Andolana originals

ಓದುಗರ ಪತ್ರ: ನಾಡಹಬ್ಬ ದಸರಾಕ್ಕೆ ಧರ್ಮ, ಜಾತಿಗಳ ಲೇಪನ ಬೇಡ

ರಾಜ್ಯ ಸರ್ಕಾರವು ಈ ವರ್ಷದ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆಮಾಡಿರುವುದು ಸೂಕ್ತವಾಗಿದೆ.

ಜಾತಿ, ಧರ್ಮದ ಸಂಕೋಲೆಯನ್ನು ಮೀರಿ ವಿಶ್ವಕ್ಕೆ ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುವ ಈ ನಾಡ ಹಬ್ಬಕ್ಕೆ ಕನ್ನಡ ಸಾಹಿತ್ಯದ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಮುಟ್ಟಿಸಿದ ಕನ್ನಡದ ಹೆಣ್ಣು ಮಗಳೊಬ್ಬಳನ್ನು ಜಾತಿ ಧರ್ಮದ ಲೇಪನಗೊಳಿಸಿ ವಿರೋಧಿಸುತ್ತಿರುವುದು ನಾಗರಿಕ ಸಮಾಜವು ನಾಚುವಂತಿದೆ.

ಹೀಗಾದರೆ ಕೋಮು ಸೌಹಾರ್ದತೆಯ ಸಾಮರಸ್ಯದ ಜೀವನ ನಡೆಸುವುದಾದರೂ ಹೇಗೆ? ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ವ್ಯವಸ್ಥೆಯ ಪಿತೂರಿಗಳು, ಜಾತ್ಯತೀತ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅಶಾಂತಿಯನ್ನು ಉಂಟು ಮಾಡುವ ಮನಸ್ಸುಗಳು ಮೊದಲು ಸ್ವಚ್ಛಗೊಂಡು ಜಾತಿ ಮುಕ್ತ ಮನಸ್ಸುಗಳನ್ನು ಕಟ್ಟುವ ಕಾರ್ಯಕ್ಕೆ ಕೈಜೋಡಿಸಬೇಕು. ನಾಡ ಹಬ್ಬದ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್ ಅವರನ್ನು ಜಾತಿ ಧರ್ಮದ ಕಣ್ಣಿನಿಂದ ನೋಡದೆ ದಸರಾ ಉದ್ಘಾಟನೆಗೆ ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ.

 – ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago