ಭೇರ್ಯ ಮಹೇಶ್
ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ
ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಉತ್ತಮ ಗೊಳಿಸಲು ‘ಓದು ಕರ್ನಾಟಕ’ ಪರಿಹಾರ ಬೋಧನೆ ಕಾರ್ಯಕ್ರಮವನ್ನು ಕೆ.ಆರ್ .ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಡೆಸಲಾಗುತ್ತಿದೆ.
ರಾಜ್ಯ ಸರ್ಕಾರವು ಕಲಿಕೆಯಲ್ಲಿ ಹಿಂದೆ ಬಿದ್ದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ತರಬೇತಿ ನೀಡಿ ಕಲಿಕಾ ಅಂತರ ಸರಿದೂಗಿ ಸುವುದು ಇದರ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ೧೦೩ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು ಹಾಗೂ ೧೧೧ ಹಿರಿಯ ಪ್ರಾಥಮಿಕಮ ಶಾಲೆಗಳಲ್ಲಿ ಓದು ಕರ್ನಾಟಕದ ಕಲಿಕೆಯನ್ನು ೧ರಿಂದ ೫ನೇ ತರಗತಿ ಮಕ್ಕಳಿಗೆ ಕಲಿಕಾ ಸಾಮರ್ಥ್ಯದ ಅನುಗುಣವಾಗಿ ಕಲಿಕಾ ಬೋಧನೆ ಮಾಡಲಾಗುತ್ತಿದೆ.
ಓದು ಕರ್ನಾಟಕದ ಬಗ್ಗೆ ಕೆ.ಆರ್.ನಗರ ತಾಲ್ಲೂಕಿನ ಅಡಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ ತ ಮುಖ್ಯಶಿಕ್ಷಕ ಬ್ಯಾಡರಹಳ್ಳಿ ಭಾಸ್ಕರ್ ಮಕ್ಕಳಿಗೆ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಮೂಡಿಸುವ ಉದ್ದೇಶವನ್ನು ಹೊಂದಿ ಅಚ್ಚುಕಟ್ಟಾಗಿ ಬೋಧನೆ ಮಾಡುತ್ತಾ ಬಂದಿದ್ದಾರೆ.
ಕಲಿಕೆಯ ಪಠ್ಯದ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಸರಳ ಕನ್ನಡ ಸಾಮಗ್ರಿಯು ವರ್ಣಮಾಲೆ, ಕಾಗುಣಿತ, ಒತ್ತಕ್ಷರ, ಪದ, ವಾಕ್ಯ ರಚನೆ, ಕಥೆ ಓದುವಿಕೆ ವಿಭಾಗಗಳನ್ನು ಒಳಗೊಂಡಿದೆ. ಕಲಿಕಾ ಮಟ್ಟ ಗುರುತಿಸಿ ಬೋಧನೆ, ಪ್ರತ್ಯೇಕ ವಿದ್ಯಾರ್ಥಿಗಳ ಗುಂಪು ರಚಿಸಿ ಬೋಧನೆ ನಡೆಯಲಿದೆ. ಅಂಕಿ ಪರಿಚಯ, ಗಣಿತದ ಮೂಲ ಕ್ರಿಯೆಗಳು (ಸಂಕಲನ, ವ್ಯವಕಲನ, ಗುಣಕಾರ, ಭಾಗಾಕಾರ), ಏರಿಕೆ ಮತ್ತು ಇಳಿಕೆ ಪದ್ಧತಿ ಮೊದಲಾದ ಘಟಕಗಳು ಸರಳ ಗಣಿತ ಸಾಮಗ್ರಿಯಲ್ಲಿವೆ. ವಿದ್ಯಾರ್ಥಿಗಳಿಗೆ ಗಣಿತದ ಮೂಲಾಂಶಗಳನ್ನು ಹಂತಹಂತವಾಗಿ ಪರಿಚಯಿಸುವ ವಿಧಾನಗಳು ಇವೆ ಎಂದು ತಿಳಿಸಿದರು.
” ಕಲಿಕೆಯಲ್ಲಿ ಹಿಂದೆ ಬಿದ್ದಿರುವವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಿಸಿ, ಕಲಿಕಾ ಅಂತರ ನಿವಾರಿಸಿ ಓದಿನೆಡೆಗೆ ಪ್ರೋತ್ಸಾಹಿಸುವುದಕ್ಕಾಗಿಯೇ ಓದು ಕರ್ನಾಟಕ ಕಾರ್ಯಕ್ರಮ ರೂಪಿಸಲಾಗಿದೆ.ಮೊದಲ ಹಂತದಲ್ಲಿ ಸಿಆರ್ಪಿಗಳಿಗೆ ಈ ಪರಿಹಾರ ಬೋಧನೆ ಕ್ರಮ ತಿಳಿಸಲಾಗಿದ್ದು, ಅವರು ಶಾಲೆಗಳ ಶಿಕ್ಷಕರಿಗೆ ಕಲಿಸಿಕೊಡುತ್ತಾರೆ. ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡುತ್ತಾರೆ.”
-ಆರ್.ಕೃಷ್ಣಪ್ಪ, ಬಿಇಒ
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…