Andolana originals

ನೀರಿನ ಸಂಪರ್ಕವೇ ಇಲ್ಲ; ಬಿಲ್ ಪಾವತಿ!

ನಂ.ಗೂಡು ತಾಲ್ಲೂಕಿನ ದುಗ್ಗಹಳ್ಳಿ ಗ್ರಾಪಂನ ಮಂಗಳೂರಿನಲ್ಲಿ ಪ್ರಕರಣ

• ಶ್ರೀಧರ ಆರ್ ಭಟ್
ನಂಜನಗೂಡು: ಜಲಜೀವನ್ ಯೋಜನೆ ಮಂಜೂರಾಗಿ ನಾಲ್ಕು ವರ್ಷಗಳು ಕಳೆದರೂ ಗ್ರಾಮಕ ಹನಿ ನೀರೂ ಬಂದಿಲ್ಲ. ಹಾಗಂತ ಕಾಮಗಾರಿಯ ಹಣವೂ ಇಲಾಖೆಯಲ್ಲಿ ಇಲ್ಲ. ಇಂಥ ಸ್ಥಿತಿ ತಾಲ್ಲೂಕಿನ ದುಗ್ಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಗಳೂರು ಗ್ರಾಮದಲ್ಲಿ ನಿರ್ಮಾಣವಾಗಿದೆ.

ಕಂದಾಯ ಇಲಾಖೆ ಹಾಗೂ ತಾಪಂ ಲೆಕ್ಕದಲ್ಲಿ ಕೇವಲ 3 ಮನೆಗಳಿರುವ ತಾಲ್ಲೂಕಿನ ಅತ್ಯಂತ ಪುಟ್ಟ ಗ್ರಾಮ ಮಂಗಳೂರು, ಸರ್ಕಾರಿ ದಾಖಲೆಗಳ ಪ್ರಕಾರ ಈ ಗ್ರಾಮದಲ್ಲಿ ರುವುದು ಮೂರೇ ಮನೆಗಳು. ಆದರೆ ಜಲಜೀವನ ಯೋಜನೆಯ ಪ್ರಕಾರ ಗ್ರಾಮದಲ್ಲಿರುವುದು 8 ಮನೆಗಳು, ಜಲಜೀವನ್ ಮಿಷನ್‌ನವರು ಕಂಡು ಹಿಡಿದ ಇನ್ನುಳಿದ 5 ಮನೆಗಳು ಮಾತ್ರ ಯಾರ ಕಣ್ಣಿಗೂ ಕಂಡಿಲ್ಲ. ಜಲಜೀವನ್ ಯೋಜನೆ ಆರಂಭ ಗೊಂಡಿದ್ದು 2020-21ರಲ್ಲಿ ಇರುವ 3 ಮನೆಗಳ ಬದಲಿಗೆ 8 ಮನೆಗಳು ಎಂದ ಇಲಾಖೆ, ಆ ಮನೆಗಳಿಗೆ ನೀರು ಕೊಡಬೇಕಿತ್ತು.

ಕೊಳವೆ ಹಾಕಿದ್ದಾರೋ ಇಲ್ಲವೋ ಯಾರಿಗೂ ಗೊತ್ತಿಲ್ಲ. ಓವರ್‌ ಹೆಡ್ ಟ್ಯಾಂಕ್ ನಿರ್ಮಿಸಿ ಗ್ರಾಮದ 3 ಮನೆಗಳಿಗೆ ನಲ್ಲಿ ಹಾಕಿ ಹೋದ ಅಧಿಕಾರಿಗಳು 4 ವರ್ಷಗಳಾದರೂ ಗ್ರಾಮದತ್ತ ಸುಳಿಯಲಿಲ್ಲ. ಆ ನಲ್ಲಿಗಳು ನೀರನ್ನೇ ಕಾಣದೆ ತುಕ್ಕು ಹಿಡಿದು ತಾಲ್ಲೂಕಿನ ಜಲಜೀವನ್ ಯೋಜನೆಯ ನಿಜ ಬಣ್ಣವನ್ನು ಹೊರಜಗತ್ತಿಗೆ ಇಂದಿಗೂ ಸಾರುತ್ತಲೇ ಇವೆ.

ಜೆಜೆಎಂನ ಮನೆ ಮನೆಗೆ ಗಂಗೆ ಯೋಜನೆಯ ಕಾಮಗಾರಿ ಮೊತ್ತ 11.57 ಲಕ್ಷ ರೂ. ಇದ್ದು, ಇಲಾಖೆ ಗುತ್ತಿಗೆದಾರರಿಗೆ ಹೆಚ್ಚುವರಿ ಕೆಲಸ ಸೇರಿಸಿ 12 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು 2021ರಲ್ಲೇ ಪಾವತಿಸಿದೆ ಎನ್ನಲಾಗಿದೆ. ನೀರೇ ಇಲ್ಲದಿದ್ದರೂ ಗುತ್ತಿಗೆದಾರರಿಗೆ ಹಣ ಪಾವತಿಸಿರುವುದು ಗ್ರಾಸವಾಗಿದೆ.

3 ಮನೆಗಳ ಬದಲು 8 ಮನೆಗಳಿವೆ ಎಂದಿರುವುದು ಹಾಗೂ ಕಾಮಗಾರಿಯ ಬಿಲ್ ಪಾವತಿಸಿ 4 ವರ್ಷವಾದರೂ ನೀರಿನ ಸಂಪರ್ಕ ಕಲ್ಪಿಸದಿ ರುವುದು ಇದೀಗ ನನ್ನ ಗಮನಕ್ಕೆ ಬಂದಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಕಾರಿಗಳಿಗೆ ವರದಿ ಸಲ್ಲಿಸುತ್ತೇನೆ.
ಜೆರಾಲ್ಡ್ ರಾಜೇಶ, ಇಒ

ಗ್ರಾಮಕ್ಕೆ ಭೇಟಿ ನೀಡಿ ಜಲಜೀವನ್ ಯೋಜನೆಯ ಕಾಮಗಾರಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇನೆ.
-ದರ್ಶನ್, ಶಾಸಕ

ನಾನು ನಂಜನಗೂಡಿನ ಜಲಜೀವನ್‌ ಯೋಜನೆಯ ಜವಾಬ್ದಾರಿ ಸ್ವೀಕರಿಸಿ ಕೇವಲ 2 ತಿಂಗಳುಗಳಾಗಿವೆ.ನೀರು ಹರಿಯದೆ ನಲ್ಲಿಗಳು ತುಕ್ಕು ಹಿಡಿದಿರಬಹುದು. ಅವುಗಳನ್ನು ಬದಲಾಯಿಸಿ ವಾರದೊಳಗೆ ನೀರು ತಲುಪಿಸಲು ಪ್ರಯತ್ನಿಸುವೆ.

-ಶಿವಕುಮಾರ, ಎಇಇ, ಜೆಜೆಎಂ

ಗ್ರಾಮದಲ್ಲಿರುವುದು ಮೂರೇ ಮನೆಗಳು, ಆ ಗ್ರಾಮದಲ್ಲಿ ನೀರಿದೆ. ಆದರೆ ಜಲಜೀವನ್ ಮಿಷನ್‌ ಯೋಜನೆಯ ಮನೆ ಮನೆಗೆ ಗಂಗೆಯ ಸಂಪರ್ಕ ಮಾತ್ರ ಈವರೆಗೂ ನೀಡಿಲ್ಲ.

-ಹೇಮಾವತಿ, ಪಿಡಿಒ, ದುಗ್ಗಹಳ್ಳಿ

ಕಂದಾಯ ದಾಖಲೆಯಲ್ಲೂ ಮಂಗಳೂರು ಗ್ರಾಮದಲ್ಲಿರುವುದು ಮೂರೇ ಮನೆಗಳು.

-ಪ್ರಕಾಶ, ರಾಜಸ್ವ ನಿರೀಕ್ಷಕ, ಹುಲ್ಲಹಳ್ಳಿ

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

37 mins ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

45 mins ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

56 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

1 hour ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

1 hour ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

2 hours ago