Andolana originals

ಅಡಕೆ ಬೆಳೆಗೆ ಕಾಡುತ್ತಿರುವ ಹಳದಿ ಎಲೆ ರೋಗ ಭಾಧೆ

29,450 ಹೆಕ್ಟೇರ್‌ ಪ್ರದೇಶದಲ್ಲಿ 529 ಹೆಕ್ಟೇರ್‌ನಲ್ಲಿ ರೋಗ ಉಲ್ಬಣ

ಮಡಿಕೇರಿ: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಕೆ ಬೆಳೆಗೆ ಮಾರಕವಾಗಿ ಕಾಡುತ್ತಿರುವ ಎಲೆಚುಕ್ಕಿ ಮತ್ತು ಹಳದಿ ಎಲೆ ರೋಗ ಕೊಡಗಿನ ಅಡಕೆ ಬೆಳೆಗಾರರನ್ನೂ ಕಾಡುತ್ತಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಅಂತರ ಬೆಳೆಯಾಗಿ, ಕೆಲವೆಡೆ ಪ್ರಮುಖ ಬೆಳೆಯಾಗಿ ಅಡಕೆ ಬೆಳೆಯಲಾಗುತ್ತಿದ್ದು, ರೋಗದ ಹಾವಳಿಯಿಂದ ಬೆಳೆಗಾರರು ತತ್ತರಿಸಿದ್ದಾರೆ. ರೋಗ ಪೀಡಿತ ಪ್ರದೇಶ ಮತ್ತು ಅಂದಾಜು ನಷ್ಟದ ಪ್ರಮಾಣವನ್ನು ಸರ್ಕಾರ ಗುರುತಿಸಿದ್ದರೂ ಈ ತನಕ ರೈತರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಕೆ ಬೆಳೆಗಾರರನ್ನು ಕಂಗಾಲು ಮಾಡಿ ರುವ ಎಲೆಚುಕ್ಕಿ ಮತ್ತು ಹಳದಿ ಎಲೆ ರೋಗ ಕೊಡಗಿನ ಅಡಕೆ ತೋಟ ಗಳಲ್ಲೂ ಕಾಣಿಸಿಕೊಂಡಿದ್ದು, ಉತ್ತಮ ಆದಾಯ ಗಳಿಸುವ ನಿರೀಕ್ಷೆ ಇಟ್ಟು ಕೊಂಡು ಅಡಕೆ ಕೃಷಿ ಮಾಡಿದ್ದ ವರಿಗೆ ಈ ಎರಡೂ ಮಾರಕ ರೋಗಗಳು ಸರಿ ಯಾದ ಹೊಡೆತವನ್ನೇ ನೀಡಿದ್ದು, ರೈತರಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲು ಕುವ ಆತಂಕ ಸೃಷ್ಟಿಯಾಗಿದೆ.

ರೋಗ ಪೀಡಿತ ಪ್ರದೇಶಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇರುವುದು ಬೆಳೆಗಾರರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ತೋಟಗಾರಿಕೆ ಇಲಾಖೆಯ ೨೦೨೨-೨೩ನೇ ಸಾಲಿನ ಅಂಕಿ ಅಂಶಗಳ ಪ್ರಕಾರ ಕೊಡಗಿನಲ್ಲಿ ೨೯,೪೫೦ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆ ಬೆಳೆಯಲಾಗುತ್ತಿದೆ. ಈ ಪೈಕಿ ೫೨೯ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಕೆ ಬೆಳೆಯಲ್ಲಿ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಸುಮಾರು ೩. ೫ ಕೋಟಿ ರೂ. ನಷ್ಟದ ಅಂದಾಜು ಮಾಡ ಲಾಗಿದೆ. ೨,೧೪೨ ಹೆಕ್ಟೇರ್ ಪ್ರದೇಶ ದಲ್ಲಿ ಹಳದಿ ಎಲೆ ರೋಗ ಕಂಡುಬಂದಿದೆ. ಇದರಿಂದಾಗಿ ಬೆಳೆಗಾರರಿಗೆ ಸುಮಾರು ೧೩. ೫ ಕೋಟಿ ರೂ. ನಷ್ಟವಾಗಿ ರುವುದಾಗಿ ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ. ಅಡಕೆಗೆ ತಗುಲಿರುವ ಎಲೆ ಚುಕ್ಕಿ ಮತ್ತು ಹಳದಿ ಎಲೆ ರೋಗದ ಬಾಧೆಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು ಮತ್ತು ಹಾನಿಗೀಡಾಗಿರುವ ಅಡಕೆ ತೋಟಗಳ ಪುನಶ್ಚೇತನಕ್ಕೆ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ, ನಷ್ಟಕ್ಕೆ ಒಳಗಾಗಿರುವ ಬೆಳೆಗಾರರಿಗೆ ಪರಿಹಾರ ನೀಡುವ ಕುರಿತು ಯಾವುದೇ ಚಿಂತನೆ ನಡೆಸದೇ ಇರುವುದು ಬೆಳೆಗಾರರ ಆಕ್ರೋಶಕ್ಕೆ ಕಾರಣವಾಗಿದೆ.

