ಮೈಸೂರು: ನಗರದ ಕಲಾಮಂದಿರ ಆವರಣದಲ್ಲಿ ಬಾಡೂಟ ಸೇವನೆಗೆ ನಿರ್ಬಂಧವಿದ್ದರೂ ದಸರಾ ಸಾಂಸ್ಕೃತಿಕ ಉಪ ಸಮಿತಿ ಸದಸ್ಯರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಅರಮನೆ, ಕಲಾಮಂದಿರ ಸೇರಿದಂತೆ ಎಲ್ಲೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಸಮಿತಿ ಅಧಿಕಾರೇತರ ಸದಸ್ಯರು ಮತ್ತು ಪದಾಧಿಕಾರಿಗಳಿಗೆ ಗುರುವಾರ ಸಮಿತಿಯ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಕಲಾಮಂದಿರದಲ್ಲಿ ಏರ್ಪಡಿಸಲಾಗಿತ್ತು.
ಸಮಿತಿ ಸದಸ್ಯರಿಗೆ ಕಲಾಮಂದಿರದ ಎಡ ಭಾಗದಲ್ಲಿರುವ ಕಿರುರಂಗದ ಮಂದಿರದ ಎದುರು ಗುರುವಾರ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಸಮಿತಿಯ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯವನ್ನು ಅಽಕಾರಿಗಳು ಆಯೋಜಿಸಿದ್ದರು. ಬಳಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಕಿರುರಂಗಮಂದಿರ ಎದುರಿನ ಮೈದಾನದಲ್ಲಿ ಪೆಂಡಾಲ್ ಹಾಕಿ ೧೦೦ಕ್ಕೂ ಹೆಚ್ಚು ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿದೆ. ಇದರ ವಿರುದ್ಧ ಇದೀಗ ಆಕ್ಷೇಪ ವ್ಯಕ್ತವಾಗಿದೆ.
ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ಸಿನ ಹಿನ್ನೆಲೆಯಲ್ಲಿ ಸಮಿತಿಯ ಸದಸ್ಯರಿಗೆ ಅಭಿನಂದನಾ ಸಮಾರಂಭದೊಂದಿಗೆ ಔತಣಕೂಟ ಏರ್ಪಡಿಸಿದ್ದು, ಎಲ್ಲರಿಗೂ ಸಸ್ಯಾಹಾರದ ಊಟದ ವ್ಯವಸ್ಥೆ ಮಾಡಲಾಗಿತ್ತು.
-ಜವರಪ್ಪ, ಅಧ್ಯಕ್ಷರು, ಸಾಂಸ್ಕೃತಿಕ ಉಪ ಸಮಿತಿ
ಕಲಾಮಂದಿರದ ಆವರಣದಲ್ಲಿ ಬಾಡೂಟ: ಕ್ರಮಕ್ಕೆ ವಿಶ್ವನಾಥ್ ಆಗ್ರಹ ಮೈಸೂರು: ಕಲಾಮಂದಿರದ ಆವರಣದಲ್ಲಿ ಬಾಡೂಟ ಮಾಡಿದವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕೈಗೊಂಡು, ತಪ್ಪಿತಸ್ಥ ಅಽಕಾರಗಳನ್ನು ಕೂಡಲೇ ಅಮಾನತ್ತು ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎ. ಎಚ್. ವಿಶ್ವನಾಥ್ ಆಗ್ರಹಿಸಿದರು. ನಗರದಲ್ಲಿ ಗುರುವಾರ ದಸರಾ ಸಾಂಸ್ಕೃತಿಕ ಸಮಿತಿಯ ಸದಸ್ಯರು, ಅಧಿಕಾರಿಗಳು ಕಲಾಮಂದಿರದ ಆವರಣದಲ್ಲಿ ಬಾಡೂಟ ಮಾಡಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದವರಿಗೂ, ಅಽಕಾರಿಗಳಿಗೂ ಬುದ್ಧಿಯಿಲ್ಲ. ಯಾರ್ಯಾದರೂ ಕಲಾಮಂದಿರದ ಆವರಣದಲ್ಲಿ ಬಾಡೂಟ ಮಾಡುತ್ತಾರಾ? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಜಿಲ್ಲಾಡಳಿತವೇ ನೇರ ಹೊಣೆ ಎಂದರು. ಮೈಸೂರು ಅಂದರೇನೇ ಸಂಸ್ಕೃತಿಗೆ ಹೆಸರುವಾಸಿ. ಅಂತಹ ನಾಗರಿಕ ಸಂಸ್ಕೃತಿಯ ಜನ ಇರುವ ಸಾಂಸ್ಕೃತಿಕ ನಗರಿಯ ಕಲಾಮಂದಿರದ ಆವರಣದಲ್ಲಿ ಬಾಡೂಟ ತಿಂದಿದ್ದೀರಾ? ನಿಮ್ಮ ಯೋಗ್ಯತೆಗೆ ಬೆಂಕಿ ಹಾಕ ಎಂದು ವಾಗ್ದಾಳಿ ನಡೆಸಿದರು.
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…