ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾರಂಭಕ್ಕೆ ಚಲನಚಿತ್ರೋದ್ಯಮದ ಹಲವು ಪ್ರಮುಖರೇ ಗೈರಾಗಿರುವ ಕುರಿತು ಕೋಪದಿಂದಲೇ ಮಾತನಾಡಿರುವುದು ಸರಿಯಷ್ಟೇ. ಆದರೆ, ಚಿತ್ರರಂಗದ ಕುರಿತು ಮಾತನಾಡುವಾಗ ನಟ್ಟು-ಬೋಲ್ಟು ಪದ ಬಳಕೆ ಮಾಡಿರುವುದು ಅಷ್ಟು ಸೂಕ್ತವಲ್ಲ ಅನಿಸುತ್ತದೆ.
ಕನ್ನಡ ಚಲನಚಿತ್ರರಂಗ ಸಂಕಷ್ಟದಲ್ಲಿದ್ದಾಗ ಸರ್ಕಾರ ಸಾಕಷ್ಟು ಬಾರಿ ನೆರವು ನೀಡಿದೆ. ಕನ್ನಡ ಚಲನಚಿತ್ರರಂಗದ ಬೆಳವಣಿಗೆಗೆ ಸಹಾಯಸ್ತ ಚಾಚಿದೆ. ಅಲ್ಲದೆ ಚಿತ್ರರಂಗಕ್ಕೆ ಅನುಕೂಲವಾಗುವ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಚಿತ್ರೋದ್ಯಮ ಸಂಕಷ್ಟದಲ್ಲಿದ್ದಾಗ ಒಟ್ಟಾಗಿ ಬಂದು ಸರ್ಕಾರದ ಬಳಿ ನೆರವು ಕೇಳುವ ಚಿತ್ರರಂಗದ ದಿಗ್ಗಜರೆಲ್ಲರು, ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಿರುವುದು ಬೇಸರ ತರಿಸುವ ಸಂಗತಿ. ಈ ಹಿಂದೆ ಡಾ.ರಾಜ್ಕುಮಾರ್ ಅವರು ಕನ್ನಡ ನಾಡು, ನುಡಿಯ ಬಗ್ಗೆ ವಿಶೇಷ ಒಲವು ಹೊಂದಿದ್ದರು. ಕನ್ನಡ ಪರ ಚಳವಳಿಗಳಲ್ಲಿ ಸರ್ಕಾರದೊಂದಿಗೆ ಕೈಜೋಡಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಸರ್ಕಾರದ ಸಹಾಯಧನ ಬೇಕು, ಕನ್ನಡ ಚಲನ ಚಿತ್ರಗಳಿಗೆ ಸಬ್ಸಿಡಿ ಬೇಕು, ಸರ್ಕಾರದ ವತಿಯಿಂದ ಫಿಲಂ ಸಿಟಿ ನಿರ್ಮಾಣವಾಗಬೇಕೇ ಹೊರತು , ಸರ್ಕಾರ ಆಯೋಜಿಸುವ ಕಾರ್ಯಕ್ರಮ, ಕನ ಡ ಹೋರಾಟಗಳ ಪರ ಚಿತ್ರರಂಗ ನಿಲ್ಲುತ್ತಿಲ್ಲ. ಕನ ಡ ಚಿತ್ರೋದ್ಯಮ ಬೆಳೆದಿರುವುದೇ ಸರ್ಕಾರದ ನೆರವಿನಿಂದ ಹಾಗೂ ಚಿತ್ರ ರಸಿಕರ ಪ್ರೀತಿಯಿಂದ. ಈ ಸತ್ಯವನ್ನು ಕನ ಡ ಚಿತ್ರೋದ್ಯಮದ ಎಲ್ಲರೂ ನೆನಪಿಟ್ಟುಕೊಂಡು ಕನ್ನಡ ನಾಡು, ನುಡಿ ಹಾಗೂ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ. ಈ ನಿಟ್ಟಿನಲ್ಲಿ ಡಿಕೆಶಿಯವರು ಕೋಪಗೊಂಡಿದ್ದರಲ್ಲಿ ಅರ್ಥವಿದೆ. ಆದರೆ ನಟ್ಟು-ಬೋಲ್ಟು ಪದ ಬಳಕೆ ಸಲ್ಲದು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…