Andolana originals

ನೀರಿನ ಸಂಪರ್ಕವೇ ಇಲ್ಲ; ಬಿಲ್ ಪಾವತಿ!

ನಂ.ಗೂಡು ತಾಲ್ಲೂಕಿನ ದುಗ್ಗಹಳ್ಳಿ ಗ್ರಾಪಂನ ಮಂಗಳೂರಿನಲ್ಲಿ ಪ್ರಕರಣ

• ಶ್ರೀಧರ ಆರ್ ಭಟ್
ನಂಜನಗೂಡು: ಜಲಜೀವನ್ ಯೋಜನೆ ಮಂಜೂರಾಗಿ ನಾಲ್ಕು ವರ್ಷಗಳು ಕಳೆದರೂ ಗ್ರಾಮಕ ಹನಿ ನೀರೂ ಬಂದಿಲ್ಲ. ಹಾಗಂತ ಕಾಮಗಾರಿಯ ಹಣವೂ ಇಲಾಖೆಯಲ್ಲಿ ಇಲ್ಲ. ಇಂಥ ಸ್ಥಿತಿ ತಾಲ್ಲೂಕಿನ ದುಗ್ಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಗಳೂರು ಗ್ರಾಮದಲ್ಲಿ ನಿರ್ಮಾಣವಾಗಿದೆ.

ಕಂದಾಯ ಇಲಾಖೆ ಹಾಗೂ ತಾಪಂ ಲೆಕ್ಕದಲ್ಲಿ ಕೇವಲ 3 ಮನೆಗಳಿರುವ ತಾಲ್ಲೂಕಿನ ಅತ್ಯಂತ ಪುಟ್ಟ ಗ್ರಾಮ ಮಂಗಳೂರು, ಸರ್ಕಾರಿ ದಾಖಲೆಗಳ ಪ್ರಕಾರ ಈ ಗ್ರಾಮದಲ್ಲಿ ರುವುದು ಮೂರೇ ಮನೆಗಳು. ಆದರೆ ಜಲಜೀವನ ಯೋಜನೆಯ ಪ್ರಕಾರ ಗ್ರಾಮದಲ್ಲಿರುವುದು 8 ಮನೆಗಳು, ಜಲಜೀವನ್ ಮಿಷನ್‌ನವರು ಕಂಡು ಹಿಡಿದ ಇನ್ನುಳಿದ 5 ಮನೆಗಳು ಮಾತ್ರ ಯಾರ ಕಣ್ಣಿಗೂ ಕಂಡಿಲ್ಲ. ಜಲಜೀವನ್ ಯೋಜನೆ ಆರಂಭ ಗೊಂಡಿದ್ದು 2020-21ರಲ್ಲಿ ಇರುವ 3 ಮನೆಗಳ ಬದಲಿಗೆ 8 ಮನೆಗಳು ಎಂದ ಇಲಾಖೆ, ಆ ಮನೆಗಳಿಗೆ ನೀರು ಕೊಡಬೇಕಿತ್ತು.

ಕೊಳವೆ ಹಾಕಿದ್ದಾರೋ ಇಲ್ಲವೋ ಯಾರಿಗೂ ಗೊತ್ತಿಲ್ಲ. ಓವರ್‌ ಹೆಡ್ ಟ್ಯಾಂಕ್ ನಿರ್ಮಿಸಿ ಗ್ರಾಮದ 3 ಮನೆಗಳಿಗೆ ನಲ್ಲಿ ಹಾಕಿ ಹೋದ ಅಧಿಕಾರಿಗಳು 4 ವರ್ಷಗಳಾದರೂ ಗ್ರಾಮದತ್ತ ಸುಳಿಯಲಿಲ್ಲ. ಆ ನಲ್ಲಿಗಳು ನೀರನ್ನೇ ಕಾಣದೆ ತುಕ್ಕು ಹಿಡಿದು ತಾಲ್ಲೂಕಿನ ಜಲಜೀವನ್ ಯೋಜನೆಯ ನಿಜ ಬಣ್ಣವನ್ನು ಹೊರಜಗತ್ತಿಗೆ ಇಂದಿಗೂ ಸಾರುತ್ತಲೇ ಇವೆ.

