Andolana originals

ಪಿಎಚ್.ಡಿ.ಗೆ ಅವಕಾಶ ಕ್ಷೀಣ: ಅರ್ಹರ ಆಕ್ರೋಶ

ಹೊಸ ನಿಯಮಗಳನ್ನು ಸಡಿಲಿಸಿ ಅನುಕೂಲ ಕಲ್ಪಿಸಲು ಮನವಿ 

ಮೈಸೂರು: ಮಾರ್ಗದರ್ಶಕ ಪ್ರಾಧ್ಯಾಪಕರ ಸಂಖ್ಯೆ ಕೊರತೆಯಿಂದ ಪಿಎಚ್.ಡಿ. ವ್ಯಾಸಂಗಕ್ಕೆ ಅವಕಾಶ ನೀಡುವುದಕ್ಕೆ ಸಮಸ್ಯೆ ಎದುರಾಗಿದೆ ಎಂಬ ಮೈಸೂರು ವಿಶ್ವವಿದ್ಯಾನಿಲಯದ ನಿಲುವಿಗೆ ಹಲವು ಅರ್ಹ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಆಂದೋಲನ’ ದಿನಪತ್ರಿಕೆ ಜು.೩ರ ಸಂಚಿಕೆಯಲ್ಲಿ ‘ಮೈಸೂರು ವಿವಿ: ಪಿಎಚ್.ಡಿ.ಗೆ ಬಾಗಿಲು ಮುಚ್ಚುವ ಆತಂಕ’ ತಲೆಬರಹದಡಿ ಪ್ರಕಟವಾದ ಲೇಖನದ ಹಿನ್ನೆಲೆಯಲ್ಲಿ ಜೆಆರ್‌ಎ-, ಸಿಇಟಿ ಮುಂತಾದ ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು, ವಿವಿ ಕುಂಟುನೆಪ ಹೇಳುತ್ತಿದೆ ಎಂದು ಕಿಡಿಕಾರಿದ್ದಾರೆ.

ವಿದ್ಯಾರ್ಥಿಗಳ ವಿಷಯದಲ್ಲಿ ಮೀನಮೇಷ ಉನ್ನತ ಶಿಕ್ಷಣ ಸಮಿತಿಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸ್ಥಾಪಿಸಲಾಗಿದೆ. ಆದರೆ, ಆ ಸಮಿತಿ ಯಾವುದೇ ತೀರ್ಮಾನ ಕೈಗೊಳ್ಳದೇ ಯುಜಿಸಿ ನಿಯಮದ ಇಂಗ್ಲಿಷ್‌ನಿಂದ ಕನ್ನಡ ತರ್ಜುಮೆ ಮಾಡಿ ನಿಯಮ ಹೊರಡಿಸಿದೆ. ಹಿಂದಿನ ಕುಲಪತಿಗಳು ಹೆಚ್ಚುವರಿ ಅವಕಾಶ ಕಲ್ಪಿಸಿಕೊಟ್ಟಿದ್ದರು. ಈಗಿನ ಕುಲಪತಿ ವಿದ್ಯಾರ್ಥಿಗಳ ವಿಷಯದಲ್ಲಿ ಮೀನಮೇಷ ಎಣಿಸುತ್ತಿದ್ದಾರೆ.”

ನವೀನ್ ಕುಮಾರ್ ಅಳಗಂಚಿ, ಸಿಇಟಿ ಉತ್ತೀರ್ಣ ವಿದ್ಯಾರ್ಥಿ

ಹೆಚ್ಚುವರಿಯಾಗಿ ಇಬ್ಬರಿಗೆ ಅವಕಾಶ ನೀಡಲಿ: ಮೈಸೂರು ವಿವಿ ಕರ್ನಾಟಕದ ಮೊದಲ ವಿವಿ. ಈ ವಿವಿಯಲ್ಲೇ ಪಿಎಚ್.ಡಿ.ಗೆ ಅವಕಾಶ ನೀಡಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಹೊಸ ನಿಯಮ ಜಾರಿಗೊಳಿಸಿರುವುದು ಅಸಂಬದ್ಧ. ಶೇ.೨೦ರಷ್ಟು ಹಿರಿಯ ಪ್ರಾಧ್ಯಾಪಕರಿದ್ದಾರೆ. ಅವರಲ್ಲಿ ಹೆಚ್ಚುವರಿಯಾಗಿ ಕನಿಷ್ಠ ಇಬ್ಬರಿಗೆ ಅವಕಾಶ ಕಲ್ಪಿಸಿದರೆ ಹಲವು ಪ್ರತಿಭಾವಂತರು ಉದ್ಧಾರವಾಗುತ್ತಾರೆ.”

