Andolana originals

ಓದುಗರ ಪತ್ರ: ನಟ್ಟು -ಬೋಲ್ಟು ಭಾಷೆ ಸಲ್ಲದು

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,  ಸಮಾರಂಭಕ್ಕೆ ಚಲನಚಿತ್ರೋದ್ಯಮದ ಹಲವು ಪ್ರಮುಖರೇ ಗೈರಾಗಿರುವ ಕುರಿತು ಕೋಪದಿಂದಲೇ ಮಾತನಾಡಿರುವುದು ಸರಿಯಷ್ಟೇ. ಆದರೆ,  ಚಿತ್ರರಂಗದ ಕುರಿತು ಮಾತನಾಡುವಾಗ  ನಟ್ಟು-ಬೋಲ್ಟು ಪದ ಬಳಕೆ ಮಾಡಿರುವುದು ಅಷ್ಟು ಸೂಕ್ತವಲ್ಲ ಅನಿಸುತ್ತದೆ.

ಕನ್ನಡ ಚಲನಚಿತ್ರರಂಗ ಸಂಕಷ್ಟದಲ್ಲಿದ್ದಾಗ ಸರ್ಕಾರ ಸಾಕಷ್ಟು ಬಾರಿ ನೆರವು ನೀಡಿದೆ. ಕನ್ನಡ ಚಲನಚಿತ್ರರಂಗದ ಬೆಳವಣಿಗೆಗೆ ಸಹಾಯಸ್ತ ಚಾಚಿದೆ. ಅಲ್ಲದೆ ಚಿತ್ರರಂಗಕ್ಕೆ ಅನುಕೂಲವಾಗುವ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಚಿತ್ರೋದ್ಯಮ ಸಂಕಷ್ಟದಲ್ಲಿದ್ದಾಗ ಒಟ್ಟಾಗಿ ಬಂದು ಸರ್ಕಾರದ ಬಳಿ ನೆರವು ಕೇಳುವ ಚಿತ್ರರಂಗದ ದಿಗ್ಗಜರೆಲ್ಲರು, ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ  ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಿರುವುದು ಬೇಸರ   ತರಿಸುವ ಸಂಗತಿ. ಈ ಹಿಂದೆ ಡಾ.ರಾಜ್‌ಕುಮಾರ್ ಅವರು ಕನ್ನಡ ನಾಡು,  ನುಡಿಯ ಬಗ್ಗೆ ವಿಶೇಷ ಒಲವು ಹೊಂದಿದ್ದರು. ಕನ್ನಡ ಪರ ಚಳವಳಿಗಳಲ್ಲಿ ಸರ್ಕಾರದೊಂದಿಗೆ ಕೈಜೋಡಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಸರ್ಕಾರದ ಸಹಾಯಧನ ಬೇಕು, ಕನ್ನಡ ಚಲನ ಚಿತ್ರಗಳಿಗೆ ಸಬ್ಸಿಡಿ ಬೇಕು, ಸರ್ಕಾರದ ವತಿಯಿಂದ ಫಿಲಂ ಸಿಟಿ ನಿರ್ಮಾಣವಾಗಬೇಕೇ ಹೊರತು , ಸರ್ಕಾರ ಆಯೋಜಿಸುವ ಕಾರ್ಯಕ್ರಮ,  ಕನ ಡ ಹೋರಾಟಗಳ ಪರ ಚಿತ್ರರಂಗ ನಿಲ್ಲುತ್ತಿಲ್ಲ. ಕನ ಡ ಚಿತ್ರೋದ್ಯಮ ಬೆಳೆದಿರುವುದೇ ಸರ್ಕಾರದ ನೆರವಿನಿಂದ ಹಾಗೂ ಚಿತ್ರ ರಸಿಕರ ಪ್ರೀತಿಯಿಂದ.  ಈ ಸತ್ಯವನ್ನು ಕನ ಡ ಚಿತ್ರೋದ್ಯಮದ ಎಲ್ಲರೂ ನೆನಪಿಟ್ಟುಕೊಂಡು ಕನ್ನಡ ನಾಡು, ನುಡಿ ಹಾಗೂ ಕನ್ನಡ  ಚಿತ್ರರಂಗದ  ಬೆಳವಣಿಗೆಗೆ  ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ. ಈ ನಿಟ್ಟಿನಲ್ಲಿ ಡಿಕೆಶಿಯವರು ಕೋಪಗೊಂಡಿದ್ದರಲ್ಲಿ ಅರ್ಥವಿದೆ. ಆದರೆ ನಟ್ಟು-ಬೋಲ್ಟು ಪದ ಬಳಕೆ ಸಲ್ಲದು.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

27 mins ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

4 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

4 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

4 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

4 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

4 hours ago