ಅಡಕೆ ಸಸಿಗಳಲ್ಲಿ ಸಸ್ಯ ಸಂರಕ್ಷಣಾ ಔಷಽ ಸಿಂಪಡಣೆ, ಕಟಾವು ಮಾಡಲು ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆಯಡಿ ಕಾರ್ಬನ್ ಫೈಬರ್ ದೋಟಿ ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ. ೪೦ರಂತೆ ೪೦ ಸಾವಿರ ರೂ. , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ ಶೇ. ೫೦ ರಂತೆ ೫೦ ಸಾವಿರ ರೂ. ಸಹಾಯಧನ ನೀಡಲಾಗುತ್ತಿದೆ.

೨೦೨೨-೨೦೨೩ ಮತ್ತು ೨೦೨೩-೨೪ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹಳದಿ ಎಲೆ ರೋಗ ಬಾಽತ ಪ್ರದೇಶಗಳಲ್ಲಿ ಅಡಕೆ ಬೆಳೆಯ ಬದಲಾಗಿ ಇತರೆ ವಾಣಿಜ್ಯ ತೋಟಗಾರಿಕೆ ಬೆಳೆಗಳಾದ ಬಾಳೆ, ತೆಂಗು, ಕಾಫಿ, ಕೋಕೋ, ಕಾಳು ಮೆಣಸು, ಜಾಯಿಕಾಯಿ, ಬೆಣ್ಣೆ ಹಣ್ಣು ಹಾಗೂ ಇತರೆ ಬೆಳೆಗಳನ್ನು ಬೆಳೆಯಲು ಆಯಾ ಬೆಳೆಗೆ ಅನುಗುಣವಾಗಿ ಶೇ. ೪೦ ರಷ್ಟು ಪ್ರತಿ ಹೆಕ್ಟೇರ್‌ಗೆ ೧೧,೯೫೨ರಿಂದ ೧,೨೩,೪೮೩ ರೂ. ತನಕ ನಾಲ್ಕು ಹೆಕ್ಟೇರ್‌ಗಳವರೆಗೆ ಸಹಾಯಧನವನ್ನು ನೀಡಲಾಗಿದೆ ಎಂದು ತೋಟಗಾರಿಕೆ ಇಲಾಖೆ ಅಂಕಿ-ಅಂಶಗಳು ಹೇಳುತ್ತವೆ

ಎಲೆಚುಕ್ಕಿ ಮತ್ತು ಹಳದಿ ಎಲೆ ರೋಗಕ್ಕೆ ಸಂಬಂಽಸಿದಂತೆ ಸರ್ಕಾರ ದೀರ್ಘಾವಽ ಪರಿಹಾರಗಳ ಬಗ್ಗೆ ಮಾತ್ರ ಚಿಂತನೆ ನಡೆಸುತ್ತಿದೆ. ಆದರೆ, ಈ ರೋಗಗಳಿಂದ ಬೆಳೆಗಾರರಿಗೆ ಆಗಿರುವ ಮತ್ತು ಆಗುತ್ತಿರುವ ನಷ್ಟಕ್ಕೆ ತಕ್ಷಣ ಪರಿಹಾರ ಕಲ್ಪಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೆಲವರಂತೂ ಜೀವನಾಧಾರವಾಗಿರುವ ತೋಟವನ್ನೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸರ್ಕಾರ ಚಿಂತಿಸಬೇಕಿದೆ.

-ಹೇಮಂತ್ ಪಾರೇರ, ಬೆಳೆಗಾರ, ಯಡವನಾಡು. ಅಡಕೆ ಬೆಳೆಯನ್ನು ಬಾಧಿಸುತ್ತಿರುವ

ಎಲೆ ಚುಕ್ಕಿ ಮತ್ತು ಹಳದಿ ಎಲೆ ರೋಗವನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು ಮತ್ತು ಹಾನಿಗೀಡಾಗಿರುವ ಅಡಕೆ ತೋಟಗಳ ಪುನಶ್ಚೇತನಕ್ಕೆ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ಪರಿಹಾರ ನೀಡುವ ಯಾವುದೇ ಯೋಜನೆಗಳು ಇಲ್ಲ.

-ಎಸ್. ಎಸ್. ಮಲ್ಲಿಕಾರ್ಜುನ್, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿ

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

49 mins ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

2 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

2 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

3 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

3 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

3 hours ago