ಧೀರಜ್, ಸಿಇಟಿ ಉತ್ತೀರ್ಣ ವಿದ್ಯಾರ್ಥಿ

” ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಪಿಎಚ್.ಡಿ. ಅವಕಾಶದ ಅವಧಿ ಮುಗಿದು ಹೋಗುವ ಆತಂಕ ಎದುರಾಗಿದೆ. ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾಗುತ್ತದೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಪ್ರಾಧ್ಯಾಪಕರ ಕೊರತೆ ಇದ್ದು, ಸರ್ಕಾರದಿಂದ ನೇಮಕಗೊಳ್ಳಬೇಕು ಎಂದು ಕುಂಟುನೆಪ ಹೇಳುತ್ತಿದ್ದಾರೆ.

ಎಸ್.ರವಿಕುಮಾರ್, ಸಿಇಟಿ ಉತ್ತೀರ್ಣ ವಿದ್ಯಾರ್ಥಿ.

ವಿವಿ ಹೊಸ ನಿಯಮದಿಂದ ಕೆಟ್ಟ ಪರಿಣಾಮ: ಅಧಿಕಾರಿಗಳು ಮತ್ತೊಮ್ಮೆ ಸಮಾಲೋಚನೆ ನಡೆಸಬೇಕು. ಹೆಚ್ಚುವರಿಯಾಗಿ ಅವಕಾಶ ನೀಡಿದರೆ ಸಾಕು. ಅವಕಾಶ ನೀಡಲು ಸಾಧ್ಯವಿಲ್ಲದಿದ್ದಲ್ಲಿ ಪ್ರವೇಶಾತಿ ಪರೀಕ್ಷೆ ನಡೆಸಬಾರದಿತ್ತು. ಹೊಸ ನಿಯಮ, ಕಾನೂನು ತಂದಿರುವುದು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಕೆಟ್ಟ ಪರಿಣಾಮ ಬೀರುತ್ತದೆ.”

ರೋಜಾ, ಜೆಆರ್‌ಎ- ಉತ್ತೀರ್ಣ ವಿದ್ಯಾರ್ಥಿನಿ

” ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಸಮಿತಿ ರಚಿಸಿದ್ದರು. ಇಂದು ಅದೇ ಸಮಿತಿ ವಿದ್ಯಾರ್ಥಿಗಳ ಪರವಾಗಿ ಕೆಲಸ ಮಾಡುವ ನಿರೀಕ್ಷೆಯಿತ್ತು. ಆದರೆ, ಸಮಿತಿ ನಿಯಮಾವಳಿ ಪಾಲಿಸುವುದಾಗಿ ವಿದ್ಯಾರ್ಥಿಗಳ ವಿರುದ್ಧ ತೀರ್ಪು ಬಂದಿದೆ. ವಿದ್ಯಾರ್ಥಿಗಳಿಗೆ ಅವಕಾಶ ನೀಡದ ಮೇಲೆ ವಿವಿ ಮತ್ಯಾವುದರ ಮುಖೇನ ನಡೆಸಲು ಸಾಧ್ಯ.”

ರೋಹನ್, ನೀಟ್ ಉತ್ತೀರ್ಣ ವಿದ್ಯಾರ್ಥಿ

” ಪ್ರವೇಶ ಪರೀಕ್ಷೆ ನಿಯಮಗಳೇ ಸರಿ ಇಲ್ಲ”  ಜೆಆರ್‌ಎ- ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದೇನೆ. ಪ್ರವೇಶಾತಿ ಪರೀಕ್ಷೆ ನಿಯಮಾವಳಿಗಳು ಸರಿಯಾದ ರೀತಿಯಲ್ಲಿ ಇಲ್ಲ. ಹಾಗಾಗಿ ಹಿಂದಿನ ವರ್ಷ ಪ್ರವೇಶಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಪ್ರಾಧ್ಯಾಪಕರಿಗೆ ನೀಡಿರುವ ೮ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಹೊಸಬರನ್ನು ನೇಮಿಸಿಕೊಳ್ಳುವ ಕೆಲಸವಾಗಬೇಕು.”

ಯಶಸ್ವಿನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

5 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

15 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

15 hours ago