ಓದುಗರ ಪತ್ರ
ರಾಜ್ಯ ಸರ್ಕಾರವು ಈ ವರ್ಷದ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆಮಾಡಿರುವುದು ಸೂಕ್ತವಾಗಿದೆ.
ಜಾತಿ, ಧರ್ಮದ ಸಂಕೋಲೆಯನ್ನು ಮೀರಿ ವಿಶ್ವಕ್ಕೆ ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುವ ಈ ನಾಡ ಹಬ್ಬಕ್ಕೆ ಕನ್ನಡ ಸಾಹಿತ್ಯದ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಮುಟ್ಟಿಸಿದ ಕನ್ನಡದ ಹೆಣ್ಣು ಮಗಳೊಬ್ಬಳನ್ನು ಜಾತಿ ಧರ್ಮದ ಲೇಪನಗೊಳಿಸಿ ವಿರೋಧಿಸುತ್ತಿರುವುದು ನಾಗರಿಕ ಸಮಾಜವು ನಾಚುವಂತಿದೆ.
ಹೀಗಾದರೆ ಕೋಮು ಸೌಹಾರ್ದತೆಯ ಸಾಮರಸ್ಯದ ಜೀವನ ನಡೆಸುವುದಾದರೂ ಹೇಗೆ? ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ವ್ಯವಸ್ಥೆಯ ಪಿತೂರಿಗಳು, ಜಾತ್ಯತೀತ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅಶಾಂತಿಯನ್ನು ಉಂಟು ಮಾಡುವ ಮನಸ್ಸುಗಳು ಮೊದಲು ಸ್ವಚ್ಛಗೊಂಡು ಜಾತಿ ಮುಕ್ತ ಮನಸ್ಸುಗಳನ್ನು ಕಟ್ಟುವ ಕಾರ್ಯಕ್ಕೆ ಕೈಜೋಡಿಸಬೇಕು. ನಾಡ ಹಬ್ಬದ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್ ಅವರನ್ನು ಜಾತಿ ಧರ್ಮದ ಕಣ್ಣಿನಿಂದ ನೋಡದೆ ದಸರಾ ಉದ್ಘಾಟನೆಗೆ ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ.
– ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…