ಸೆಪ್ಟೆಂಬರ್ 15ರ ಭಾನುವಾರ ಕರ್ನಾಟಕ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದು, ಬೀದರ್ನಿಂದ ಚಾ ರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.
ಸ್ವಾವಲಂಬಿ, ಸ್ವರಾಜ್ಯ, ಸಾಮರಸ್ಯಪೂರ್ಣ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವನ್ನು ಕಟ್ಟದ ಹೊರತು ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗದು. ಆದ್ದರಿಂದ ಎಲ್ಲ ಹಂತಗಳಲ್ಲಿಯೂ ಪ್ರಜಾಪ್ರಭುತ್ವವನ್ನು ಶಕ್ತಗೊಳಿಸಬೇಕೆಂಬುದು ಗಾಂಧೀಜಿ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರವರ ಆಶಯವಾಗಿತ್ತು. ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಸಾಧಿಸುವ ಸಲುವಾಗಿಯೇ ಗಾಂಧೀಜಿಯವರು ಅಸ್ಪ್ಯಶ್ಯತೆ, ಜಾತೀಯತೆ, ಮಹಿಳಾ ಅಸಮಾನತೆ,ಅಸಮಾನ ಶಿಕ್ಷಣ ಮೊದಲಾದ ಸಾಮಾಜಿಕ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ್ದರು.
ಮುಷ್ಕರ, ಚಳವಳಿ, ಸತ್ಯಾಗ್ರಹಗಳ ಮೂಲಕ ಅಖಂಡ ಭಾರತವನ್ನು ಸುತ್ತಿ ಜನರಿಗೆ ರಾಜಕೀಯ ಮತ್ತು ಸಾಮಾಜಿಕ ಶಿಕ್ಷಣ ನೀಡಿ ತಮ್ಮ ಹಕ್ಕುಗಳೊಂದಿಗೆ ಕರ್ತವ್ಯ ಪ್ರಜ್ಞೆಯನ್ನೂ ಮೂಡಿಸಿ ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ದುಡಿದವರು ಮಹಾತ್ಮ ಗಾಂಧೀಜಿ. ಆದರೆ ಗಾಂಧೀಜಿಯವರ ಹೆಸರನ್ನು ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವು ಕೇವಲ ಮತ ಗಳಿಕೆಗಾಗಿ ಮಾತ್ರ ಬಳಸಿಕೊಂಡು ಉಳಿದ ಸಮಯದಲ್ಲಿ ಅವರನ್ನು ಮರೆತಿದೆ ಅನಿಸುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದಂದು ನಡೆಸುವ ಮಾನವ ಸರಪಳಿಯಲ್ಲಿ ಗಾಂಧೀಜಿಯವರ ಆಶಯಗಳನ್ನು ಕೈಬಿಟ್ಟಿದ್ದು, ಅವರ ಆಶಯಗಳಿಲ್ಲದೆ ಮಾನವ ಸರಪಳಿಯ ಉದ್ದೇಶ ಎಷ್ಟರಮಟ್ಟಿಗೆ ಜನರ ಹೃದಯ ತಲುಪಬಲ್ಲದು? -ಬ್ಯಾ. ರಾ. ಪ್ರಸನ್ನಕುಮಾರ್, ಬ್ಯಾಡರಹಳ್ಳಿ, ಕೆ. ಆರ್. ನಗರ ತಾ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…