ಜೆಜೆಎಂನ ಮನೆ ಮನೆಗೆ ಗಂಗೆ ಯೋಜನೆಯ ಕಾಮಗಾರಿ ಮೊತ್ತ 11.57 ಲಕ್ಷ ರೂ. ಇದ್ದು, ಇಲಾಖೆ ಗುತ್ತಿಗೆದಾರರಿಗೆ ಹೆಚ್ಚುವರಿ ಕೆಲಸ ಸೇರಿಸಿ 12 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು 2021ರಲ್ಲೇ ಪಾವತಿಸಿದೆ ಎನ್ನಲಾಗಿದೆ. ನೀರೇ ಇಲ್ಲದಿದ್ದರೂ ಗುತ್ತಿಗೆದಾರರಿಗೆ ಹಣ ಪಾವತಿಸಿರುವುದು ಗ್ರಾಸವಾಗಿದೆ.

3 ಮನೆಗಳ ಬದಲು 8 ಮನೆಗಳಿವೆ ಎಂದಿರುವುದು ಹಾಗೂ ಕಾಮಗಾರಿಯ ಬಿಲ್ ಪಾವತಿಸಿ 4 ವರ್ಷವಾದರೂ ನೀರಿನ ಸಂಪರ್ಕ ಕಲ್ಪಿಸದಿ ರುವುದು ಇದೀಗ ನನ್ನ ಗಮನಕ್ಕೆ ಬಂದಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಕಾರಿಗಳಿಗೆ ವರದಿ ಸಲ್ಲಿಸುತ್ತೇನೆ.
ಜೆರಾಲ್ಡ್ ರಾಜೇಶ, ಇಒ

ಗ್ರಾಮಕ್ಕೆ ಭೇಟಿ ನೀಡಿ ಜಲಜೀವನ್ ಯೋಜನೆಯ ಕಾಮಗಾರಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇನೆ.
-ದರ್ಶನ್, ಶಾಸಕ

ನಾನು ನಂಜನಗೂಡಿನ ಜಲಜೀವನ್‌ ಯೋಜನೆಯ ಜವಾಬ್ದಾರಿ ಸ್ವೀಕರಿಸಿ ಕೇವಲ 2 ತಿಂಗಳುಗಳಾಗಿವೆ.ನೀರು ಹರಿಯದೆ ನಲ್ಲಿಗಳು ತುಕ್ಕು ಹಿಡಿದಿರಬಹುದು. ಅವುಗಳನ್ನು ಬದಲಾಯಿಸಿ ವಾರದೊಳಗೆ ನೀರು ತಲುಪಿಸಲು ಪ್ರಯತ್ನಿಸುವೆ.

-ಶಿವಕುಮಾರ, ಎಇಇ, ಜೆಜೆಎಂ

ಗ್ರಾಮದಲ್ಲಿರುವುದು ಮೂರೇ ಮನೆಗಳು, ಆ ಗ್ರಾಮದಲ್ಲಿ ನೀರಿದೆ. ಆದರೆ ಜಲಜೀವನ್ ಮಿಷನ್‌ ಯೋಜನೆಯ ಮನೆ ಮನೆಗೆ ಗಂಗೆಯ ಸಂಪರ್ಕ ಮಾತ್ರ ಈವರೆಗೂ ನೀಡಿಲ್ಲ.

-ಹೇಮಾವತಿ, ಪಿಡಿಒ, ದುಗ್ಗಹಳ್ಳಿ

ಕಂದಾಯ ದಾಖಲೆಯಲ್ಲೂ ಮಂಗಳೂರು ಗ್ರಾಮದಲ್ಲಿರುವುದು ಮೂರೇ ಮನೆಗಳು.

-ಪ್ರಕಾಶ, ರಾಜಸ್ವ ನಿರೀಕ್ಷಕ, ಹುಲ್ಲಹಳ್ಳಿ

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago