗಳ ಮೂಲಕ ಅಖಂಡ ಭಾರತವನ್ನು ಸುತ್ತಿ ಜನರಿಗೆ ರಾಜಕೀಯ ಮತ್ತು ಸಾಮಾಜಿಕ ಶಿಕ್ಷಣ ನೀಡಿ ತಮ್ಮ ಹಕ್ಕುಗಳೊಂದಿಗೆ ಕರ್ತವ್ಯ ಪ್ರಜ್ಞೆಯನ್ನೂ ಮೂಡಿಸಿ ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ದುಡಿದವರು ಮಹಾತ್ಮ ಗಾಂಧೀಜಿ. ಆದರೆ ಗಾಂಧೀಜಿಯವರ ಹೆಸರನ್ನು ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವು ಕೇವಲ ಮತ ಗಳಿಕೆಗಾಗಿ ಮಾತ್ರ ಬಳಸಿಕೊಂಡು ಉಳಿದ ಸಮಯದಲ್ಲಿ ಅವರನ್ನು ಮರೆತಿದೆ ಅನಿಸುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದಂದು ನಡೆಸುವ ಮಾನವ ಸರಪಳಿಯಲ್ಲಿ ಗಾಂಧೀಜಿಯವರ ಆಶಯಗಳನ್ನು ಕೈಬಿಟ್ಟಿದ್ದು, ಅವರ ಆಶಯಗಳಿಲ್ಲದೆ ಮಾನವ ಸರಪಳಿಯ ಉದ್ದೇಶ ಎಷ್ಟರಮಟ್ಟಿಗೆ ಜನರ ಹೃದಯ ತಲುಪಬಲ್ಲದು? -ಬ್ಯಾ. ರಾ. ಪ್ರಸನ್ನಕುಮಾರ್, ಬ್ಯಾಡರಹಳ್ಳಿ, ಕೆ. ಆರ್. ನಗರ ತಾ.

 

andolana

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago