Andolana originals

ಓದುಗರ ಪತ್ರ: ನಟ್ಟು -ಬೋಲ್ಟು ಭಾಷೆ ಸಲ್ಲದು

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,  ಸಮಾರಂಭಕ್ಕೆ ಚಲನಚಿತ್ರೋದ್ಯಮದ ಹಲವು ಪ್ರಮುಖರೇ ಗೈರಾಗಿರುವ ಕುರಿತು ಕೋಪದಿಂದಲೇ ಮಾತನಾಡಿರುವುದು ಸರಿಯಷ್ಟೇ. ಆದರೆ,  ಚಿತ್ರರಂಗದ ಕುರಿತು ಮಾತನಾಡುವಾಗ  ನಟ್ಟು-ಬೋಲ್ಟು ಪದ ಬಳಕೆ ಮಾಡಿರುವುದು ಅಷ್ಟು ಸೂಕ್ತವಲ್ಲ ಅನಿಸುತ್ತದೆ.

ಕನ್ನಡ ಚಲನಚಿತ್ರರಂಗ ಸಂಕಷ್ಟದಲ್ಲಿದ್ದಾಗ ಸರ್ಕಾರ ಸಾಕಷ್ಟು ಬಾರಿ ನೆರವು ನೀಡಿದೆ. ಕನ್ನಡ ಚಲನಚಿತ್ರರಂಗದ ಬೆಳವಣಿಗೆಗೆ ಸಹಾಯಸ್ತ ಚಾಚಿದೆ. ಅಲ್ಲದೆ ಚಿತ್ರರಂಗಕ್ಕೆ ಅನುಕೂಲವಾಗುವ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಚಿತ್ರೋದ್ಯಮ ಸಂಕಷ್ಟದಲ್ಲಿದ್ದಾಗ ಒಟ್ಟಾಗಿ ಬಂದು ಸರ್ಕಾರದ ಬಳಿ ನೆರವು ಕೇಳುವ ಚಿತ್ರರಂಗದ ದಿಗ್ಗಜರೆಲ್ಲರು, ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ  ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಿರುವುದು ಬೇಸರ   ತರಿಸುವ ಸಂಗತಿ. ಈ ಹಿಂದೆ ಡಾ.ರಾಜ್‌ಕುಮಾರ್ ಅವರು ಕನ್ನಡ ನಾಡು,  ನುಡಿಯ ಬಗ್ಗೆ ವಿಶೇಷ ಒಲವು ಹೊಂದಿದ್ದರು. ಕನ್ನಡ ಪರ ಚಳವಳಿಗಳಲ್ಲಿ ಸರ್ಕಾರದೊಂದಿಗೆ ಕೈಜೋಡಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಸರ್ಕಾರದ ಸಹಾಯಧನ ಬೇಕು, ಕನ್ನಡ ಚಲನ ಚಿತ್ರಗಳಿಗೆ ಸಬ್ಸಿಡಿ ಬೇಕು, ಸರ್ಕಾರದ ವತಿಯಿಂದ ಫಿಲಂ ಸಿಟಿ ನಿರ್ಮಾಣವಾಗಬೇಕೇ ಹೊರತು , ಸರ್ಕಾರ ಆಯೋಜಿಸುವ ಕಾರ್ಯಕ್ರಮ,  ಕನ ಡ ಹೋರಾಟಗಳ ಪರ ಚಿತ್ರರಂಗ ನಿಲ್ಲುತ್ತಿಲ್ಲ. ಕನ ಡ ಚಿತ್ರೋದ್ಯಮ ಬೆಳೆದಿರುವುದೇ ಸರ್ಕಾರದ ನೆರವಿನಿಂದ ಹಾಗೂ ಚಿತ್ರ ರಸಿಕರ ಪ್ರೀತಿಯಿಂದ.  ಈ ಸತ್ಯವನ್ನು ಕನ ಡ ಚಿತ್ರೋದ್ಯಮದ ಎಲ್ಲರೂ ನೆನಪಿಟ್ಟುಕೊಂಡು ಕನ್ನಡ ನಾಡು, ನುಡಿ ಹಾಗೂ ಕನ್ನಡ  ಚಿತ್ರರಂಗದ  ಬೆಳವಣಿಗೆಗೆ  ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ. ಈ ನಿಟ್ಟಿನಲ್ಲಿ ಡಿಕೆಶಿಯವರು ಕೋಪಗೊಂಡಿದ್ದರಲ್ಲಿ ಅರ್ಥವಿದೆ. ಆದರೆ ನಟ್ಟು-ಬೋಲ್ಟು ಪದ ಬಳಕೆ ಸಲ್ಲದು.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

13 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

13 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

14 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

15 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

15 hours ago