Andolana originals

ಕಲಾಮಂದಿರದಲ್ಲಿ ಭರ್ಜರಿ ಬಾಡೂಟಕ್ಕೆ ಆಕ್ಷೇಪ

ಮೈಸೂರು: ನಗರದ ಕಲಾಮಂದಿರ ಆವರಣದಲ್ಲಿ ಬಾಡೂಟ ಸೇವನೆಗೆ ನಿರ್ಬಂಧವಿದ್ದರೂ ದಸರಾ ಸಾಂಸ್ಕೃತಿಕ ಉಪ ಸಮಿತಿ ಸದಸ್ಯರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಅರಮನೆ, ಕಲಾಮಂದಿರ ಸೇರಿದಂತೆ ಎಲ್ಲೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಸಮಿತಿ ಅಧಿಕಾರೇತರ ಸದಸ್ಯರು ಮತ್ತು ಪದಾಧಿಕಾರಿಗಳಿಗೆ ಗುರುವಾರ ಸಮಿತಿಯ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಕಲಾಮಂದಿರದಲ್ಲಿ ಏರ್ಪಡಿಸಲಾಗಿತ್ತು.

ಸಮಿತಿ ಸದಸ್ಯರಿಗೆ ಕಲಾಮಂದಿರದ ಎಡ ಭಾಗದಲ್ಲಿರುವ ಕಿರುರಂಗದ ಮಂದಿರದ ಎದುರು ಗುರುವಾರ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಸಮಿತಿಯ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯವನ್ನು ಅಽಕಾರಿಗಳು ಆಯೋಜಿಸಿದ್ದರು. ಬಳಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಕಿರುರಂಗಮಂದಿರ ಎದುರಿನ ಮೈದಾನದಲ್ಲಿ ಪೆಂಡಾಲ್ ಹಾಕಿ ೧೦೦ಕ್ಕೂ ಹೆಚ್ಚು ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿದೆ. ಇದರ ವಿರುದ್ಧ ಇದೀಗ ಆಕ್ಷೇಪ ವ್ಯಕ್ತವಾಗಿದೆ.

ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ಸಿನ ಹಿನ್ನೆಲೆಯಲ್ಲಿ ಸಮಿತಿಯ ಸದಸ್ಯರಿಗೆ ಅಭಿನಂದನಾ ಸಮಾರಂಭದೊಂದಿಗೆ ಔತಣಕೂಟ ಏರ್ಪಡಿಸಿದ್ದು, ಎಲ್ಲರಿಗೂ ಸಸ್ಯಾಹಾರದ ಊಟದ ವ್ಯವಸ್ಥೆ ಮಾಡಲಾಗಿತ್ತು.
-ಜವರಪ್ಪ, ಅಧ್ಯಕ್ಷರು, ಸಾಂಸ್ಕೃತಿಕ ಉಪ ಸಮಿತಿ

ಕಲಾಮಂದಿರದ ಆವರಣದಲ್ಲಿ ಬಾಡೂಟ: ಕ್ರಮಕ್ಕೆ ವಿಶ್ವನಾಥ್ ಆಗ್ರಹ ಮೈಸೂರು: ಕಲಾಮಂದಿರದ ಆವರಣದಲ್ಲಿ ಬಾಡೂಟ ಮಾಡಿದವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕೈಗೊಂಡು, ತಪ್ಪಿತಸ್ಥ ಅಽಕಾರಗಳನ್ನು ಕೂಡಲೇ ಅಮಾನತ್ತು ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎ. ಎಚ್. ವಿಶ್ವನಾಥ್ ಆಗ್ರಹಿಸಿದರು. ನಗರದಲ್ಲಿ ಗುರುವಾರ ದಸರಾ ಸಾಂಸ್ಕೃತಿಕ ಸಮಿತಿಯ ಸದಸ್ಯರು, ಅಧಿಕಾರಿಗಳು ಕಲಾಮಂದಿರದ ಆವರಣದಲ್ಲಿ ಬಾಡೂಟ ಮಾಡಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದವರಿಗೂ, ಅಽಕಾರಿಗಳಿಗೂ ಬುದ್ಧಿಯಿಲ್ಲ. ಯಾರ‍್ಯಾದರೂ ಕಲಾಮಂದಿರದ ಆವರಣದಲ್ಲಿ ಬಾಡೂಟ ಮಾಡುತ್ತಾರಾ? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಜಿಲ್ಲಾಡಳಿತವೇ ನೇರ ಹೊಣೆ ಎಂದರು. ಮೈಸೂರು ಅಂದರೇನೇ ಸಂಸ್ಕೃತಿಗೆ ಹೆಸರುವಾಸಿ. ಅಂತಹ ನಾಗರಿಕ ಸಂಸ್ಕೃತಿಯ ಜನ ಇರುವ ಸಾಂಸ್ಕೃತಿಕ ನಗರಿಯ ಕಲಾಮಂದಿರದ ಆವರಣದಲ್ಲಿ ಬಾಡೂಟ ತಿಂದಿದ್ದೀರಾ? ನಿಮ್ಮ ಯೋಗ್ಯತೆಗೆ ಬೆಂಕಿ ಹಾಕ ಎಂದು ವಾಗ್ದಾಳಿ ನಡೆಸಿದರು.

 

 

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago